ವಿಷಯಕ್ಕೆ ಹೋಗು

ಸಿದ್ದಾಂತ ಶಿಖಾಮಣಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಶ್ರೀ ಸಿದ್ಧಾಂತ ಶಿಖಾಮಣಿ ಇಂದ ಪುನರ್ನಿರ್ದೇಶಿತ)

ಸಿದ್ದಾಂತ ಶಿಖಾಮಣಿಯು 13 - 14ನೇ ಶತಮಾನದ ಸಂಸ್ಕೃತ ಭಾಷೆಯ ವೀರಶೈವ ಧರ್ಮದ ಮಹಾನ್ ಗ್ರಂಥವಾಗಿದೆ ಶ್ರೀ ಶಿವಯೋಗಿ ಶಿವಾಚಾರ್ಯರು ರಚಿಸಿದರು ಎಂದು ಹೇಳಲಾಗುತ್ತದೆ. ಪಂಚಾಚಾರ್ಯರ ಪ್ರಕಾರ ಇದು ವೀರಶೈವರ ಮತ ಗ್ರಂಥವಾಗಿದೆ. ಈ ಕೃತಿಯು ಜಗದ್ಗುರು ರೇಣುಕ ಮತ್ತು ಅಗಸ್ತ್ಯ ಮಹರ್ಷಿಗಳ ಸಂವಾದದ ರೂಪದಲ್ಲಿದೆ. ಈ ಕೃತಿಯನ್ನು ರೇಣುಕಾಗಸ್ತ್ಯ ಸಂವಾದ ಮತ್ತು ವೀರಶೈವ ಮಹಾತಂತ್ರ ಎಂದು ಸಹ ಕರೆಯಲಾಗುತ್ತದೆ. [][].

ಸಿದ್ದಾಂತ ಶಿಖಾಮಣಿ
ಲೇಖಕಶ್ರೀ ಶಿವಯೋಗಿ ಶಿವಾಚಾರ್ಯರು
ಭಾಷೆಸಂಸ್ಕೃತ
ಪ್ರಕಾರಶ್ರೀ ಶಿವಯೋಗಿ ಶಿವಾಚಾರ್ಯರು ರಚಿಸಿದ್ದು
ಪ್ರಕಟವಾದದ್ದು13-14ನೇ ಶತಮಾನ

ಹಿನ್ನಲೆ

[ಬದಲಾಯಿಸಿ]

ಶ್ರೀ ಸಿದಾಂತ ಶಿಖಾಮಣಿ ಯಲ್ಲಿ ಪ್ರತಿಪಾದಿತವಾದ ಏಕೋತ್ತರಶತಸ್ಥಲಾತ್ಮಕವಾದ ಈ ಸಿದ್ದಾಂತವು ಮೊಟ್ಟಮೊದಲು ಶಿವನು ಪಾರ್ವತಿಗೆ ಮತ್ತು ತನ್ನ ಶಿವಗಣರಿಗೆ ಉಪದೇಶಿಸಿದ್ದನು. ಶಿವನಿಂದ ಉಪದೇಶ ಪಡೆದ ಶಿವ ಪ್ರಮುಖರಾದ ರೇಣುಕ, ದಾರುಕ, ಘಂಟಾಕರ್ಣ, ಧೇನುಕರ್ಣ, ಮತ್ತು ವಿಶ್ವಕರ್ಣ ರೆಂಬ ಗಣೇಶ್ವರರು ಭೂಲೋಕದಲ್ಲಿ ಕ್ರಮಾವಾಗಿ ಅಗಸ್ತ್ಯ, ದಧೀಚಿ, ವ್ಯಾಸ, ಸಾನಂದ, ಮತ್ತು ದೂರ್ವಾಸ ರೆಂಬ ಮಹರ್ಷಿಗಳಿಗೆ ಶಿವಾದ್ವೈತ ಸಿದ್ದಾಂತವನ್ನು ಉಪದೇಶಿಸಿರುತ್ತಾರೆ. ಈ ಶಿವಗಣರಲ್ಲೊಬ್ಬರಾದ ಶ್ರೀ ರೇಣುಕಗಣೇಶ್ವರನು ಅಗಸ್ತ್ಯ ಮಹರ್ಷಿಗೆ ಉಪದೇಶಿಸಿದ ಶಿವಾದ್ವೈತ ಸಿದ್ದಂತವನ್ನೇ ಶ್ರೀ ಶಿವಯೋಗಿ ಶಿವಾಚಾರ್ಯರು ಈ ಸಿದ್ದಾಂತ ಶಿಖಾಮಣಿಯಲ್ಲಿ ರೇಣುಕಾಗಸ್ತ್ಯರ ಸಂವಾದ ರೂಪದಲ್ಲಿ ವಿವರಿಸಿದ್ದಾರೆ.

ಈ ಕೃತಿಯನ್ನು ಮೊಟ್ಟಮೊದಲಿಗೆ ಶ್ರೀ ಶಿವಯೋಗಿ ಶಿವಾಚಾರ್ಯರು ಸಂಪಾದಿಸಿಕೊಟ್ಟಿದ್ದಾರೆ. ಶ್ರೀ ರೇಣುಕಾಚಾರ್ಯರು ಮಹಾಮುನಿ ಅಗಸ್ತ್ಯರಿಗೆ ಭೋದಿಸಿದ ಸಾರವನ್ನು ಈ ಸಿದ್ದಾಂತಶಿಖಾಮಣಿ ಒಳಗೊಂಡಿದೆ. ಇದು "ರೇಣುಕಾಗಸ್ತ್ಯ ಸಂವಾದ" ರೂಪವಾಗಿದೆ.

ಈ ಗ್ರಂಥದ ಸಾರ ಶಿವಜೀವರ ಐಕ್ಯ. ವೀರಶೈವ ಸಿದ್ದಾಂತದ ಷಟ್ ಸ್ಥಲ ಗಳನ್ನು ನೂರೊಂದು ಸ್ಥಲಗಳಲ್ಲಿ ವಿಭಾಗಿಸಿ ವಿವರಿಸಲಾಗಿದೆ. ಈ ನೂರೊಂದು ಸ್ಥಲಗಳು ಸಾಧಕನ ಮನಸ್ಸಿನ ವಿಕಾಸದ ಉನ್ನತೋನ್ನತ ಸೋಪಾನಗಳಾಗಿವೆ. ಸಕಲ ಶಿವಾಗಮಗಳ ಸಾರವನ್ನೇ ಈ ಪುಸ್ತಕ ಓಳಗೊಂಡಿದೆ. ಈ ಗ್ರಂಥದಲ್ಲಿನ ಸಿದ್ದಾಂತದವು ದ್ವೈತಾದ್ವೈತಗಳ ಸಮನ್ವಯಾತ್ಮಕವಾದುದು. ಮೂಲತ ಸಂಸ್ಕೃತ ಭಾಷೆಯಲ್ಲಿರುವ ಈ ಪುಸ್ತಕವನ್ನು ಶ್ರೀ ೧೦೦೮ ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕನ್ನಡಿಗರಿಗೂ ಲಭ್ಯವಾಗಿಸಿದ್ದಾರೆ. ಈ ಪುಸ್ತಕ ರೇಣುಕ ಗೀತೆ ಅಂತಲೂ, ರೇಣುಕಾಗಸ್ತ್ಯ ಸಂವಾದ ಗ್ರಂಥವೆಂದೂ ಕರೆಯಲ್ಪಡುತ್ತದೆ.

ವಿಮರ್ಶೆ

[ಬದಲಾಯಿಸಿ]

ಉಲ್ಲೇಖ

[ಬದಲಾಯಿಸಿ]
  1. Chandrashekhara Shivacharya (2017). Shri Siddhanta Shikhaamani Paraamarshe. Managuli, Vijapura: Sha. Bra. Sri Dr. Mahantalinga Shivacharya Swamigalavara Pattaadhikara Rajata Mahotsava Samiti.
  2. https://m.thewire.in/article/history/karnataka-lingayat-veerashaive-debate