ಸದಸ್ಯರ ಚರ್ಚೆಪುಟ:Manavi M Gowda

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Manavi M Gowda


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

Palagiri (talk) ೧೧:೩೨, ೧೫ ಜನವರಿ ೨೦೧೫ (UTC)

ಡಾ ಹೆಚ್ ನಾಗವೇಣಿ[ಬದಲಾಯಿಸಿ]

ಡಾ ಹೆಚ್ ನಾಗವೇಣಿ ರವರು ೨೬.೧೧.೧೯೬೨ ರಂದು ಜನಿಸಿದರು. ಆಧುನಿಕ ಕನ್ನಡ ಸಾಹಿತ್ಯದ ಮಹತ್ವದ ಲೇಖಕಿಯರಲ್ಲಿ ಹೆಚ್.ನಾಗವೇಣಿ ಒಬ್ಬರು. ನಾಗವೇಣಿಯವರು ಮಂಗಳೂರಿನ ಹೊನ್ನಕಟ್ಟೆ ಎಂಬಲ್ಲಿ ಜನಿಸಿದರು. ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕೊಲ್ಕತ್ತ ರಾಷ್ರೀಯ ಗ್ರಂಥಾಲಯ ಕೇಂದ್ರೀಯ ಪರಾವರ್ತನೆಯಲ್ಲಿ ಸೇವೆ ಸಲ್ಲಿಸಿ ಈಗ ಹಂಪಿ ಕನ್ನಡ ವಿ.ವಿ ಯಲ್ಲಿ ಗ್ರಂಥಪಾಲಕಿಯಾಗಿದ್ದಾರೆ. ಹೊಸ ಕಥನ ಶೈಲಿಯನ್ನು ರೂಢಿಸಿಕೊಂಡಿರುವ ನಾಗವೇಣಿಯವರು ಕರಾವಳಿಯ ಪರಿಸರವನ್ನು ತಮ್ಮ ಕಥನಗಳಲ್ಲಿ ಆಪ್ತವಾಗಿ ಚಿತ್ರಿಸಿದ್ದಾರೆ. ಗಾಂಧಿಬಂದ ಕಾದಂಬರಿ, ನಾಕಾಣೆ ನೀರು, ಮೀಯುವ ಆಟ ಇವರ ಕಥಾ ಸಂಕಲನಗಳು. ವಸುಂಧರೆಯ ಗ್ಯಾನ ಪ್ರಬಂಧಗಲ ಸಂಕಲನ.ಸೂರ್ಯನಿಗೊಂದು ವೀಳ್ಯ ಅಂಕಣ ಬರಹಗಳ ಸಂಗ್ರಹ, ನವೋದಯದ ಕತೆಗಾರ್ತಿ ಗೌರಮ್ಮ, ರಂಗಸಂಪನ್ನ ಕಂಬಾರ, ಸಾರ-ವಿಸ್ತಾರ, ತಿರುಳು ತೋರಣ ಇವುಗಳು ಇವರ ಇನ್ನಿತರ ಪ್ರಮುಖ ಕ್ರತಿಗಳು. ಇವರ "ಗಾಂಧಿಬಂಧ" ಕಾದಂಬರಿಯು ರಂಗಕ್ರತಿಯಾಗಿ ರೂಪಾಂಪತರಗೊಂಡು ಜನಪ್ರೀತಿ ಗಳಿಸಿದೆ. ಕನ್ನಡ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಚದುರಂಗ ಪ್ರಶಸ್ತಿ, ಎಸ್.ಎಸ್ ಭೂಸನೂರ ಪ್ರಶಸ್ತಿ, ಗೀತಾದೇಸಾಯಿ ಪ್ರಶಸ್ತಿ ಇನ್ನು ಮುಂತಾದ ಪುರಸ್ಕಾರಗಳು ಇವರಿಗೆ ಸಂದಿವೆ.