ಶಿವಪುತ್ರ ಅಜಮನಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರಿಂದ ಸಂಸ್ಥಾ ಪಿತ ಭಾರತಿಯ ದಲಿತ ಅಕಾಡೆಮಿ ವತಿಯಿಂದ ಕೊಡುವ ಬಾಬಾಸಾಹೇಬ ಡಾ. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ-2013ನ್ನು ಮುದ್ದೇಬಿಹಾಳ ತಾಲ್ಲೂಕು ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಪುತ್ರ ಗು. ಅಜಮನಿ ಅವರಿಗೆ ಕೊಡಲಾಗಿದೆ.

ಅಜಮನಿ ಅವರಿಗೆ ಈಗಾಗಲೇ ಬುದ್ದಿಷ್ಟ ಸೊಸೈಟಿ ಕೊಡುವ ರಾಷ್ಟ್ರ ಮಟ್ಟದ ಅಂಬೇಡ್ಕರ್ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ. ಅಬುದಾಬಿ ಹಾಗೂ ಸಿಂಗಾಪುರದಲ್ಲಿ ನಡೆದ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಭಾಗವಹಿಸಿದ್ದರು.

ಪ್ರಶಸ್ತಿ ಪುರಸ್ಕೃತ ಅಜಮನಿ ಅವರನ್ನು ಬಿಜಾಪುರ ಜಿಲ್ಲೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.