ಎಂ.ರಂಗರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೩೩ ನೇ ಸಾಲು: ೩೩ ನೇ ಸಾಲು:
* [[ಮುದುಡಿದ ತಾವರೆ ಅರಳಿತು]]
* [[ಮುದುಡಿದ ತಾವರೆ ಅರಳಿತು]]
* [[ಶುಭ ಮಿಲನ]]
* [[ಶುಭ ಮಿಲನ]]
* [[ಇತ್ಯಾದಿ....]]


== ಭಕ್ತಿಗೀತೆಗಳ ಹರಿಕಾರ ==
== ಭಕ್ತಿಗೀತೆಗಳ ಹರಿಕಾರ ==

೦೫:೪೧, ೨೪ ಅಕ್ಟೋಬರ್ ೨೦೦೮ ನಂತೆ ಪರಿಷ್ಕರಣೆ

ಕನ್ನಡ ಚಿತ್ರಸಂಗೀತದಲ್ಲಿ ಮಧುರಗೀತೆಗಳ ಪರಂಪರೆಗೆ ನಾಂದಿ ಹಾಕಿದವರು ಎಂ.ರಂಗರಾವ್.(ಜನನ : ಅಕ್ಟೋಬರ್ ೧೫,೧೯೩೨ - ಮರಣ : ೧೯೯೧)

ಹಿನ್ನೆಲೆ

ರಂಗರಾವ್ ಜನಿಸಿದ್ದು ಆಂಧ್ರ ಪ್ರದೇಶದ ಕವಲೇರು ಗ್ರಾಮದಲ್ಲಿ. ತಾಯಿ ರಂಗಮ್ಮನವರ ಪ್ರಭಾವದಿಂದ ಬಾಲ್ಯದಲ್ಲೇ ಸಂಗೀತಾಭಿರುಚಿ ಬೆಳೆದು ಬಂತು.ವೀಣೆಯನ್ನು ಕಲಿತರು.ಮೆಕ್ಯಾನಿಕಲ್ ಇಂಜಿನಿಯರಿಂಗ್‍‍ನಲ್ಲಿ ಡಿಪ್ಲೊಮಾ ಪದವಿ ಪಡೆದರು.

ಚಿತ್ರರಂಗ ಪ್ರವೇಶ

ತೆಲುಗಿನ 'ಸ್ವರ್ಗ ಸೀಮಾ ಯೋಗಿ ವೇಮನ' ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗದ ಪ್ರವೇಶ.'ತ್ಯಾಗಯ್ಯ' ಚಿತ್ರದಲ್ಲಿ ಆಕಸ್ಮಿಕವಾಗಿ ವೀಣೆ ನುಡಿಸುವ ಅವಕಾಶ ಒದಗಿ ಬಂತು.

ಸಂಗೀತ ನಿರ್ದೇಶಕನಾಗಿ

ಚಲನಚಿತ್ರ ನಿರ್ದೇಶಕ ಎಂ.ಆರ್.ವಿಠಲ್ ನಿರ್ದೇಶನದ ಕನ್ನಡ ಚಿತ್ರ ನಕ್ಕರೆ ಅದೇ ಸ್ವರ್ಗದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದರು. ಕನ್ನಡದಲ್ಲಿ ಅತೀ ಹೆಚ್ಚು ಸುಶ್ರಾವ್ಯ ಗೀತೆಗಳನ್ನು ಕೊಟ್ಟವರಲ್ಲಿ ರಂಗರಾವ್ ಅತ್ಯಂತ ಪ್ರಮುಖರು. ಅವರ "ಒಲವೇ ಜೀವವ ಸಾಕ್ಷಾತ್ಕಾರ..." "ಬಾಳೊಂದು ಭಾವಗೀತೆ..." "ಬಣ್ಣಾ ಬಣ್ಣಾ.." "ನೂರೊಂದು ನೆನಪು ಎದೆಯಾಳದಿಂದ..." "ಈ ಬಂಧನಾ.." "ನಮ್ಮೀ ಬಾಳೇ..." "ಓ ಪ್ರಿಯತಮಾ.." "ಸದಾ ಕಣ್ಣಲಿ..." "ಕೋಗಿಲೆ ಹಾಡಿದೆ.." "ತೆರೆದಿದೆ ಮನೆ ಓ ಬಾ ಅಥಿತಿ.." "ಬೆಳ್ಳಿ ಮೂಡಿತು..." "ಅರಳಿದೆ..ಅರಳಿದೆ.." ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ಇವರ ಸಂಗೀತ ನಿರ್ದೇಶನದ ಕೆಲವು ಚಿತ್ರಗಳು

ಭಕ್ತಿಗೀತೆಗಳ ಹರಿಕಾರ

ತಮ್ಮ ಸಂಗೀತ ನಿರ್ದೇಶನದಿಂದ ಕನ್ನಡ ಚಿತ್ರರಂಗಕ್ಕೆ ಮಾಧುರ್ಯದ ಹೊಳೆಯನ್ನೇ ಹರಿಸಿದ ರಂಗರಾವ್, ಅನೇಕ ಭಕ್ತಿಗೀತೆಗಳ ರಾಗ ಸಂಯೋಜನೆಯಿಂದಲೂ ಜನಪ್ರಿಯರಾಗಿದ್ದಾರೆ.ಶರಣು ಶರಣಯ್ಯ ಶರಣು ಬೆನಕ,ಉಡುಪಿ ಇದು,ಮಲೆನಾಡಿನ ಈ ಸೊಬಗಿನ,ವಾರ ಬಂತಮ್ಮ...-ಮುಂತಾದ ಗೀತೆಗಳು ಇಂದಿಗೂ ಜನರ ಮನಸ್ಸಿನಲ್ಲಿ ಸ್ಥಾಪಿತವಾಗಿವೆ.

ಪ್ರಶಸ್ತಿ/ಪುರಸ್ಕಾರಗಳು

೧. ಶ್ರೇಷ್ಠ ಸಂಗೀತ ನಿರ್ದೇಶನಕ್ಕೆ ರಾಜ್ಯ ಪ್ರಶಸ್ತಿ ಪಡೆದ ಚಿತ್ರಗಳು:

೨.ರಾಷ್ತ್ರ ಪ್ರಶಸ್ತಿ ಪಡೆದ ಚಿತ್ರ:

ರಂಗರಾವ್ ಸುಮಾರು ೧೧೦ ಚಿತ್ರಗಳ ೮೦೦ ಸುಮಧುರ ಗೀತೆಗಳಿಗೆ ಸಂಗೀತ ನಿರ್ದೇಶನ ಮಾಡಿ ಕನ್ನಡ ಚಿತ್ರರಂಗಕ್ಕೆ ಮರೆಯಲಾರದ ಕೊಡುಗೆ ನೀಡಿದ್ದಾರೆ.ಪಿತ್ತಕೋಶದ ಕ್ಯಾನ್ಸರ್‌ನಿಂದ ೧೯೯೧ರಲ್ಲಿ ಅಕಾಲಿಕ ಮರಣಕ್ಕೆ ತುತ್ತಾದರು.