ಸದಸ್ಯ:Keerthi 340/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಉಷ್ಣದ ಸ್ವರೂಪ[ಬದಲಾಯಿಸಿ]

ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ ಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.

ಆದರೆ, ಎಲ್ಲಿ ಬೆಚ್ಚಗಿನ ಬಿಸಿಲು ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆವೃತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.

ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂಶಾಖ ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?

ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ಐಸ್-ಕ್ರಿಮ್ ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .

ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .

ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ತೃಪ್ತಿ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.

ಉಷ್ಣ ಕಿರಣ : ಉಷ್ಣ ಕಿರಣಗಳು ಮತ್ತು ಬೆಳಕಿನ ಕಿರಣಗಳು ಎರಡು ಒಂದೇ ಬಗೆ. ಬಿಸಿನೀರಿನ ಬುಗ್ಗೆ ಬೆಳಕನ್ನು ಉತ್ಪತ್ತಿ ಮಾಡಲಾರದು . ಮಿನುಗುವ ರಂಜಕ ಮುಟ್ಟಲು ತಂಪು . ರಸ್ತೆಯ ಮೇಲಿರುವ ಕಾದ ಕಲ್ಲು ಬೆಳಕನ್ನು ನೀಡಲಾರದು . ಪೂರ್ಣಿಮೆಯ ಚಂದ್ರ ಪ್ರಜ್ವಲಿಸುವಾಗಲೂ ಸೆಖೆಯಾಗುವುದಿಲ್ಲ . ಬೆಳಕು ಮತ್ತು ಶಾಖ ಎರಡೂ ಸಹಜವಾಗಿಯೇ ವಿಭಿನ್ನ ರೂಪದ ಕಿರಣಗಳೆಂದು ಇವೆಲ್ಲವೂ ಸೂಚಿಸುತ್ತವೆ . ಆದಾಗ್ಯೂ ಬೆಳಕನ್ನು ಕೊಡುವ ಸೂರ್ಯನೇ ಶಾಖವನ್ನೂ ಕೊಡುತ್ತಾನೆ. ಸಾಖ ಕೊಡುವ ಬೆಂಕಿ ಕೊಠಡಿನ್ನೂ ಬೆಳಗುತ್ತದೆ . ವೋಂಬತ್ತಿಯ ಜ್ವಾಲೆ ಬೆಳಕು ಮತ್ತು ಶಾಖ ಎರಡನ್ನೂ ಉತ್ಪತ್ತಿ ಮಾಡುತ್ತದೆ . ಇವೆಲ್ಲದರ ಆಧಾರದ ಮೇಲೆ ಉಷ್ಣ ಮತ್ತು ಬೆಳಕು ಇವುಗಳ ನಡುವೆ ನಿಕಟ ಸಂಬಂಧವಿದೆ ಎಂದು ತೀರ್ಮಾನಿಸಬಹುದು . ಆದರೆ, ಉಷ್ಣ-ಬೆಳ್ಕುಗಳ ನಡುವಿನ ಸಂಬಂಧ ಚಾಣಾಕ್ಷ ವೀಕ್ಷಕರ ಅರಿವಿಗೂ ಬಹಳ ಕಾಲದವರೆಗೆ ಬಂದೇ ಇರಲಿಲ್ಲ . ಸಂಗೀತಗಾರ -ಖಗೋಳತಜ್ಞ wilhelm Hershel ಎಂಬಾತ ೧೮೦೦ ರಲ್ಲಿ ಸೂರ್ಯನ ಬೆಳಕನ್ನು ಸೋಸಕಗಳ (filter)ಮೂಲಕ ವಿಶ್ಲೇಷಿಸುತ್ತಿದ್ದಾಗ ಸೋಸಕಗಳು ಬಿಸಿಯಾಗುತ್ತಿದ್ದುದನ್ನು ಗಮನಿಸಿ ಸೂರ್ಯನ ಬೆಳಕಿನಲ್ಲಿ ಶಾಖ ಉತ್ಪತ್ತಿ ಮಾಡುವ ಕಿರಣಗಳೂ ಇರಬೇಕೆಂದು ತೀರ್ಮಾನಿಸಿದನು.


ಹರ್ಷೆಲ್ ನ ಆ ಪ್ರಯೋಗಗಳು ಬಹಳ ಸ್ವಾರಸ್ಯಕರವಾಗಿತ್ತು . ಸೂರ್ಯನ ಬೆಳಕು ಕಾಮನಬಿಲ್ಲಿನ ಏಳು ಬಣ್ಣದ ಬೆಳಕುಗಳಿಂದ ಸಂಯೋಜಿತವಾಗಿದೆ ಯಷ್ಟೆ. ಆ ಪ್ರತಿಯೊದು ಬಣ್ಣದ ಬೆಳಕಿನಲ್ಲಿಯೂ ಎಷ್ಟು ಶಾಖವಿರುತ್ತದೆ ಎಂದು ಆತ ತಿಳಿಯಬಯಸಿದ. ಅದಕ್ಕಾಗಿ ಸೂರ್ಯನ ಬೆಳಕನ್ನು ಒಂದು ಪ್ರಿಸ್ಮ್ ಮೂಲಕ ಹಾಯಿಸಿ ಹೊರಬರುವ ಒಂದೊಂದು ನೀಲಿಯಿಂದ ಕೆಂಪು ಬಣ್ಣದ ವರೆಗೆ ಶಾಖ ಹೆಚ್ಚುತ್ತದೆಂದು ತೋರಿತು.

ಆದರೆ , ಹರ್ಷೆಲ್ ಅಷ್ಟಕ್ಕೇ ಪ್ರಯೋಗ ನಿಲ್ಲಿಸಲಿಲ್ಲ . ಕೆಂಪು ಬೆಳಕನ್ನು ದಾಟಿ ಪಕ್ಕದಲ್ಲಿ ಥರ್ಮಾಮೀಟರ್ ಇಟ್ಟ. ಆಶ್ಚರ್ಯ. ಯಾವ ಬಣ್ಣದ ಬೆಳಕೂ ಇಲ್ಲದ . ಆ ಭಾಗದಲ್ಲಿ ಇತರ ಬಣ್ಣಗಳಿಗಿಂತಲೂ ಹೆಚ್ಚಿನ ಶಾಖವಿದ್ದುದು ತೋರಿಬಂತು . ಅಗೋಚರವಾದ ಆಕಿರಣಗಳಿಗೆ ಕ್ಯಾಲೊರಿಫಿಕ್ ಎಂದರೆ ಶಾಖ ಎಂದು ಅರ್ಥ . ಅದೇ ಜಾಡನ್ನು ಹಿಡಿದು ಎನ್ನೂ ಅನೇಕ ಪ್ರಯೋಗಗಳನ್ನು ಮಾಡಿ ಕ್ಯಾಲೊರಿಫಿಕ್ ಕಿರಣಗಳೂ ಗೋಚರ ಬೆಳಕಿನ ಕಿರಣಗಳಂತೆ ಪ್ರತಿಫಲನ . ವಕ್ರೀಭವನ ಮುಂತಾದ ಎಲ್ಲ ಗುಣಗಳನ್ನೂ ಪ್ರದರ್ಶಿಸುತ್ತವೆಂದು ದೃಡಪಡಿಸಿಕೊಂಡನು . ಹಾಗಾಗಿ, ಅಗೋಚರ ಬೆಳಕೂ ಇದೆ ಎಂಬುದು ಮೊದಲ ಬಾರಿಗೆ ಆತನ ಪ್ರಯೋಗಗಳಿಂದ ತಿಳಿದುಬಂದಿತು. ಮುಂದೆ ಅವಕ್ಕೆ ಅವಕೆಂಪು (Infrared) ಅಥವಾ "ಉಷ್ಣಕಿರಣ"ಗಳೆಂದು ಹೆಸರಾಯಿತು.

ಹತ್ತೊಂಬತ್ತನೇ ಶತಮಾನದ ಮೊದಲ ದಶಕದ ವೇಳೆಗೆ ಕ್ಯಾಲೋರಿಫಿಕ್ ಕಿರಣಗಳೂ ಮತ್ತುಬೆಳಕು ಮೂಲತಃ ಒಂದೇ ಬಗೆ (ವಿದ್ಯು ತ್ಕಾಂತ್ತಿಯ ಅಲೆಗಳು ) ಎಂದು ಭೌತವಿಜ್ಞಾನಿಗಳು ಅರ್ಥಮಾಡಿಕೊಂಡು ವಿಶ್ವದಲ್ಲಿ ಸರ್ವವ್ಯಾಪಿಯಾದ ಈಥರ್ ಎಂಬ ಮಾಧ್ಯಮದ ಮೂಲಕ ಕಂಪನ ರೂಪದಲ್ಲಿ ಅವು ಪ್ರಸರಿಸುತವೆ ಎಂದು ಚಿತ್ರಿಸಿಕೊಂಡಿದ್ದರು. ಉಷ್ಣ ಕಿರಣ ಮತ್ತು ಬೆಳಕಿನ ಕಿರಣ ಇವುಗಳ ನಡುವಿನ ವ್ಯತ್ಯಾಸ ಕೇವಲ ಅವುಗಳ ತರಂಗಾಂತರದಲ್ಲಿ (Wave length) ಎಂಬುದು ಹತ್ತೋಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಮಾತ್ರವೇ ಸ್ಪಷ್ಟವಾಯಿತು. ಉಷ್ಣಕಿರಣಗಳ ತರಂಗಾಂತರ ಬೆಳಕಿನ ತರಂಗಾಂತರಗಳಿಗಿಂತ ದೀರ್ಘ. ಇದರಿಂದ ನಮಗೆ ತಿಳಿದುಬರುವುದೇನೆಂದರೆ ನಮ್ಮ ಇಂದ್ರಿಯಗಳು ವಿದ್ಯುತ್ ಕಾಂತೀಯ ತರಂಗಗಳಿಗೆ ಅವುಗಳ ತರಂಗಾಂತರಗಳಿಗೆ ಅನುಗುಣವಾಗಿ ಸ್ಪಂದಿಸುತ್ತವೆ ಎಂಬುದು.

ಸೂರ್ಯನ ತಾಪ : ಸೂರ್ಯ ಮತ್ತು ಇತರ ಖಗೋಳ ಕಾಯಗಳ ತಾಪವನ್ನು ಭೂಮಿಯಿಂದಲೇ ಅಳೆಯಬಹುದು .

ಸೂರ್ಯನ ತಾಪ

ಸೂರ್ಯನ ಮೇಲ್ಮೈ ತಾಪ (Temperature) ಸುಮಾರು ೫೫೦೦ ಡಿಗ್ರಿ ಸೆಲ್ಸಿಯಸ್ ಎಂದು ಪಠ್ಯಪುಸ್ತುಕಗಳು ದಾಖಲಿಸುತ್ತವೆ . ಆದರೆ, ಅದನ್ನು ಆಳೆದದ್ದ ಹೇಗೆ ? ಆಧುನಿಕ ಜ್ಞಾನವನ್ನು ಪ್ರಾಯೋಗಿಕ, ಪರಿಮಾಣಾತ್ಮಕ ಹಾಗೂ ಸೈದ್ಧಾಂತಿಕ ವಿಶ್ಲೇಷಣೆಗಳಿಂದ ಹೇಗೆ ಪಡೆಯಬಹುದು ಎಂಬುದಕ್ಕೆ ಕೊಡಬಹುದಾದ ಅನೇಕ ಉದಾಹರಣೆಗಳಲ್ಲಿ ಇದೂ ಒಂದು . ಯಾವುದೇ ಕಾಯದಿಂದ ಹೊಮ್ಮುವ ಉಷ್ಣಕಿರಣಗಳ ತೀವ್ರತೆ ಆ ಕಾಯದ ಮೇಲ್ಮೈ ತಾಪವನ್ನು ಕೆಲವು ನಿರ್ದಿಷ್ಟ ರೀತಿಗಳಲ್ಲಿ ಅವಲಂಬಿಸಿರುತ್ತದೆ ಎಂಬುದು ಹತ್ತೊಂಬತ್ತನೇ ಶತಮಾನದ ಅಂತಿಮ ದಶಕಗಳಲ್ಲಿ ನಡೆದ ಪರಿಮಾಣಾತ್ಮಕ ಹಾಗೂ ಪ್ರಾಯೋಗಿಕ ಅಧ್ಯಯನಗಳಿಂದ ಸ್ಪೆಷ್ಟವಾಯಿತು. ಅದೊಂದು ಅತ್ಯಂತ ಮಹತ್ವದ ಆವಿಷ್ಕಾರವಾಗಿತ್ತು . ಏಕೆಂದರೆ ಅದನ್ನು ಬಳಸಿ ನಮ್ಮಿಂದ ಅತಿ ದೂರವಿರುವ ಹಾಗೂ ಮುಟ್ಟಲು ಸಾಧ್ಯವಿಲ್ಲದ ಕಾಯಗಳ ತಾಪವನ್ನು ಅಳೆಯಲು ಸಾಧ್ಯವಾಗಿದೆ.

ಇದಕ್ಕೂ ಮೊದಲು ೧೮೩೦ ಸುಮಾರಿನಲ್ಲಿ Claude pouillet ಎಂಬಾತ Pyrheliometer ಎಂಬ ಉಪಕರಣವನ್ನು ತಯಾರಿಸಿದ್ದನು ವಿಕಿರಣದ ಬಗ್ಗೆ ಸೈದ್ಧಾಂತಿಕ ಚೌಕಟ್ಟು ಸಿದ್ಧವಾಗುವುದಕ್ಕೆ ಮೊದಲೇ ಆತ ಆ ಉಪಕರಣವನ್ನು ಬಳಸಿ ಸೂರ್ಯನಿಂದ ಭೂಮಿಯನ್ನು ತಲಪುವ ಉಷ್ಣಕಿರಣಗಳನ್ನು ಅಳೆದು ಸೂರ್ಯನ ಮೇಲ್ಮೈ ತಾಪ ಸುಮಾರು ೧೮೦೦ ಡಿಗ್ರಿ ಸೆಲ್ಸಿಯಸ್ ಎಂದು ಲೆಕ್ಕಹಾಕಿದ್ದನು ಅನಂತರ ಮತ್ತೆ ಕೆಲವರು ಅದನ್ನು ಒಂದು ಸಾವಿರದಿಂದ ಹತ್ತು ಸಾವಿರ ಡಿಗ್ರಿ ಸೆಲ್ಸಿಯಸ್ ಎಂದು ಅಂದಾಜು ಮಾಡಿದ್ದರು . ಕೊನೆಗೆ Josef stefan ನು ಹಿಂದಿನ ಅನೇಕ ಪ್ರಯೋಗಗಳಿಂದ ದೊರೆತ ಮಾಹಿತಿ ಮತ್ತು ತನ್ನದೇ ಸೂತ್ರದ ಆಧಾರದ ಮೇಲೆ ಸೂರ್ಯನ ಮೇಲ್ಮೈ ತಾಪ ಸುಮಾರು ೬೦೦೦ ಡಿಗ್ರಿ ಸೆಲ್ಸಿಯಸ್ ಎಂದು ನಿಖರವಾ ಗಿ ಲೆಕ್ಕಹಾಕಿದನು.

ವಿಜ್ಞಾನ ಇತಿಹಾಸದ ದೃಷ್ಟಿಯಲ್ಲಿ ಇದನ್ನು ಒಂದು ಮಹತ್ವದ ಮೈಲಿಗಲ್ಲೆಂದು ಮೆಚ್ಚಲೇ ಬೇಕು ಏಕೆಂದರೆ , ಮನುಷ್ಯ ಭೂಮಿಯಮೇಲಿದ್ದೇ ಕೋಟ್ಯಂತರ ಮೈಲಿ ದೂರದಲ್ಲಿರುವ , ಅಷ್ಟೊಂದು ಬಿಸಿ ಇರುವ ಸೂರ್ಯನ ಮೇಲ್ಮೈ ತಾಪವನ್ನು ಅಳೆಯಲು ಸಾಧ್ಯವಾಯಿತು.

ಉಷ್ಣ ಹರಿಯುವ ದಿಕ್ಕು ; ಅಧಿಕ ತಾಪದ ಕಾಯದಿಂದ ಕಡಿಮೆ ತಾಪದ ಕಾಯಕ್ಕೆ ಉಷ್ಣ ಹರಿಯುತ್ತದೆ. ಬೆಂಕಿಯ ತಾಪ ಅಧಿಕವಾಗಿರುತ್ತದೆ . ಐಸ್ರ್ಕೇಮ್ ತಾಪ ಕಡಿಮೆ ಇರುತ್ತದೆ . ರೋಗಿಯ ದೇಹದ ತಾಪವನ್ನು ನರ್ಸ್ ಅಳೆಯುತ್ತಾಳೆ. ಹವಾಮಾನ ತಜ್ಞರು ದಿನದ ಗರಿಷ್ಟ ಹಾಗೂ ಕನಿಷ್ಟ ತಾಪಗಳನ್ನು ವರದಿ ಮಾಡುತ್ತಾರೆ . ಹೀಗೆ ದಿನಬಳಕೆಯಲ್ಲಿ ತಾಪದ ಬಗ್ಗೆ ಅನೇಕ ರೀತಿ ಉಲ್ಲೇಖನಗಳಿದ್ದರೂ ಅದರ ನಿಜವಾದ ಅರ್ಥ ಏನೆಂಬುದು ಸ್ಪಷ್ಟವಾಗಿಲ್ಲದೇ ಇರಬಹುದು . ಸಾಮಾನ್ಯವಾಗಿ ತಾಪ ಎಂದರೆ ಕಾಯದಲ್ಲಿ "ಎಷ್ಟು ಉಷ್ಣ ಅಡಗಿದೆ"ಎಂಬುದರ ಅಳತೆ ಎಂದು ಹೇಳುತ್ತೇವೆ . ಆದರೆ,ಇದೊಂದು ತಪ್ಪು ಗ್ರಹಿಕೆ .

ಅದನ್ನು ಸ್ಪಷ್ಟಪಡಿಸಲು ಭೌತವಿಜ್ಞಾನಕ್ಕೆ ಬಹಳಷ್ಟು ಕಾಲವೇ ಬೇಕಾಯಿತು . ಹದಿನೇಳನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರವೇ ಥರ್ಮೋಮೀಟರ್ಗಳನ್ನು ವೃದ್ಧಿಪಡಿಸಲು ಸಾಧ್ಯವಾದುದರಿಂದ ನೀರು ಗಡ್ಡೆಯಾಗುವ ಮತ್ತು ಕುದಿಯುವ ಪ್ರಕ್ರಿಯೆಗಳ ತಾಪವನ್ನು ನಿರ್ದಿಷ್ಟವಾಗಿ ಅಳೆಯಲು ಸಾಧ್ಯವಾಯಿತು . ನೀರು ,ಆಲ್ಕೋಹಾಲ್ ,ಪಾದರಸ ಇವುಗಳನ್ನು ಥರ್ಮೋಮೀಟರ್ಗಳಲ್ಲಿ ಬಳಸಬಹುದು. ಕಾಯದ ತಾಪ ಅದರ ಉಷ್ಣತಾಸ್ಥಿತಿಯನ್ನು ಪ್ರತಿನಿಧಿಸುತ್ತದೆ ; ಅದು ಆ ಕಾಯದಿಂದ ಅಥವಾ ಆ ಕಾಯಕ್ಕೆ ಉಷ್ಣಶಕ್ತಿ ಹರಿಯುವ ದಿಕ್ಕನ್ನು ನಿರ್ಧರಿಸುತ್ತದೆ .ಹಾಗಾಗಿ , ಇತರ ಕಾಯಗಳೊಂದಿಗೆ ಹೋಲಿಸಿದಾಗ ಮಾತ್ರ ತಾಪ ಎಂಬುದಕ್ಕೆ ಅರ್ಥವಿದೆ .ನೀರು ಹರಿಯವ ದಿಕ್ಕನ್ನು ಅದರ ಒತ್ತಡ ನಿರ್ಧರಿಸುವಂತೆ -ಯಾವಾಗಲೂ ಅಧಿಕ ಒತ್ತಡದಿಂದ ಕಡಿಮೆ ಒತ್ತಡದೆಡೆಗೆ .

ನಾವು ಯಾವುದೇ ಕಾಯವನ್ನು ಸ್ಪರ್ಷಿಸಿದಾಗ ಅದು ಬಿಸಿ ಎನಿಸಿದರೆ ಆ ಕಾಯದಿಂದ ನಮ್ಮ ದೇಹಕ್ಕೆ ಉಷ್ಣಶಕ್ತಿ ಹರಿದಿದೆ . ಆಗ ಆ ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಅಧಿಕವಾಗಿದೆ ಎಂದು ಹೇಳುತ್ತೇವೆ . ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಕಡಿಮೆ ಇದ್ದಾಗ ಉಷ್ಣಶಕ್ತಿ ನಮ್ಮ ದೇಹದಿಂದ ಅದಕ್ಕೆ ಹರಿಯುತ್ತದೆ .ಈ ರೀತಿಯ ಶಕ್ತಿ ಹರಿಯುವಿಕೇಯೇ ಉಷ್ಣ. ಅದು ಯಾವಾಗಲೂ ಬಿಸಿ ಕಾಯದಿಂದ ತಣ್ಣಗಿನ ಕಾಯಕ್ಕೆ ಹರಿಯುತ್ತದೆ . ಅದು ಹೀಗೇ ಏಕೆ ? ತಣ್ಣಗಿರುವ ಕಾಯದಿಂದ ಬಿಸಿ ಕಾಯದೆಡೆಗೆ ಯಾಕೆ ಹರಿಯಬಾರದು ? ಉದಾಹರಣೆಗೆ , ಸಂಪತ್ತನ್ನು ತೆಗೆದುಕೊಳ್ಳಿ. ಅದು ಯಾವಾಗಲೂ ಶ್ರೀಮಂತರಿಂದ ಬಡವರ ಕಡೆಗೆ ಮಾತ್ರ ಹರಿಯುತ್ತದೆಯೆ ?

ಉಷ್ಣ ಮತ್ತು ಕೆಲಸ ; ಉಷ್ಣಗತಿವಿಜ್ಞಾನದ (Thermodynamics) ಮೊದಲನೇ ನಿಯಮ ; ಉಷ್ಣಶಕ್ತಿ ಹಾಗೂ ಯಾಂತ್ರಿಕಶಕ್ತಿ (Mechanical energy) ಅಂತರಪರಿವರ್ತನೆ ಯಾಗುತ್ತವೆ.

ಉಷ್ಣಗತಿವಿಜ್ಞಾನದ ಮೊದಲ ನಿಯಮ

ಚಲನೆಯಂತೆ ಉಷ್ಣವೂ ಶಕ್ತಿಯ ಒಂದು ರೂಪ ಪ್ರಾನ್ಸಿನಲ್ಲಿ ಚಲಾವಣೆಯಲ್ಲಿರುವ ಹಣ ಫ್ರಾಂಕ್ ಭಾರತದಲ್ಲಿ ಅದು ರೂಪಾಯಿ ಅದೇ ರೀತಿ ಒಂದೊಂದು ಮಾನಗಳಿವೆ (units)ಉಷ್ಣಶಕ್ತಿ ಅಳೆಯಲು ಕೆಲೊರಿ ಯಾಂತ್ರಿಕಶಕ್ತಿ (ಚಲನಶಕ್ತಿ ಪೊಟೆನ್ಶಲ್ ಎನರ್ಜಿ ) ಅಳೆಯಲು ಜೌಲ್ (joul) . ಅಂಗೈಗಳನ್ನು ಒಂದಕ್ಕೊದು ಉಜ್ಜಿಕೊಂಡರೆ ಶಾಖ ಉತ್ಪತ್ತಿಯಾಗುತ್ತದೆಂಬುದು ಪುರಾತನ ಕಾಲದಲ್ಲೇ ತಿಳಿದಿತ್ತು .ಆದರೆ ,ಉಷ್ಣಶಕ್ತಿ ಮತ್ತು ಯಾಂತ್ರಿಕಶಕ್ತಿಗಳ ನಡುವೆ ಒಂದು ಸಮಾನತೆ ಇದೆಯೆಂಬುದು ಈಚಿನ ಅರಿವು . ನಾವು ಮೊದಲೇ ನೋಡಿದಂತೆ , ಪ್ರತಿ ಶಕ್ತಿಪರಿವರ್ತನೆಯಲ್ಲಿಯೂ ಒಟ್ಟು ಶಕ್ತಿಮೊತ್ತ ಬದಲಾಗುವುದಿಲ್ಲ ; ಮೊದಲಿನಷ್ಟೇ ಇರುತ್ತದೆ . ಅದನ್ನು ಒಬ್ಬ ವ್ಯಕ್ತಿಯ ಒಟ್ಟು ಸಂಪತ್ತಿಗೆ ಹೋಲಿಸಬಹುದು ; ಸ್ವಲ್ಪ ಭಾಗ ನಗದಿನ ರೂಪದಲ್ಲಿರಬಹುದು . ಸ್ವಲ್ಪ ಭಾಗ ಸ್ಥಿರ ಆಸ್ತಿಯ ರೂಪದಲ್ಲಿರಬಹುದು . ಹಣವನ್ನು ಬಳಸಿ ಆಸ್ತಿಯನ್ನು ಕೊಳ್ಳಬಹುದು , ಆಸ್ತಿಯನ್ನು ಮಾರಿ ಹಣ ಮತ್ತು ಆಸ್ತಿಯ ನಡವಿನ ಸಮಾನತೆ ಕಾಲಕಾಲಕ್ಕೆ ಬದಲಾಯಿಸಬಹುದು .ಆದರೆ ಶಕ್ತಿಪರಿವರ್ತನೆಯಲ್ಲಿ ಹಾಗಲ್ಲ . ವಿವಿಧ ಶಕ್ತಿಗಳ ನಡುವಿನ ಸಮಾನತೆ ಯಾವಾಗಲೂ ಸ್ಥಿರ . ಯಾವುದೇ ವ್ಯವಸ್ಥೆಯಲ್ಲಿ ಹೊರಗಿನಿಂದ ಶಕ್ತಿ ಪ್ರವೇಶಿಸದೆ ಅಥವಾ ಒಳಗಿನಿಂದ ಶಕ್ತಿ ಹೊರಹೋಗದೆ ಶಕ್ತಿಪರಿವರ್ತನೆಯಾದಾಗ ನಿವ್ವಳಶಕ್ತಿಯ ರಕ್ಷಣೆ ಹಾಗೂ ಶಕ್ತಿರೂಪಗಳ ನಡುವಿನ ಸಮಾನತೆಯನ್ನು "ಶಕ್ತಿ ಸಂರಕ್ಷಣೆಯ ತತ್ವ " (principle of conservation of energy ) ಎನ್ನುತ್ತಾರೆ .

ಮೇಲು ನೋಟಕ್ಕೆ ಇದೊಂದು ಸರಳ ಪರಿಕಲ್ಪನೆ ಎನಿಸಿದರೂ ಇದರ ಮಹತ್ವ ಅರಿವಾಗಬೇಕಾದರೆ ಬಹಳ ಕಾಲವೇ ಬೇಕಾಯಿತು . ನಿಸರ್ಗದ ಎಲ್ಲ ವಿದ್ಯಮಾನಗಳಲ್ಲಿಯೂ , ಚಲನೆಯ ನಿಯಮಗಳು ತೋರಿಬರುವಂತೆ, ಶಕ್ತಿಸಂರಕ್ಷಣೆಯೂ ತೋರಿಬರುತ್ತದೆ . ನಾವು ಬಳಸುವ ಪ್ರತಿ ಉಪಕರಣವನ್ನೂ ಅದು ನಿಯಂತ್ರಿಸುತ್ತದೆ -ಇಷ್ಟು ವಿದ್ಯುತ್ ಅಂದರೆ ಇಷ್ಟು ಉಷ್ಣ ಮತ್ತು ಬೆಳಕಿನ ಸಮ , ಇಷ್ಟ ಪೆಟ್ರೋಲಿನ ರಾಸಾಯನಿಕ ಶಕ್ತಿ ಕಾರಿನ ಇಷ್ಟು ಚಲನಶಕ್ತಿಯಾಅಗುತ್ತದೆ, ಹೀಗೆ . ಉಷ್ಣ ಚಲನ ಸಿದ್ಧಾಂತ (kinetic theory of heat); ಉಷ್ಣಶಕ್ತಿಯು ಅಣು , ಪರಮಾಣುಗಳ ಯಾದೃಚ್ಛಿಕ (random)ಚಲನಶಕ್ತಿಯನ್ನು ಪ್ರತಿಬಿಂಬಿಸುತ್ತದೆ . ಉಷ್ಣ ಎಂದರೆ ಒಂದು ಕಾಯದಿಂದ ಮತ್ತೊಂದು . ಕಾಯಕ್ಕೆ ಹರಿಯುವ ಒಂದು ರೀತಿಯ ಸೂಕ್ಷ್ಮ ದ್ರವ ಎಂದು ಭಾವನೆ ಒಂದು ಕಾಲದಲ್ಲಿ ಇತ್ತು. ಕೆಲವರು ಅಂತಹ ದ್ರವದ ತೂಕ ನಿರ್ಧರಿಸಲು ಪ್ರಯೋಗಗಳನ್ನು ಮಾಡಿದರು . ಆದ್ರವಕ್ಕೆ ಸ್ಥಳಾವಕಾಶ ಬೇಕಾದ್ದರಿಂದ ಬಿಸಿಯದ ಕಾಯ ಉಬ್ಬುತ್ತದೆ ಎಂದು ಅಂದಿನ ನಂಬಿಕೆಯಾಗಿತ್ತು ! ಅಣು , ಪರಮಾಣುಗಳ ಚಲನಶಕ್ತಿ ಹಾಗೂ ಅವುಗಳನ್ನು ಒಳಗೊಂಡ ಕಾಯದ ಉಷ್ಣ ಗುಣಗಳ ನಡುವಿನ ಸಂಬಂಧವನ್ನು ವಿವರಿಸುವ ಭೌತವಿಜ್ಞಾನದ ಒಂದು ಪ್ರಮುಖ ಶಾಖೆಯೇ ಉಷ್ಣ ಚಲನ ಸಿದ್ಧಾಂತ . ಈ ಸಿದ್ಧಾಂತದ ಮೂಲ ತತ್ವಗಳು ಬಹಳ ಸರಳ . ತಮ್ಮ ನಿರಂತರ ಅಲುಗಾಟದಿಂದ ಅಣು , ಪರಮಾಣುಗಳು ಚಲನಶಕ್ತಿಯನ್ನು ಹೊಂದಿರುತ್ತವೆ . ಇದೇ ಕಾಯದ ಆಂತರಿಕ ಶಕ್ತಿ ಹಾಗಾಗಿ ಕಾಯದ ತಾಪ ಏರಿದಷ್ಟೂ ಅದರಲ್ಲಿಅಣು, ಪರಮಾಣುಗಳ ಸರಾಸರಿ ಚಲನಶಕ್ತಿಯೂ ಅಧಿಕವಗುತ್ತದೆ. ಘನ ವಸ್ತು ಗಳಲ್ಲಿ ಅಣು , ಪರಮಾಣುಗಳು ಕಂಪಿಸುತ್ತಿರುತ್ತವೆ; ದ್ರವ ವಸ್ತುವಿನಲ್ಲಿ ಅವು ಚಕ್ರಾಕಾರದಲ್ಲಿ ಸುತ್ತುತ್ತಿರುತ್ತವೆ; ಅನಿಲದಲ್ಲಿ ಅವು ಒಂದು ಸ್ಥಳದಿಂದ ಮತೋಂದು ಸ್ಥಳಕ್ಕೆ ತೊಯ್ದಾಡುತ್ತಿರುತ್ತವೆ.

ಈ ರೀತಿಯ ಯಾದೃಚ್ಛಿಕ ಚಲನಶಕ್ತಿಯ ವರ್ಗಾವಣೆಯನ್ನೇ ಉಷ್ಣ ಎಂದು ಹೇಳುವುದು.ಅಣು, ಪರಮಾಣುಗಳ ರಾಶಿ , ಚಲನವೇಗ ಹಾಗೂ ಅವುಗಳಿಗೆ ಸಂಬಂಧಿಸಿದ ಒತ್ತಡ, ಗಾತ್ರ , ಮುಂತಾದ ವಿಷಯಗಳ ಬಗ್ಗೆ ಆಧುನಿಕ ಜ್ಞಾನವಿಲ್ಲದಿದ್ದಲ್ಲಿ ಈ ರೀತಿಯ ಅರಿವು ಅಸಾಧ್ಯವಗುತ್ತಿತ್ತು ಎಂದು ಇಲ್ಲಿ ಒತ್ತಿ ಹೇಳ್ಬೇಕಾಗಿದೆ. ಸೋಜಿಗದ ಸಂಗತಿ ಎಂದರೆ ಅಣು , ಪರಮಾಣುಗಳನ್ನು ಗ್ರಹಿಸುವುದಕ್ಕೆ ಮೊದಲೇ ಇಂತಹ ಒಂದು ಚಿತ್ರ ಮೂಡಿತ್ತು. ಭೌತಜಗತ್ತಿನ ಈ ಸತ್ಯವನ್ನು ಬಹಿರಂಗ ಪಡಿಸಲು ಸಾಧ್ಯವಾದದ್ದು ಗಣಿತದ ಸಂಶೋಧನೆಗಳಿಂದ.

ಉಷ್ಣ ಯಂತ್ರಗಳು ; ಯಾವುದೇ ವ್ಯವಸ್ಥೆಯಲ್ಲಿ ಹೊಡಿಕೆ ಮತ್ತು ನಾವು ಅದರಿಂದ ವಾಪಸ್ಸು ಪಡೆಯಬಹುದಾದದ್ದು ಇವುಗಳ ನಡುವಿನ ಅನುಪಾತವೇ ಆ ವ್ಯವಸ್ಥೆಯ ದಕ್ಷತೆ .

ಶಕ್ತಿಯನ್ನು ಒಂದು ರೂಪದಿಂದ ಮತ್ತೊದು ರೂಪಕ್ಕೆ ಯಶಸ್ವಿಯಾಗಿ ಪರಿವರ್ತಿಸುವ ಕ್ರಿಯೆಯ ಆಧಾರದ ಮೇಲೆ ನಮ್ಮ ಔದ್ಯೋಗಿಕ ಮತ್ತು ತಾಂತ್ರಿಕ ನಾಗರಿಕತೆ ಬೆಳೆದಿದೆ. ಇವುಗಳಲ್ಲಿ ಉಷ್ಣವನ್ನು ಯಾಂತ್ರಿಕ ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ . ಅನಾದಿ ಕಾಲದಿಂದಲೂ ಮಾನವ ಅನೇಕ ವಿಧವಾದೆ ಸೌಲಭ್ಯಗಳನ್ನು ಸೃಷ್ಟಿಸಿಕೊಂಡಿದ್ದಾನೆ. ರಾಟೆ,ಮೀಟುಗೋಲಿನಿಂದ ಹಿಡಿದು ನೇಗಿಲು , ಪವನಯಂತ್ರ , ಹೀಗೆ ವಿಧವಿಧವಾದ ಸಲಕರಣೆಗಳು ಎಲ್ಲ ನಾಗರಿಕತೆಗಳಲ್ಲಿಯೂ ಕಂಡುಬರುತ್ತವೆ . ಆದರೆ, ಇವುಗಳ ಸೈದ್ಧಾಂತಿಕ ಅಧ್ಯಯನ ಆರಂಭವಾದದ್ದು ೧೯ನೇ ಶತಮಾನದ ಔದ್ಯೋಗಿಕ ಕ್ರಾಂತಿ ಮತ್ತು ಉಗಿಯಂತ್ರಗಳ ಆವಿಷ್ಕಾರದ ನಂತರವೇ . ಇವೆಲ್ಲದರ ಹಿಂದಿನ ಸ್ಪೂರ್ತಿ ಉಷ್ಣಯಂತ್ರದ ಪರಿಕಲ್ಪನೆ - ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸುವ ಸಾಧನೆ . ಉಗಿಬಂಡಿ ಅಥವಾ ರೈಲುಗಾಡಿ ಇದರ ಪ್ರಮುಖ ಉದಾಹರಣೆ . ತೊಡಗಿಸಿದ ಉಷ್ಣಶಕ್ತಿಯ ಎಷ್ಟು ಪಾಲು ಯಾಂತ್ರಿಕ ಶಕ್ತಿಯಾಗಿ ಪರಿವರ್ತನೆಯಾಗಿದೆ ಎಂಬುದೇ ಅದರ ಕಾರ್ಯಸಮರ್ಥತೆ . ಶೇಕಡ ೩೦ ಕಾರ್ಯಸಮರ್ಥತೆ ಎಂದರೆ ಹೂಡಿದ ಶಕ್ತಿಯಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಯಾಂತ್ರಿಕ ಶಕ್ತಿಯ ರೂಪದಲ್ಲಿ ಲಭ್ಯವಿದೆ ಎಂದು ಅರ್ಥ ಉಳಿದದ್ದು ವಿವಿಧ ರೀತಿಗಳಲ್ಲಿ ವ್ಯಯವಾಗುತ್ತದೆ .

ಉಷ್ಣಯಂತ್ರದಲ್ಲಿ ಉಷ್ಣವನ್ನು ಒದಗಿಸುವ ಒಂದು ಆಕರ (source) ಮತ್ತು ವಿಸರ್ಜಿಸಲ್ಪಟ್ಟ ತ್ಯಾಜ್ಯ ಉಷ್ಣವನ್ನು ಹೀರಿಕೊಳುವ ಗ್ರಾಹಕ (Sink)ಎಂದು ಎರಡು ಭಾಗಗಳನ್ನು ಕಲ್ಪಿಸಿಕೊಳ್ಳಬಹುದು. ವಿಸರ್ಜಿಸಲ್ಪಟ್ಟ , ಕಾರ್ಯಕ್ಕೆ ಒದಗದ ಶಕ್ತಿ ಕಡಿಮೆಯಾದಷ್ಟೂ ಯಂತ್ರದ ಸಾಮರ್ಥ್ಯ ಅಧಿಕ .

ಥರ್ಮೋಡೈನಮಿಕ್ಸ್-ನ ಎರಡನೇ ನಿಯಮ; ಯಾವ ಯಂತ್ರದಲ್ಲಿಯೂ ಶೇಕಡ ನೂರು ಸಾಮರ್ಥ್ಯವಿಲ್ಲ ; ಕೆಲವರು ಶೇಕಡ ನೂರು ಸಾಮರ್ಥ್ಯಕ್ಕಾಗಿ ಶ್ರಮಿಸುತ್ತಾರೆ. ಸಾಮಾನ್ಯ ಭಾಷೆಯಲ್ಲಿ ಅದರ ಅರ್ಥ ಏನೆಂದು ಹೇಳುವುದು ಕಷ್ಟ. ಆದರೆ, ಉಷ್ಣಯಂತ್ರಗಳ ವಿಷಯದಲ್ಲಿ ನಿಖರವಾಗಿ ಹೇಳಬಹುದು . ಶೇಕಡ ನೂರು ಸಾಮರ್ಥ್ಯದ ಯಂತ್ರ ಎಂದರೆ ತೊಡಗಿಸಿದ ಶಕ್ತಿಯನ್ನು ಸಂಪೂರ್ಣವಾಗಿ ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸುವುದು . ನಮಗೆಲ್ಲಾ ಅಂತಹ ಯಂತ್ರ ಬೇಕು ಯಾರುತ್ತಾನೆ ಶಕ್ತಿಯನ್ನು ವ್ಯಯಮಾಡಲು ಬಯಸುತ್ತಾರೆ ? ಆದರೆ ಇದೊಂದು ಮರೀಚಿಕ ಒಂದು ಕಾರು ಕೊಳ್ಳುವಾಗ ಅದರ ಉತ್ಪಾದನೆಗೆ ಎಷ್ಟು ಹಣ ಖರ್ಚಾಯಿತೋ ಅಷ್ಟೇ ಬೆಲೆ ಕೊಡುತ್ತೇನೆಂದರೆ ಆಗುತ್ತದೆಯೆ? ಮಾರಾಟಗಾರ ಅದಕ್ಕೆ ಒಪ್ಪಲಾರ ಕಾರಣ , ಕಾರನ್ನು ಫ್ಯಾಕ್ಟರಿಯಿಂದ ಮಳಿಗೆಗೆ ವರ್ಗಾಯಿಸುವುದು , ಅದಕ್ಕೆ ಕೊಡಬೇಕಾದ ಸುಂಕಗಳು , ಮಾರಾಟಗಾರನ ಕಮೀಶನ್ , ಹೀಗೆ ಇನ್ನೂ ಎಷ್ಟೋ ಖರ್ಚುಗಳಿರುತ್ತವೆ . ಹಾಗಾಗಿ ನಾವು ಕೊಡುವ ಹಣದ ಒಂದು ಭಾಗ ಮಾತ್ರ ಕಾರಿನ ಉತ್ಪಾದನೆಯ ಖರ್ಚು .

ಅದೇ ರೀತಿ ಉಷ್ಣಯಂತ್ರಗಳಲ್ಲಿ ಊಡಿಸಿದ ಒಟ್ಟು ಶಕ್ತಿಯ ಒಂದು ಭಾಗ ಮಾತ್ರ ಯಾಂತ್ರಿಕ ಶಕ್ತಿಯಾಗಿ ಪರಿವರ್ತನೆಯಾಗುತ್ತದೆ . ಅಂದರೆ ಯಂತ್ರದ ಸಾಮರ್ಥ್ಯ ಯವಾಗಲೂ ಶೇಕಡ ನೂರಕ್ಕಿಂತ ಕಡಿಮೆ. ಸೈದ್ಧಾಂತಿಕವಾಗಿ ಶೇಕಡ ನೂರು ಸಾಮರ್ಥ್ಯದ ಉಷ್ಣಯಂತ್ರವನ್ನು ನಿರ್ಮಿಸುವುದು ಅಸಾಧ್ಯ. ನಾವು ವಾಸ್ತವದಲ್ಲಿ ಏನು ಸಾಧಿಸಬಹುದು ಎಂಬುದರ ಮೇಲೆ ನಿಸರ್ಗ ಒಡ್ಡುವ ಮಿತಿ . ಇದು ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸುವ ಕ್ರಿಯೆಯಲ್ಲಿನ ಈ ಆಂತರಿಕ ಮಿತಿಗೆ ಥರ್ಮೋಡೈನಮಿಕ್ಸ್-ನ ಎರಡನೇ ನಿಯಮ ಎನ್ನುತ್ತಾರೆ . ಈ ಮಿತಿಗೆ ಕಾರಣ ಘರ್ಷಣೆ (Friction). ಪರಸ್ಪರ ಸಂಪರ್ಕದಲ್ಲಿರುವ ಎರಡು ಮೇಲ್ಮೈಗಳಲ್ಲಿ ಒಂದು ಇನ್ನೊಂದರ ಮೇಲೆ ಸರಿಯಲು ಯತ್ನಿಸಿದಾಗ ಆ ಚಲನೆಗೆ ಎದುರಾಗುವ ಪ್ರತಿರೋಧವೇ ಘರ್ಷಣೆ . ಹಾಗಾಗಿ ಘರ್ಷಣೆಯನ್ನು ನಿವಾರಿಸಲು ಹೊಡಿದ ಶಕ್ತಿಯ ಸ್ವಲ್ಪಬಾಗ ವ್ಯಯವಾಗುವುದು ಅನಿವಾರ್ಯ ಆದ್ದರಿಂದ ಪೂರೈಸಿದ ಶಕ್ತಿಗೆ ಸಮನಾದ ಉಪಯುಕ್ತ ಶಕ್ತಿ ಎಂದಿಗೂ ಲಭಿಸಲಾರದು .ಥರ್ಮೋಡೈನಮಿಕ್ಸ್-ನ ಈ ಎರಡನೇ ನಿಯಮ ನಿಸರ್ಗದ ಮೂಲಭೂತ ನಿಯಮಗಳಲ್ಲಿ ಒಂದು ಅದರ ಸಾರಾಂಶವೇನೆಂದರೆ ನಿಸರ್ಗದ ಆಗುಹೋಗುಗಳು ಬಳಸಬಹುದಾದ ಶಕ್ತಿಯನ್ನು ಬಳಸಲಾಗದ ಶಕ್ತಿಯಾಗಿ ಪರಿವರ್ತಿಸುತ್ತದೆ ಎಂಬುದು . ಯಾವುದೇ ವ್ಯವಸ್ಥೆಯಲ್ಲಿ ಕಂಡುಬರುವ ಅವ್ಯವಸ್ಥೆಯೇ (Disorder) ಅದರಲ್ಲಿನ ಬಳಸಲಾಗದ ಶಕ್ತಿಯ ಪ್ರಮಾಣದ ಸೂಚಕ .

Randomness ಮತ್ತು entropy.ಅಣು ಸಮುಚ್ಚಯದಲ್ಲಿನ ಅವ್ಯವಸ್ಥೆಯ ಮಟ್ಟ ಭಾರಿ ವ್ಯತ್ಯಾಸಗಳಿಗೆ ಕಾರಣವಾಗುತ್ತದೆ.

ಪ್ರಪಂಚದಲ್ಲಿ ತೋರಿಬರುವ ವ್ಯವಸ್ಥೆ ಅನೇಕ ಬಾರಿ ನಮಗೆ ಆಶ್ವರ್ಯ ಉಂಟುಮಾಡುತ್ತದೆ. ಅಲ್ಲಿನ ಸಾಮರಸ್ಯ , ಸೌಂದರ್ಯದಿಂದ ಪ್ರಭಾವಿತರಾಗುತ್ತೇವೆ . ಆದಾಗ್ಯೂ, ಈ ಎಲ್ಲ ತೋರಿಕೆಯ ಸಭ್ಯತೆಯ ಹಿಂದೆ ಅಸಂಸ್ಕೃತ ಭಾವೋದ್ವೇಗ ತಾಂಡವಾಡುತ್ತಿರುತ್ತದೆ . ಅದೇ ರೀತಿ ಲೌಕಿಕ ಜಗತ್ತಿನ ವಿದ್ಯಮಾನಗಳನ್ನು ನಿಯಂತ್ರಿಸುವ ಎಲ್ಲ ನಿಯಮಾವಳಿಗಳ ಹಿನ್ನೆಲೆಯಲ್ಲಿ ಅವ್ಯವಸ್ಥೆಯ ಎಡಗೆ ಜಾರುವ ಒಲವು ಪ್ರಭುತ್ವ ಸಾಧಿಸುತ್ತಿರುತ್ತದೆ. ಅದನ್ನು ನಿಗ್ರಹಿಸಲಾಗದು . ವಿಶ್ವದಲ್ಲಿ ಸಂಭವಿಸುವ ಪ್ರತಿಯೊಂದು ಸ್ವಯಂಪ್ರೇರಿತ ಘಟನೆಯೂ

ವಿಶ್ವವನ್ನು ವ್ಯವಸ್ಥೆಯಿಂದ ಅವ್ಯವಸ್ಥೆಯೆಡೆಗೆ ತಳ್ಳುತ್ತದೆ. ಹಾಗಾಗಿ ವಿಶ್ವದ ಅಂತಿಮ ಗುರಿಯೇ ಅತ್ಯಂತ ಅವ್ಯವಸ್ಥೆ (Supreme chaos) ಎಂಬತೆ ತೋರುತ್ತದೆ. ಈ ಪ್ರಸಂಗದಲ್ಲಿ ಅವ್ಯವಸ್ಥೆ ಎಂದರೆ ಏನು ಎಂಬುದನ್ನು ಪರಿಶೀಲಿಸೋಣ. (Chaos theory ಯಲ್ಲಿ ಇದಕ್ಕೆ ಒಂದು ವಿಶಿಷ್ಟ ಅರ್ಥವಿದೆ) ಪ್ರಸ್ತುತದಲ್ಲಿ, ಅನೇಕ ಉಪಭಾಗಗಳಿರುವ ಯಾವುದೇ ವ್ಯವಸ್ಥೆಯಲ್ಲಿ, ಆ ಉಪಭಾಗಗಳ ನಡುವಿನ ಅಸಮರೂಪಕತೆಯನ್ನು (Inhomogeneity). ಅದು ಸೂಚಿಸುತ್ತದೆ ವ್ಯವಸ್ಥಿತವಾಗಿ ಜೋಡಿಸಿರುವ ಇಸ್ಪೀಟು ಕಾರ್ಡಿನ ಗುಂಪನ್ನು ಕಲಸಿದಾಗ ನಾವು ಅಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸುತ್ತೇವೆ. ಕಾಫಿಗೆ ಸಕ್ಕರೆ ಬೆರಸಿದಾಗ ಅದರಲ್ಲಿ ಅವ್ಯವಸ್ಥೆಯನ್ನು ಹೆಚ್ಚಿಸುತ್ತೇವೆ.

ವ್ಯವಸ್ಥೆಯಲ್ಲಿನ ಅವ್ಯವಸ್ಥೆಯನ್ನು ಅಳೆಯಲು ಭೌತವಿಜ್ಞಾನದಲ್ಲಿ ಒಂದು ವಿಧಾನವಿದೆ. ಆದಕ್ಕೆ ಎಂಟ್ರೊಪಿ (Entropy) ಎನ್ನುತ್ತಾರೆ. ಎಂಟ್ರೊಪಿಯ ಅಂಶವನ್ನು ಅಳೆಯಲು ಎರಡು ವಿಧಾನಗಳಿವೆ. ಯಾವುದೇ ಒಂದು ವ್ಯವಸ್ಥೆಯ ಎಂಟ್ರೊಪಿ ಅಧಿಕವಾಗಿದೆ ಎಂದು ಭೌತವಿಜ್ಞಾನಿಯು ಹೇಳಿದರೆ, ಅದರಲ್ಲಿನ ಉಪಭಾಗಗಳನಡುವೆ ಅವ್ಯವಸ್ಥೆಯ ಅಂಶ ಜಾಸ್ತಿಯಾಗಿದೆ ಎಂದು ಅರ್ಥ. ಭೌತಜಗತ್ತಿನ ಒಂದು ಮೂಲಭೂತ ನಿಯಮವೇನೆಂದರೆ ಯಾವುದೇ ವ್ಯವಸ್ಥೆಯಲ್ಲಿ, ಉಷ್ಣಕ್ಕೆ ಸಂಬಂದಪಟ್ಟಂತೆ ಏನೇ ಸಂಭವಿಸಿದರೂ ಅದರ ಅಂತಿಮ ಪರಿಣಾಮ ಆ ವ್ಯವಸ್ಥೆಯ ಎಂಟ್ರೊಪಿಯನ್ನು ಹೆಚ್ಚಿಸುವುದು,

ಉಷ್ಣಶಕ್ತಿ ಮತ್ತು ಯಾಂತ್ರಿಕ ಶಕ್ತಿ ಇದು ಒಂದಕ್ಕೊಂದು ಸಮಾನವಾದರೂ ಅವುಗಳ ನಡುವೆ ವ್ಯತ್ಯಾಸವಿದೆ ಕ್ರಮಬದ್ದವಾದ ಚಲನೆಯಿಂದ ಯಾಂತ್ರಿಕ ಶಕ್ತಿ ಮೂಡುತ್ತದೆ; ಅಣು ಪರಮಾಣುಗಳ ಯಾದೃಚ್ಛಿಕ ಚಲನೆಯಿಂದಾಗಿ ಉಷ್ಣಶಕ್ತಿ ಉತ್ಪಾದನೆಯಾಗುತ್ತದೆ. ಒಂದು ಸಾವಿರ ಸೈನಿಕರು ಕ್ರಮಬದ್ದವಾಗಿ ಚಲಿಸುತ್ತಿದ್ದರೆ ಅದು ಯಾಂತ್ರಿಕ ಶಕ್ತಿಯ ಸಾದೃಶ್ಯ. ಸ್ಟೋಟ ಸಂಭವಿಸಿ ಸೈನಿಕರು ಚೆಲ್ಲಾಪಿಲ್ಲಿಯಾಗಿ ಓಡಿದರೆ ಅದು ಆವ್ಯವಸ್ಥಿತ ಚಲನೆ. ವ್ಯವಸ್ಥಿತ ಚಲನೆಯನ್ನು ಆವ್ಯವಸ್ಥಿತಚಲನೆಯಾಗಿ ಪರಿವರ್ತಿಸುವುದು ಸುಲಭ. ಅದರೆ, ಅ ಆವ್ಯವಸ್ಥಿತ ಚಲನೆಯನ್ನು ವ್ಯವಸ್ಥಿತ ಚಲನೆಯಾಗಿ ಪರಿವರ್ತಿಸುವುದು ಅಷ್ಟು ಸುಲಭವಲ್ಲ -ಅದೂ ಕೋಟ್ಯಂತರ ಪರಮಾಣುಗಳು ಅಂತರಕ್ರಿಯಿಸುತ್ತಿರುವಾಗ. ಈ ಕಾರಣದಿಂದಲೇ ಉಷ್ಣಶಕ್ತಿಯನ್ನು ಶೇಕಡ ನೂರು ಪಾಲು ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸಲು ಸಾಧ್ಯವಾಗುವುದಿಲ್ಲ.

ಅಣು, ಪರಮಾಣುಗಳ ಚಲನೆಯ ಅವ್ಯವಸ್ಥಿತ ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಿಂದ ಬೇರ್ಪಡಿಸುತ್ತದೆ. ಲಕ್ಷಾನುಲಕ್ಷ ಅಣುಗಳು , ಎಲ್ಲ ಒಂದೇ ದಿಕ್ಕಿನಲ್ಲಿ ಕ್ರಮಬದ್ಧವಾಗಿ ಚಲಿಸುತ್ತಿದ್ದರೆ .ಅದು ಉಷ್ಣಶಕ್ತಿ ಎನಿಸುವುದಿಲ್ಲ . ಅನಿಲದ ಪರಮಾಣುಗಳು ಭ್ರಮರಗಳ ಸಮುದಾಯದಂತೆ ಯದ್ವಾತದ್ವ ಚಲಿಸುತ್ತ , ಒಂದಕ್ಕೊಂದು ಡಿಕ್ಕಿಹೊಡೆಯುತ್ತ , ನಿರಂತರವಾಗಿ ಬೆರೆತುಕೊಳ್ಳುತ್ತಿರುತ್ತವೆ. ಈ ಕಾರಣದಿಂದಲೇ ಕೊಠಡಿಯ ಒಂದು ಮೂಲೆಯಲ್ಲಿ ಗಾಳಿಯಲ್ಲಿನ ಆಕ್ಸಿಜನ್ ಅಣುಗಳೂ, ಮತ್ತೊಂದು ಮೂಲೆಯಲ್ಲಿ ನೈಟ್ರೊಜನ್ ಅಣುಗಳೂ, ಹೀಗೆ ಸಾಂದ್ರೀಕೃತವಾಗುವುದಿಲ್ಲ . ಇಸ್ಪೀಟಿನ ಎಲೆಗಳನ್ನು ಬೆರಸಿದಾಗ ಎಲ್ಲ ಕಳಾವರ್ಗಳೂ ಸಮೂಹದ ಮೇಲ್ಬಾಗದಲ್ಲೇ ಸಂಗ್ರಹವಾಗುವುದಿಲ್ಲವಲ್ಲ ಎಂಟ್ರೊಪಿ ಪರಿಕಲ್ಪನೆಯಿಂದ ನಮಗೆ ಲಭ್ಯವಾಗಿರುವ ಒಂದು ಅತ್ಯಂತ ಮುಖ್ಯವಾದ ತಿಳುವಳಿಕೆ ಎಂದರೆ ಸಮಗ್ರ ವಿಶ್ವದ ಎಂಟ್ರೊಪಿ ನಿರಂತರವಾಗಿ ಹೆಚ್ಚುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ ಎಂಬ ಸತ್ಯದೊಂದಿಗೆ ಕಾಲದ ದಿಕ್ಕು (Direction of time) ನಿಕಟವಾಗಿ ಹೆಣೆದುಕೊಂಡಿದೆ ಎಂಬುದು ಹಾಗಾಗಿ ಕಾಲವೆಂಬ ಪ್ರವಹ ಒಂದೇ ದಿಕ್ಕಿನಲ್ಲಿ ಚಲಿಸುತ್ತದ್ದೆ , ಅದನ್ನು ತಿರುಗಿಸುವುದು ಸಾಧ್ಯವಿಲ್ಲ .ಈ ಅರಿವೇ ವಿಶ್ವದ ಎಂಟ್ರೊಪಿ ನಿರಂತರವಾಗಿ ಏರುತ್ತಿದೆ ಎಂಬ ಸತ್ಯದ ಪ್ರಾಯೋಗಿಕ ಸೂಚಕ .

ಮುಚ್ಚಿದ ವ್ಯವಸ್ಥೆಗಳು (Closed systems ) ಮತ್ತು ಅವುಗಳಲ್ಲಿನ ಅಂತರ ಸಂಪರ್ಕಗಳು ; ಇಡೀ ವಿಶ್ವವು ಒಂದು ವ್ಯೂಹ ಅಥವಾ ಮುಚ್ಚಿದ ವ್ಯವಸ್ಥೆ ಆದರೆ ಅದರಲ್ಲಿನ ಉಪವ್ಯವಸ್ಥೆಗಳ ನಡುವೆ ಸಂಪರ್ಕವಿದೆ.

ಒಂದು ಕಟ್ಟಡ, ಅದರ ಕಿಟಕಿ ಬಾಗಿಲುಗಳೆಲ್ಲಾ ಮುಚ್ಚವೆ. ಯಾರೂ ಹೊರಗೆ ಹೋಗಲಾಗುವುದಿಲ್ಲ . ಅಂದರೆ, ಮನುಷ್ಯನಿಗೆ ಸಂಬಂಧಿಸಿದಂತೆ ಅದೊಂದು ಮುಚ್ಚಿದ ವ್ಯವಸ್ಥೆ - A Closed System .ಆದರೆ , ಸಂದಿಗೊಂದಿಗಳಿಂದ ನುಸುಳುವ ಗಾಳಿಗೂ, ಕಿಟಕಿಯ ಗಾಜಿನ ಮೂಲಕ ತೊರುವ ಬೆಳಕಿಗೂ ಅದೊಂದು ತೆರೆದ ವ್ಯವಸ್ಥೆ -An open system. ಯಾವುದಾದರೂ ವಸ್ತುವಿಗೆ ಸಂಬಂಧಿಸಿದಂತೆ ಒಂದು ವ್ಯವಸ್ಥೆ ಮುಚ್ಚಿದೆ ಎಂದರೆ ಆ ವಸ್ತು ವ್ಯವಸ್ಥೆಯನ್ನು ಹೊರಗಿನಿಂದ ಪ್ರವೇಶಿಸಲಾಗದು , ಒಳಗಿನಿಂದ ಹೊರಗೆ ಹೋಗಲಾಗದು . ಅದು ಸಾಧ್ಯವಾದಾಗ ಅದು ತೆರೆದ ವ್ಯವಸ್ಥೆ . ಥರ್ಮಾಸ್ ಘ್ಲಾಸ್ಕ್ ನಲ್ಲಿ ಬಿಸಿ ಕಾಫಿ ಹಾಕಿ ಭದ್ರವಾಗಿ ಮುಚ್ಚಿದಾಗ ಅದು ಕಾಫಿ ಹಾಗೂ ಶಾಖಕ್ಕೆ ಮುಚ್ಚಿದ ವ್ಯವಸ್ಥೆ ಆದರೆ, ಭೂಮಿ ಒಂದು ತೆರೆದ ವ್ಯವಸ್ಥೆ . ದ್ರವ್ಯ ಮತ್ತು ಶಕ್ತಿ ಅದರ ಮೇಲೆ ನಿರಂತರವಾಗಿ ಸುರಿಯುತ್ತಿರುತ್ತವೆ, ಹಾಗೂ ಅದರಿಂದ ಹೊರಗೆ ಹೋಗುತ್ತಿರುತ್ತವೆ.

ವಿಶ್ವೆದಲ್ಲಿ ಅಸಂಖ್ಯಾತ ವಿದ್ಯಮಾನಗಳು ನಡೆಯುತ್ತಿರುತ್ತವೆ . ಅವೆಲ್ಲವುಗಳ ಜಾಡುಹಿಡಿಯಲು ಸಾಧ್ಯವಿಲ್ಲ . ಸದಾಕಾಲವೂ ಚಲನೆಯಲ್ಲಿ ಬದಲಾವಣೆಯಾಗುತ್ತಿರುತ್ತದೆ; ನಿರಂತರವಾಗಿ ಶಕ್ತಿ ಪರಿವರ್ತನೆಯಾಗುತ್ತಿರುತ್ತದೆ . ಇವೆಲ್ಲದರ ಮಧ್ಯೆ ಬದಲಾಗದಿರುವುದು ಯಾವುದಾದರೂ ಉಂಟೆ? ಉದಾಹರಣೆಗೆ ,ಒಂದು ಕಟ್ಟಡವನ್ನೇ ಪರಿಗಣಿಸಿ ಒಂದು ಮಹಡಿಯಿಂದ ಮತ್ತೊಂದು ಮಹಡಿಗೆ ,ಒಂದು ಕೊಠಡಿಯಿಂದ ಮತ್ತೊಂದು ಕೊಠಡಿಗೆ ಜನ ಓಡಾಡುತ್ತಿರುತ್ತಾರೆ. ಒಬ್ಬರೊಡನೊಬ್ಬರು ವಿವಿಧ ರೀತಿಯಲ್ಲಿ ಅಂತರಕ್ರಿಯಿಸುತ್ತಿರಬಹುದು ಮಾತುಗಳನ್ನು ಉಡುಗೊರಗಳನ್ನು ತಿಂಡಿಯನ್ನು , ಯೋಚನೆಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತಿರಬಹುದು. ಆದರೆ , ಇವೆಲ್ಲದರ ನಡುವೆ ಬದಲಾಗದಿರುವುದು ಯಾವುದು ? ಕಟ್ಟಡ ಮುಚ್ಚಿದ್ದರೆ ಅಲ್ಲಿನ ಜನಸಂಖ್ಯಾಯಲ್ಲಿ ಏನೂ ಬದಲಾವಣೆ ಇಲ್ಲ (ಈ ಅವಧಿಯಲ್ಲಿ ಜನನ - ಮರಣಗಳೇನೂ ಸಂಭವಿಸದಿದ್ದರೆ ) ಎಂದು ಹೇಳಬಹುದು . ಆ ದೃಷ್ಟಿಯಲ್ಲಿ ಅದೊಂದು ಮುಚ್ಚಿದ ವ್ಯವಸ್ಥೆ . ಮುಚ್ಚಿದ ವ್ಯವಸ್ಥೆ ಎಂದು ಯಾವುದನ್ನಾದರೂ ಪರಿಗಣಿಸಿದರೆ ಅದರ ಉದ್ದೇಶ್ಯ ಅಲ್ಲಿ ಎಲ್ಲ ವಿಧವಾದ ಬದಲಾವಣೆಗಳಾಗುತ್ತಿದ್ದಾಗ್ಯೂ , ಭೌತಿಕ ಸತ್ಯದ ಯಾವ ವಿಷಯ ಆ ಬದಲಾವಣೆಗಳ ಪರಣಾಮಕ್ಕೆ ಒಳಗಾಗಿಲ್ಲ ಎಂಬುದನ್ನು ಗುರುತಿಸುವುದಕ್ಕೋಸ್ಕರ .

ತೆರೆದ ವ್ಯವಸ್ಥೆಯಲ್ಲಿ ಹೊರಗಿನಿಂದ ಮುಕ್ತ ವಿನಿಮಯವಿರುತ್ತದೆ. ಆದ್ದರಿಂದ ಯಾವ ವಸ್ತು ಸಂರಕ್ಷಿತವಾಗುತ್ತದೆ ಎಂದು ಹೇಳುವುದು ಕಷ್ಟ . ವಾಸ್ತವವಾಗಿ ಎಲ್ಲ ವ್ಯವಸ್ಥೆಗಳೂ ಒಂದಲ್ಲೊಂದು ರೀತಿಯಲ್ಲಿ ತೆರದ ವ್ಯವಸ್ಥೆಗಳೇ , ಏಕೆಂದರೆ, ಒಂದು ವ್ಯವಸ್ಥೆಯನ್ನು ಮತ್ತೊಂದರಿಂದ ಸಂಪೂರ್ಣವಾಗಿ ಬೇರ್ಪಡಿಸಲಾಗುವುದಿಲ್ಲ . ಬೇರ್ಪಟ್ಟಂತೆ ತೋರುವ ವ್ಯವಸ್ಥೆಗಳೂ ಹೊರಗಿನೊಂದಿಗೆ ಸೂಕ್ಷ್ಮಸಂಪರ್ಕ ಹೊಂದಿರುತ್ತವೆ . ಇದನ್ನೇ ಅಂತರಸಂಪರ್ಕ (Interconnectedness) ಎನ್ನುವುದು . ವಿಶ್ವದಲ್ಲಿ ಎಲ್ಲವೂ ಒಂದರೊಡನೊಂದು , ಪ್ರತ್ಯಕ್ಷವಾಗಿಯೋ , ಪರೋಕ್ಷವಾಗಿಯೋ ಸಂಪರ್ಕಹೊಂದಿರುತ್ತವೆ.

ಅಂತರಸಂಪರ್ಕ ಎಂಬುದು ಒಂದು ಮಹತ್ವದ ಪರಿಕಲ್ಪನೆ ಈಚನ ಶತಮಾನದಲ್ಲಿ ಮೂಡಿ ಬಂದಿರುವ ಪ್ರಮುಖ ಪರಿಕಲ್ಪನೆಗಳಲ್ಲಿ ಇದೂ ಒಂದು ಇದಕ್ಕೆ ವೈದೃಶ್ಯವಾಗಿ ಮುಂಚಿನ ಕಾಲದ ಭೌತವಿಜ್ಜಾನದಲ್ಲಿ ಬೇರ್ಪಡೆಗೇ ಆದ್ಯತೆ ಇತ್ತು. ವಿಶ್ವದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಲು ಅವುಗಳನ್ನು ಒಂದಕ್ಕೊಂದು ಸಂಪರ್ಕವಿಲ್ಲದ , ಬೇರೆ ಬೇರೆ ವಿಷಯಗಳೆಂದು ಪರಿಗಣಿಸಿ ವಿಶ್ಲೇಷಿಸಬೇಕಾಗಿತ್ತು , ಗೋಚರ ಸತ್ಯದ ಅನೇಕ ಬೇರುಗಳನ್ನು ಅರಿಯಲು ಈ ವಿದಾನ ಪರಿಣಾಮಕಾರಿಯಾಗಿತ್ತು .

ಆದರೆ ಅಂತಹ ತುಂಡುತುಂಡಾದ ವಿಶ್ವೇಷಣೆಗಳಿಂದ ಸತ್ಯದ ಅರಿವು ಸ್ವಲ್ಪಮಟ್ಟಿಗೆ ದೊರೆತರೂ ,ಅದು ಸಮಗ್ರ ಚತ್ರವನ್ನು ನೀಡಲಾರದು ಎಂದು ಈಗ ತಿಳಿದಿದೆ ನಾವು ವಿಶ್ವವನ್ನು ಅದರ ಎಲ್ಲ ಅಂತರಸಂಪರ್ಕಗಳೂ ಸೇರಿದಂತೆ ಒಟ್ಟಾರೆಯಾಗಿ ವಿಶ್ಲೇಷಿಸಬೇಕು ಭೌತಜಗತ್ತಿಗಿಂತಲೂ ಜೀವಜಗತ್ತಿನಲ್ಲಿ ಅಂತರಸಂಪರ್ಕಗಳು ಮಹತ್ವದ ಪಾತ್ರ ವಹಿಸುತ್ತವೆ . ಅದನ್ನು ಅರ್ಥಮಾಡಿಕೊಂಡರೆ ಜಗತ್ತನ್ನು ನಮ್ಮ ಅನುಕೂಲಕ್ಕೆ ತಕ್ಕಂತೆ ನಿರ್ವಹಿಸಬಹುದು. ವಿಶ್ವದ ಅಂತಿಮ ವಿಧಿ; ಅಂತಿಮವಾಗಿ ವಿಶ್ವ ಉಷ್ಣದಿಂದ ನಾಶವಾಗುತ್ತದೆ(Heat death) . ಸಂಪೂರ್ಣವಾಗಿ ಗೊಂದಲಮಯವಾಗುವುದೇ ವಿಶ್ವದ ಹಣೆಬರಹ , ಗರಿಷ್ಟ ಎಂಟ್ರೊಪಿ ಸ್ಥಿತಿಗೆ ತಲಪುವುದೇ ಅದರ ಗುರಿ . ಇದಕ್ಕೆ Cosmic uniformizing principle ಎಂದು ಹೇಳಬಹುದು . ಇದು ಆದಿಯಿಂದಲೇ ಮೌನವಾಗಿ ಮುನ್ನಡೆಯುತ್ತಿದೆ - ದೈತ್ಯ ಗಡಿಯಾರವೊಂದು ಅಂತಿಮ ಗಳಿಗೆಯೆಡೆಗೆ ನಿಧಾನವಾಗಿ "ಟಿಕ್-ಟಿಕ್" ಎನ್ನುವಂತೆ .

Rudolf clausius ಮತ್ತು Hermann Helmholts ಅವರುಗಳು ಥರ್ಮೋಡೈನಮಿಕ್ಸ್ ನ ಎರಡನೇ ನಿಯಮದ ಗಂಭಿರ ಅಧ್ಯಯನ ಮಾಡಿ ಒಂದು ಭಯಾನಕ ನಿರ್ಧಾರಕ್ಕೆ ಬಂದರು ಅಂತಿಮವಾಗಿ ಸಮಗ್ರ ವಿಶ್ವವು ಅತ್ಯಂತ ಗೊಂದಲ ಸ್ಥಿತಿಯನ್ನು ತಲಪುತ್ತದೆ . ಆಗ ಎಲ್ಲ ಕಾಯಗಳೂ ಒಂದೇ ನಮನಾದ ತಾಪ ಹೊಂದಿದ್ದು ಅವುಗಳಲ್ಲಿ ಯಾವ ರೀತಿಯ ಕ್ರಿಯಾಶೀಲತೆಯೂ ಉಳಿದಿರುವುದಿಲ್ಲ . ಅದೇ ವಿಶ್ವದ "ತಾಪಮರಣ" Heat death ಎಂಬ ಸ್ಥಿತಿ ಎಂತಹ ಭಯಂಕರ ಭವಿಷ್ಯವಾಣಿ ಅದು ಯಾವ ಭೂಕಂಪ , ಜ್ವಾಲಾಮುಖಿಯ ಸ್ಪೋಟ, ಪ್ಲೇಗ್ ಅಥವಾ ಪ್ರಳಯಕ್ಕಿಂತಲೂ ಭೀಕರ ಸೂರ್ಯ , ಚಂದ್ರ , ಭೂಮಿ , ನಕ್ಷತ್ರಗಳು ಎಲ್ಲವೂ ಸೇರಿದಂತೆ ಸರ್ವನಾಶ . ಅದೊಂದು ವೈಚಾರಿಕ , ವೈಜ್ಞಾನಿಕ ನಿರಾಶಾವಾದ .

ಭೌತವಿಜ್ಞಾನದ ಎರಡು ಶತಮಾನಗಳ ಗಂಭೀರ ಅಧ್ಯಯನದ ನಂತರದ ತೀರ್ಮಾನವೇ ಇದು ? ಗ್ರಹ , ನಕ್ಷತ್ರಗಳ ರಹಸ್ಯವನ್ನು ಬಹಿರಂಗಪಡಿಸಿದ ಬಡಾಯಿ ಸಾಲದೆಂಬಂತೆ ಕಾಮನಬಿಲ್ಲು ಸೂರ್ಯನಬೆಳಕು ಮೋಡದ ಮೂಲಕ ಹಾದುಬರುವಾಗ ಅದರ ದಿಶೆಯಲ್ಲಾಗುವ ಪಲ್ಲಟದ ಪರಿಣಾಮವಷ್ಟೆ ಎಂಬ ನೀರಸ ವ್ಯಾಖ್ಯಾನ ಬೇರೆ . ಧೂಮಕೇತುಗಳು ಆಕಾಶದಲ್ಲಿ ಅಂಡಾಕಾರದ ಕಕ್ಷೆಗಳಲ್ಲಿ ಸುತ್ತುವ ದ್ರವ್ಯದ ತುಂಡುಗಳು ಮಾತ್ರ ಎಂದು ಹೇಳಿದುದೇನೋ ಒಳ್ಳೆಯದೇ ಆಯಿತು . ಅದರಿಂದ ಅವು ಅಪಶಕುನದ ಸೂಚಕವೆಂಬ ಭಯ ದೂರವಾಯಿತು . ಆದರೆ , ಕಡೆಗೊಂದುದಿನ ಸೂರ್ಯ ಮಾಸಿಹೋಗುತ್ತದೆ, ನಕ್ಷತ್ರಗಳೆಲ್ಲಾ ಕಳೆಗುಂದುತ್ತವೆ. ಸರ್ವವೂ ಚೈತನ್ಯರಹಿತವಾಗುತ್ತವೆ ಎಂದು ಭವಿಶ್ಯ ನುಡಿಯುವುದಕ್ಕಿಂತ ಕ್ರೂರವಾದ್ದು ಮತ್ತೇನಿದೆ? ಕವಿಗಳೂ, ತತ್ವಜ್ಞಾನಿಗಳೂ ಇದನ್ನೇ ಹೇಳಿದ್ದಾರೆ. ಆದರೆ , ಅವೆಲ್ಲ ಕಾವ್ಯ ; ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ , ಇದು ವಿಜ್ಞಾನ ಸತ್ಯಕ್ಕೆ ಅತ್ಯಂತ ಸಮೀಪವಾದ್ದು ಎಂದು ಅನೇಕರ ನಂಬಿಕೆ. ಈ ಬೃಹತ್ ವಿಶ್ವದಲ್ಲಿ ಅಪಾರ ಡ್ರವ್ಯವಿರುವುದರಿಂದ ಈ ರೀತಿಯ ಗೊಂದಲ ಬಹಳ ಕಾಲದಿಂದ ನಿಧಾನವಾಗಿ ನಡೆಯುತ್ತಿದ್ದರೂ ಅದರಿಂದ ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ಯಾವ ರೀತಿಯ ಪ್ರಭಾವವೂ ಉಂಟಾಗಿಲ್ಲ ಎಂಬುದು ಒಂದು ಸಮಾದಾನಕರವಾದ ಸಂಗತಿ. ನಮ್ಮ ವಿಶ್ವವೇನಾದರೂ ಚಿಕ್ಕದಾಗಿದ್ದು ಇದೇ ನಿಯಮಗಳು ಅನ್ವಯಿಸುವಂತಿದ್ದಿದ್ದರೆ, ಮಾನವನ ಅಸ್ತಿತ್ವ ಮೂಡುವುದಕ್ಕೆ ಸಮಯವೇ ಇರುತ್ತಿರಲ್ಲಿಲ್ಲ. ಅದಕ್ಕೆ ಮುಂಚೆಯೇ ಸ್ಥೂಲ ದ್ರವ್ಯವೆಲ್ಲಾ ಎಂದೋ ನಶಿಸಿಹೋಗುತ್ತಿತ್ತು ಅದರೆ, ಇಂದಿನ ಪರಿಸ್ಥಿತಿಯಲ್ಲಿ ವಿಶ್ವದ ತಾಪಮರಣ, ಅದು ಸಂಭವಿಸುವುದೇ ಆದರೂ ಸಧ್ಯಕ್ಕಂತೂ ಸಾಧ್ಯವಿಲ್ಲ.

ಆದಾಗ್ಯೂ, ಎಷ್ಟೋ ದೂರದ ಭವಿಷ್ಯದಲ್ಲಿ, ನಮ್ಮ ಮುಂದಿನ ಸಾವಿರಾರು ತಲೆಮಾರುಗಳು ಆಗಿಹೋದಾಂತರವೂ ಇಂತಹದೊಂದು ಖಗೋಳ ಮರ್ತ್ಯತೆ ಸಂಭವಿಸಬಹುದೆಂಬ ಸಾಧ್ಯತೆಯ ಬಗ್ಗೆ ಯೋಚಿಸುವುದೇ ಅಹಿತಕರವಾಗಿದೆ ದಯಾಮಯನಾದ ಭಗವಂತ ತನ್ನ ಸೃಷ್ಟಿಯನ್ನು ಈರೀತಿ ಮುಕ್ತಾಯಗೊಳಿಸಲಾರ ಅದನ್ನು ತಪ್ಪಿಸಲು ಮಾರ್ಗಗಳು ಇದ್ದೇ ಇರಬೇಕು. ತತ್ವಜ್ಞಾನಿಗಲೂ, ವಿಜ್ಞಾನಿಗಳೂ ಇದರ ಬಗ್ಗೆ ವಿಪುಲವಾಗಿ ಚಿಂತಿಸಿದ್ದಾರೆ. ಥರ್ಮೋಡೈನಮಿಕ್ಸ್-ನ ಎರಡನೇ ನಿಯಮ ಇಷ್ಟು ಕ್ರೂರವಾಗಿರಲಾರದು ಎಂಬುದು ಕೆಲವರ ವಾದ ಹಾಗಾಗಿ, ತಾಪಮರಣವೆಂಬ ಪರಿಕಲ್ಪನೆ ಬೌತವಿಜ್ಞಾನದ ತದೇರ್ಕವದ್ಧ ಪರಿಣಾಮವೇನಲ್ಲ ಎಂಬ ಹೊಸ ವ್ಯಾಖ್ಯಾನದ ಅಲೆಗಳು ಎದ್ದು ಜನಸಾಮಾನ್ಯರಲ್ಲಿ ಭರವಸೆ ಮೂಡಿಸುವ ಪ್ರಯತ್ನಗಳು ನಡೆಯುತ್ತಿವ.

ಉಲೇಖನ[ಬದಲಾಯಿಸಿ]

[೧] [೨]

  1. http://astrowww.phys.uvic.ca/~tatum/thermod.html
  2. http://teacher.pas.rochester.edu/phy121/lecturenotes/Chapter17/Chapter17.html