ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Vijetha D.E

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ,, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು.

ಜೀವನ

   ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ಇವರು ೧೯೩೮ ಸೆಪ್ಟೆಂಬರ್ ೮ ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ಜನಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದ ನಂತರ, ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಎಂ.ಎ. ಪದವಿಯನ್ನು ಪಡೆದರು. ಇವರ ಮೊದಲ ಕೃತಿ ಲಿಂಗ ಬಂದ. ಈ ಕೃತಿಗಾಗಿ ಅವರು ರಾಜೋತ್ಸವ ಪ್ರಶಸ್ತಿ ಪಡೆದರು.
   ಸ್ನಾತಕೊತ್ತರ ಪದವಿಯ ನಂತರ ಒರಗೆಯ ಇತರೆ ಬರಹಗಾರರಂತೆ ಅದ್ಯಾಪಕ ವೃತ್ತಿಯನ್ನು ಬಯಸದೆ ಮಲೆನಾಡಿನ ಮೂಡಿಗೆರೆಯಲ್ಲಿ ಕೃಷಿಯನ್ನು ಮಾಡುವ ಮಹತ್ವದ ನಿರ್ಧಾರವನ್ನು ಮಾಡಿದರು. ಕೃಷಿಯ ಜತೆಜತೆಗೆ ಅಗಾದವಾದ ಸಾಹಿತ್ಯದ ಕೃಷಿ ಮಾಡಿದರು. ಸಾಹಿತ್ಯದ ಜೊತೆಗೆ ಇವರಿಗೆ ವ್ಯವಸಾಯ, ಛಾಯಾಚಿತ್ರಗ್ರಹಣ ಹಾಗು ಬೇಟೆಯಲ್ಲಿ ಆಸಕ್ತಿಯಿತ್ತು. ಇವರು ರೈತ ಚಳುವಳಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
   ಇವರ ಪತ್ನಿ ರಾಜೇಶ್ವರಿ. ಇವರೀಗ ತೇಜಸ್ವಿಯವರ ಪ್ರೀತಿಯ ಮನೆ ಮೂಡಿಗೆರೆಯ ನಿರುತ್ತರದಲ್ಲಿ ಜೀವಿಸುತ್ತಿದ್ದಾರೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು, ಸುಸ್ಮಿತ ಹಾಗು ಈಶಾನ್ಯೇ. ಇವರಿಬ್ಬರೂ ಸಾಫ್ಟ್ ವೇರ್ ಪರಿಣಿತರು. ಪೂರ್ಣಚಂದ್ರ ತೇಜಸ್ವಿಯವರು ತಮ್ಮ ಮನೆ 'ನಿರುತ್ತರ' ದಲ್ಲಿ ೨೦೦೭ ರ ಏಪ್ರಿಲ್ ೫ ರ ಮಧ್ಯಾಹ್ನ ೨ ಘಂಟೆಗೆ, ಹೃದಯಾಘಾತದಿಂದ ನಿಧನ ಹೊಂದಿದರು. ಆಗ ಇವರ ವಯಸ್ಸು ೬೯ ವರ್ಷ.

ಸಾಹಿತ್ಯ ಕೃತಿಗಳು

ಕವಿತೆ, ನಾಟಕ, ಕಾದಂಬರಿ, ಕತೆ ಮೊದಲಾದ ಸಾಹಿತ್ಯಕ ಪ್ರಕಾರಗಳಲ್ಲಿ ಬರೆದಿದ್ದಾರೆ. ಹಲವಾರು ಆಂಗ್ಲ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇದರಲ್ಲಿ ಕೀಟಗಳು, ಪ್ರಾಣಿಗಳು, ನದಿ-ಕೊಳ್ಳಗಳು, ಕಾಡುಗಳು, ಬೇಟೆಯ ವೈವಿಧ್ಯತೆಯ ಬಗ್ಗೆ ಹಲವಾರು ಕೃತಿಗಳನ್ನು ನೀಡಿದ್ದಾರೆ. "ಕರ್ವಾಲೋ" ಕೃತಿಯಲ್ಲಿ, ಜೀವವಿಕಾಸ ಪಥದಲ್ಲಿ ಎಲ್ಲವೂ ಬದಲಾಗುತ್ತ ರೂಪಾಂತರ ಹೊಂದುತ್ತಾ ಬಂದಿರುವಾಗ ಹಾರುವ ಓತಿಯ ಕುರಿತು ಕುತೂಹಲ ಹುಟ್ಟಿಸುವ ಸನ್ನಿವೇಶಗಳು ಮೂಡಿ ಬಂದಿವೆ.

ಕವನ ಸಂಕಲನ

   ಸೋಮುವಿನ ಸ್ವಗತ ಲಹರಿ ಮತ್ತು ಇತರ ಕವನಗಳು (೧೯೬೨)

ಕಾದಂಬರಿಗಳು

   ಕರ್ವಾಲೋ (೧೯೮೦)
   ಚಿದಂಬರ ರಹಸ್ಯ (೧೯೮೫)
   ಜುಗಾರಿ ಕ್ರಾಸ್ (೧೯೯೪)
   ಮಾಯಾಲೋಕ (೨೦೦೫)
   ಕಾಡು ಮತ್ತು ಕ್ರೌರ್ಯ (೨೦೧೩)

ನೀಳ್ಗತೆಗಳು

   ಸ್ವರೂಪ (೧೯೬೬)
   ನಿಗೂಢ ಮನುಷ್ಯರು (೧೯೭೩)

ಚಿತ್ರ ಸಂಕಲನ

   ಮಾಯೆಯ ಮುಖಗಳು

ಕಥಾಸಂಕಲನ

   ಹುಲಿಯೂರಿನ ಸರಹದ್ದು (೧೯೬೨)
   ಅಬಚೂರಿನ ಪೋಸ್ಟಾಫೀಸು (೧೯೭೩)
   ಕಿರಿಗೂರಿನ ಗಯ್ಯಾಳಿಗಳು (೧೯೯೧)
   ಪಾಕಕ್ರಾಂತಿ ಮತ್ತು ಇತರ ಕತೆಗಳು

ನಾಟಕ

   ಯಮಳ ಪ್ರಶ್ನೆ (೧೯೬೪)

ಅನುವಾದಿತ ಕೃತಿಗಳು

   ಬೆಳ್ಳಂದೂರಿನ ನರಭಕ್ಷಕ(ಕಾಡಿನ ಕಥೆಗಳು ಭಾಗ ೧) (೧೯೯೩) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ
   ಪೆದ್ದಚೆರುವಿನ ರಾಕ್ಷಸ(ಕಾಡಿನ ಕಥೆಗಳು ಭಾಗ ೨) (೧೯೯೩) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ
   ಜಾಲಹಳ್ಳಿಯ ಕುರ್ಕ(ಕಾಡಿನ ಕಥೆಗಳು ಭಾಗ ೩) (೧೯೯೪) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ
   ಮುನಿಶಾಮಿ ಮತ್ತು ಮಾಗಡಿ ಚಿರತೆ(ಕಾಡಿನ ಕಥೆಗಳು ಭಾಗ ೪)
   ರುದ್ರಪ್ರಯಾಗದ ಭಯಾನಕ ನರಭಕ್ಷಕ (೧೯೯೫) - ಜಿಮ್ ಕಾರ್ಬೆಟ್‍ರವರ 'ಮ್ಯಾನ್ ಈಟಿಂಗ್ ಲೆಪಡ್೯ ಆಫ್ ರುದ್ರಪ್ರಯಾಗ್' ಕೃತಿಯ ಅನುವಾದ.
   ಪ್ಯಾಪಿಲಾನ್-೧,೨ - ಹೆನ್ರಿ ಷಾರಿಯೇ ರವರ 'Papillon' ಕೃತಿಯ ಅನುವಾದ