ಸದಸ್ಯ:Hamsini hp gowda/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹೊಯ್ಸಳ

ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, 'ಹೊಯ್ಸಳ' ಎಂಬ ಹೆಸರು ಈ ವಂಶದ ಸಂಸ್ಥಾಪಕ ಸಳನಿಂದ ವ್ಯುತ್ಪತ್ತಿಯಾದದ್ದು. ಚಾರಿತ್ರಿಕವಾಗಿ ಈ ಸಂಸ್ಥಾಪಕನ ಹೆಸರು ನೃಪಕಾಮ ಎಂದು ಊಹಿಸಲಾಗಿದೆ. ಹೊಯ್ಸಳ ಸಾಮ್ರಾಜ್ಯವನ್ನು ವಿಸ್ತರಿಸಿದ ಅರಸರಲ್ಲಿ ಮೊದಲಿಗ ವಿನಯಾದಿತ್ಯ (ಆಡಳಿತ: ೧೦೪೭-೧೦೯೮).

ಇತಿಹಾಸ

ದಂತಕತೆಯ ಪ್ರಕಾರ ಜೈನ ಗುರು ಸುದತ್ತಚಾರ್ಯನು ಸೊಸೆಯೂರಿನ ವಾಸಂತಿಕಾ ಮಂದಿರದಲ್ಲಿ ಹುಲಿಯು ಬರಲು, ಅದನ್ನು ಹೊಡೆಯಲು ತನ್ನ ಶಿಷ್ಯ ಸಳನಿಗೆ "ಹೊಯ್ ಸಳ" ಎಂದು ಆಜ್ನಾಪಿಸಿದನು. ಇದೆ ಹೊಯ್ಸಳ ಶಬ್ದದ ಮೂಲ ಎನ್ನುತ್ತಾರೆ. ೧೧೧೭ರ ವಿಷ್ಣುವರ್ಧನನ ಶಾಸನದಲ್ಲಿ ಈ ಕಥೆ ಮೊದಲು ಕಾಣಬರುತ್ತದೆ. ಆದರೆ ಇದರ ತಥ್ಯ ಅನುಮಾನಾಸ್ಪದವಾಗಿದ್ದು ಇನ್ನೂ ದಂತಕಥೆಯ ರೂಪದಲ್ಲಿಯೇ ಉಳಿದಿದೆ. ವಿಷ್ಣುವರ್ಧನನು ತಲಕಾಡಿನಲ್ಲಿ ಚೋಳರನ್ನು ಸೋಲಿಸಿದ ಮೇಲೆ ಬಹುಷಃ ಈ ಕಥೆ ಹುಟ್ಟಿರಬಹುದು ಅಥವಾ ಹೆಚ್ಚು ಪ್ರಚಲಿತವಾಗಿರಬಹುದು. ಹೊಯ್ಸಳರ ಲಾಂಛನವು ಸಳನು ಹುಲಿಯನ್ನು ಕೊಲ್ಲುತ್ತಿರುವ ಚಿತ್ರವಾಗಿದ್ದು, ಚೋಳರ ಲಾಂಛನವು ಹುಲಿಯಾಗಿತ್ತು ಎಂಬ ಅಂಶಗಳು ಈ ಊಹೆಗೆ ಕಾರಣ. ೧೦೭೮ ಮತ್ತು ೧೭೯೦ರ ಶಾಸನಗಳು ಹೊಯ್ಸಳರನ್ನು ಯಾದವ ವಂಶದವರು ಎಂದು ಸಂಬೋಧಿಸಿವೆ. ಆದರೆ ಹೊಯ್ಸಳರಿಗೂ ಉತ್ತರದ ಯಾದವರಿಗೂ ಸಂಬಂಧ ಕಲ್ಪಿಸುವ ಯಾವುದೇ ದಾಖಲೆಗಳಿಲ್ಲ. ಹೊಯ್ಸಳರು ಹಾಲುಮತಕ್ಕೆ(ಕುರುಬ ಗೌಡ ಸಮಾಜ) ಸೇರಿದವರು ಎಂದು ಕೆಲವರು ವಾದಿಸುತಾರೆ.