ವಾಣಿ ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಪತ್ರಿಕಾ ಮಾಹಿತಿ
೬ ನೇ ಸಾಲು: ೬ ನೇ ಸಾಲು:


== ಚಿತ್ರರಂಗಕ್ಕೆ ಪ್ರವೇಶ ==
== ಚಿತ್ರರಂಗಕ್ಕೆ ಪ್ರವೇಶ ==
ಇಂಡೋ-ಬೆಲ್ಜಿಯಂ ಛೇಂಬರ್ ಆಫ್ ಕಾಮರ್ಸ್‌ನಲ್ಲಿ ಉನ್ನತ ಹುದ್ದೆಯಲ್ಲಿದ್ದ ಜಯರಾಂ ಅವರೊಡನೆ ನಡೆದ ವಿವಾಹ ಇವರ ಜೀವನದಲ್ಲಿ ಮಹತ್ತರ ತಿರುವು ತಂದಿತು.ಸ್ವತಃ [[ಸಿತಾರ್]] ವಾದಕರಾಗಿದ್ದ ಜಯರಾಂ ಪತ್ನಿಯ ಪ್ರತಿಭೆಗೆ ನೀರೆರೆದರು.ಪಟಿಯಾಲಾ ಘರಾಣಾದ ಅಬ್ದುಲ್ ರೆಹಮಾನ್ ಬಳಿ [[ಹಿಂದೂಸ್ತಾನಿ ಸಂಗೀತ]] ಕಲಿಸಿದರು.ಇಲ್ಲಿ ಇವರ ಕಂಠಸಿರಿಗೆ ಮಾರುಹೋದ [[ಮರಾಠಿ]] ಚಿತ್ರ ನಿರ್ದೇಶಕ ವಸಂತ ದೇಸಾಯಿ ತಮ್ಮ ಚಿತ್ರ ’ಅಮ್ಮ ತಾಯಿ ಗೋಡೆ’ಯಲ್ಲಿ ಹಾಡುವ ಅವಕಾಶ ಕಲ್ಪಿಸಿಕೊಟ್ಟರು.ಈ ಚಿತ್ರದ ಗಾಯನವನ್ನು ಮೆಚ್ಚಿಕೊಂಡ [[ಹಿಂದಿ]] ಚಿತ್ರ ನಿರ್ದೇಶಕ [[ಹೃಷಿಕೇಶ್ ಮುಖರ್ಜಿ]] ತಮ್ಮ ’ಗುಡ್ಡಿ ’ ಚಿತ್ರದಲ್ಲಿ ಹಾಡಿಸಿದರು.ಈ ಚಿತ್ರದ "ಬೋಲ್‌ರೇ ಪಪ್ಪಿ ಹರಾ" ಹಾಡು ದೇಶಾದ್ಯಂತ ಸಂಚಲನೆಯನ್ನು ಉಂಟುಮಾಡಿ ,ವಾಣಿ ಜಯರಾಂ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು.



== ಕನ್ನಡ ಚಿತ್ರರಂಗದಲ್ಲಿ ==
== ಕನ್ನಡ ಚಿತ್ರರಂಗದಲ್ಲಿ ==

೧೯:೧೫, ೧೨ ನವೆಂಬರ್ ೨೦೦೭ ನಂತೆ ಪರಿಷ್ಕರಣೆ

ಚಿತ್ರ:VaniJayaram01.jpg
ವಾಣಿ ಜಯರಾಂ

ವಾಣಿ ಜಯರಾಂ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ.ಇವರ ಜನನ ೧೯೪೫ನವೆಂಬರ್ ೩೦ರಂದು ವೆಲ್ಲೂರಿನ ಇಡಂಗು ಗ್ರಾಮದಲ್ಲಿ ಆಯಿತು.

ಹಿನ್ನೆಲೆ

ವಾಣಿಯವರ ತಾಯಿ ಪ್ರಸಿದ್ಧ ಸಂಗೀತ ವಿದ್ವಾಂಸ ರಂಗ ರಾಮಾನುಜ ಅಯ್ಯಂಗಾರರ ಶಿಷ್ಯೆ.ಹೀಗಾಗಿ ಇವರಿಗೆ ಚಿಕ್ಕಂದಿನಿಂದಲೇ ಸಂಗೀತಾಸಕ್ತಿ ಇತ್ತು.ತಮ್ಮ ಐದನೇ ವಯಸ್ಸಿಗೆ ಕಾಡಲೂರು ಶ್ರೀನಿವಾಸ ಅಯ್ಯಂಗಾರರ ಬಳಿ ಸಂಗೀತಾಭ್ಯಾಸ ಶುರು ಮಾಡಿದರು.ಏಳನೇ ವಯಸ್ಸಿಗೆ ದೇಶಿಕಾಚಾರ್ ಕೃತಿಗಳನ್ನು ಸ್ಫುಟವಾಗಿ ,ಸರಾಗವಾಗಿ ಹಾಡುತ್ತಿದ್ದರು.ತಿರುವನಂತಪುರದಲ್ಲಿ ೩ ಗಂಟೆಗಳ ಕಾಲ ಸಂಗೀತ ಕಚೇರಿ ನಡೆಸಿದಾಗ ಇವರಿಗೆ ಕೇವಲ ಹತ್ತು ವರ್ಷ.ವಾಣಿಯವರದು ಬಹುಮುಖ ಪ್ರತಿಭೆ.ಚಿತ್ರರಚನೆ ಜೊತೆಗೆ ಓದಿನಲ್ಲೂ ಮುಂದು.ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಚಿತ್ರರಂಗಕ್ಕೆ ಪ್ರವೇಶ

ಇಂಡೋ-ಬೆಲ್ಜಿಯಂ ಛೇಂಬರ್ ಆಫ್ ಕಾಮರ್ಸ್‌ನಲ್ಲಿ ಉನ್ನತ ಹುದ್ದೆಯಲ್ಲಿದ್ದ ಜಯರಾಂ ಅವರೊಡನೆ ನಡೆದ ವಿವಾಹ ಇವರ ಜೀವನದಲ್ಲಿ ಮಹತ್ತರ ತಿರುವು ತಂದಿತು.ಸ್ವತಃ ಸಿತಾರ್ ವಾದಕರಾಗಿದ್ದ ಜಯರಾಂ ಪತ್ನಿಯ ಪ್ರತಿಭೆಗೆ ನೀರೆರೆದರು.ಪಟಿಯಾಲಾ ಘರಾಣಾದ ಅಬ್ದುಲ್ ರೆಹಮಾನ್ ಬಳಿ ಹಿಂದೂಸ್ತಾನಿ ಸಂಗೀತ ಕಲಿಸಿದರು.ಇಲ್ಲಿ ಇವರ ಕಂಠಸಿರಿಗೆ ಮಾರುಹೋದ ಮರಾಠಿ ಚಿತ್ರ ನಿರ್ದೇಶಕ ವಸಂತ ದೇಸಾಯಿ ತಮ್ಮ ಚಿತ್ರ ’ಅಮ್ಮ ತಾಯಿ ಗೋಡೆ’ಯಲ್ಲಿ ಹಾಡುವ ಅವಕಾಶ ಕಲ್ಪಿಸಿಕೊಟ್ಟರು.ಈ ಚಿತ್ರದ ಗಾಯನವನ್ನು ಮೆಚ್ಚಿಕೊಂಡ ಹಿಂದಿ ಚಿತ್ರ ನಿರ್ದೇಶಕ ಹೃಷಿಕೇಶ್ ಮುಖರ್ಜಿ ತಮ್ಮ ’ಗುಡ್ಡಿ ’ ಚಿತ್ರದಲ್ಲಿ ಹಾಡಿಸಿದರು.ಈ ಚಿತ್ರದ "ಬೋಲ್‌ರೇ ಪಪ್ಪಿ ಹರಾ" ಹಾಡು ದೇಶಾದ್ಯಂತ ಸಂಚಲನೆಯನ್ನು ಉಂಟುಮಾಡಿ ,ವಾಣಿ ಜಯರಾಂ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು.

ಕನ್ನಡ ಚಿತ್ರರಂಗದಲ್ಲಿ

ಕನ್ನಡ ಚಿತ್ರ ಸಂಗೀತಕ್ಕೆ ೧೯೭೩ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ ವಿಜಯಭಾಸ್ಕರ್ ಸಂಗೀತ ನಿರ್ದೇಶನದ ಕಡೆಯ ಚಿತ್ರ ನೀಲಾ (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.

ಇವರು ಹಾಡಿರುವ ಕೆಲವು ಸುಮಧುರ ಗೀತೆಗಳು

ಪ್ರಶಸ್ತಿಗಳು




ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು
ತ್ರಿಪುರಾಂಬ | ಕಮಲಾ ಬಾಯಿ | ಎಸ್.ಡಿ.ಸುಬ್ಬುಲಕ್ಷ್ಮಿ | ಲಕ್ಷ್ಮಿ ಬಾಯಿ | ಎಂ.ವಿ.ರಾಜಮ್ಮ | ಅಮೀರ್‍ಬಾಯಿ ಕರ್ನಾಟಕಿ | ಬಿ.ಜಯಮ್ಮ | ಪಿ. ಲೀಲಾ | ಪಿ.ಸುಶೀಲ | ಎಸ್.ಜಾನಕಿ | ಪ್ರಿಯದರ್ಶಿನಿ | ಎಲ್.ಆರ್. ಈಶ್ವರಿ | ಬಿ.ಕೆ.ಸುಮಿತ್ರಾ | ವಾಣಿ ಜಯರಾಂ | ಕಸ್ತೂರಿ ಶಂಕರ್ | ಬೆಂಗಳೂರು ಲತಾ | ಸುಲೋಚನ | ಎಸ್.ಪಿ.ಶೈಲಜಾ | ಬಿ.ಆರ್. ಛಾಯಾ | ರತ್ನಮಾಲ ಪ್ರಕಾಶ್ | ಮಂಜುಳಾ ಗುರುರಾಜ್ | ಸುಜಾತ ದತ್ | ಕವಿತಾ ಕೃಷ್ಣಮೂರ್ತಿ | ಚಿತ್ರಾ | ಚಂದ್ರಿಕಾ ಗುರುರಾಜ್ | ಲತಾ ಹಂಸಲೇಖ | ಸೌಮ್ಯ ರಾವ್ | ಅನುರಾಧ ಶ್ರೀರಾಮ್ | ನಂದಿತಾ | ಪಲ್ಲವಿ ಎಂ.ಡಿ | ಶಮಿತಾ ಮಲ್ನಾಡ್ | ಚೈತ್ರ | ಸುಮಾ ಶಾಸ್ತ್ರಿ | ಸುಪ್ರಿಯ ಆಚಾರ್ಯ | ಭವತಾರಿಣಿ