ಸದಸ್ಯರ ಚರ್ಚೆಪುಟ:Puchhappady

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Puchhappady


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- New user message (ಚರ್ಚೆ) ೧೪:೦೦, ೮ ಅಕ್ಟೋಬರ್ ೨೦೧೭ (UTC)

ಮಹೇಶ್ ಪುಚ್ಚಪ್ಪಾಡಿ[ಬದಲಾಯಿಸಿ]

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಳಿಯ ಪುಚ್ಚಪ್ಪಾಡಿಯಲ್ಲಿರುವ ಮಹೇಶ್ ಕುಮಾರ್ ಅವರು ಪತ್ರಕರ್ತ. ಹೆಸರಿನ ಜೊತೆ ಮನೆಯ ಹೆಸರನ್ನೂ ಸೇರಿಸಿಕೊಂಡು ಮಹೇಶ್ ಪುಚ್ಚಪ್ಪಾಡಿ ಎಂದು ಗುರುತಿಸಿಕೊಂಡಿದ್ದಾರೆ.

ಕೃಷಿ ಕುಟುಂಬದ ಇವರು ಉಷಾಕಿರಣ , ವಿಜಯವಾಣಿ, ಹೊಸದಿಗಂತ, ಸುವರ್ಣ ನ್ಯೂಸ್ ಚಾನೆಲ್ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಕೃಷಿಯ ಜೊತೆಗೆ ಪತ್ರಕರ್ತನಾಗಿ , ಸಾಮಾಜಿಕವಾದ ವಿವಿಧ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. 
ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನಪಾ ಸಮಿತಿ ಸದಸ್ಯರಾಗಿ , ಇದೇ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಜೊತೆ ಕಾರ್ಯದರ್ಶಿಯಾಗಿ , ಸ್ಮರಣ ಸಂಚಿಕೆ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ಕಾರ್ಯವನ್ನು ಮಾಡಿ ಜಿಲ್ಲೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಮಾಡಿದ್ದಾರೆ.

ಗುತ್ತಿಗಾರು ಯುವಕ ಮಂಡಲದ ಅಧ್ಯಕ್ಷರಾಗಿ ಸಾಮಾಜಿಕವಾದ ವಿವಿಧ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ತಾಲೂಕು ಮಟ್ಟದ ಯುವಜನಮೇಳವನ್ನು ಗುತ್ತಿಗಾರಿನಲ್ಲಿ ಹಮ್ಮಿಕೊಂಡು ಅತ್ಯಂತ ಯಶಸ್ವಿಯಾಗಿ ಸಂಘಟಿಸಿದ್ದಾರೆ. ಸ್ವಚ್ಛತಾ ಅಭಿಯಾನ, ಪರಿಸರ ಕಾಳಜಿ, ನದಿ ಉಳಿಸೋಣ , ಕಾರ್ಮಿಕರಿಗೆ ಮಾಹಿತಿ ಕಾರ್ಯಕ್ರಮ, ಕ್ರೀಡಾಕೂಟ ಮೊದಲಾದ ಕಾರ್ಯಕ್ರಮದ ಮೂಲಕ ಯುವಕ ಮಂಡಲವನ್ನು ಸುಳ್ಯ ತಾಲೂಕಿನಲ್ಲಿ ಗುರುತಿಸಿವಂತೆ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಬಿ ಎಸ್ ಎನ್ ಎಲ್ ಮೊಬೈಲ್ ಟವರ್ ಸ್ಥಾಪನೆಗಾಗಿ ವಿವಿಧ ರೀತಿಯಿಂದ ಹೋರಾಟ ಮಾಡಿ ಯಶಸ್ಸು ಕಾಣಿವಂತಾಗಿದೆ. ಕಮಿಲ ರಸ್ತೆ ಅಭಿವೃದ್ಧಿಗಾಗಿಯೂ ವಿವಿಧ ಹೋರಾಟವನ್ನು ಮಾಡಿದ್ದಾರೆ.ಮೊಗ್ರ ಸೇತುವೆ ರಚನೆ, ಮೊಗ್ರ ಶಾಲೆಯ ಸಂಪರ್ಕ ವ್ಯವಸ್ಥೆ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಮಾಧ್ಯಮಗಳ ಮೂಲಕ ಪ್ರಯತ್ನ ಮಾಡಿದ್ದಾರೆ.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.