ಸದಸ್ಯ:Sanjayaradhya/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕಾವೇರಿ ಕರ್ನಾಟಕದ ಜೀವನದಿ ಎ೦ದು ಹೆಳಳಾಗುತ್ತದೆ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ. ಮುಖ್ಯವಾಗಿ ದಕ್ಷಿಣ-ಪೂರ್ವ ದಿಶೆಯಲ್ಲಿ ಹರಿಯುವ ಈ ನದಿಯ ಪಥ ಸುಮಾರು ೭೬೫ ಕಿ.ಮಿ.ಗಳಷ್ಟು ಉದ್ದವಾಗಿದೆ.ಕಾವೇರಿ ಜಲಾನಯನ ಪ್ರದೇಶ ೨೭,೭೦೦ ಚದುರ ಮೈಲಿಗಳಷ್ಟಿದ್ದು, ಕಾವೇರಿಯ ಉಪನದಿಗಳಲ್ಲಿ ಶಿಂಶಾ, ಹೇಮಾವತಿ, ಅರ್ಕಾವತಿ, ಕಪಿಲಾ, ಕಬಿನಿ, ಲಕ್ಷ್ಮಣ ತೀರ್ಧ ಮತ್ತು ಲೋಕಪಾವನಿ ನದಿಗಳನ್ನು ಹೆಸರಿಸಬಹುದು. ಕಾವೇರಿ 'ದಕ್ಷಿಣ ಗಂಗೆ'ಯೆಂದು ಪ್ರಸಿದ್ಧಿ ಪಡೆದ ಕರ್ನಾಟಕದ ಮಹಾನದಿ.ತುಲಾಮಾಸದಲ್ಲಿ ಕಾವೇರಿ ಸ್ನಾನ ಮಾಡಿದರೆ ಸಕಲ ಪಾಪಗಳೂ ನಾಶವಾಗುವುದೆಂಬ ನಂಬಿಕೆಯಿದೆ.ಕುಟಗು ಕಾವೇರಿಯನ್ನು ತಮ್ಮ ಕುಲದೈವದಂತೆ ಪೂಜಿಸುತ್ತಾರೆ. ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು, ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ.

      ಕೊಡಗಿನ ಬಳಿಯ ಬೆಟ್ಟಗಳನ್ನು ಬಿಟ್ಟ ನಂತರ ಕಾವೇರಿ ನದಿ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತದೆ. ಈ ನದಿಯಲ್ಲಿ ಮೂರು ದ್ವೀಪಗಳಿವೆ - ಕರ್ನಾಟಕದಲ್ಲಿ ಶ್ರೀರಂಗಪಟ್ಟಣ ಮತ್ತು ಶಿವನಸಮುದ್ರ, ಹಾಗೂ ತಮಿಳುನಾಡಿ ನಲ್ಲಿ ಶ್ರೀರಂಗ. ಶಿವನಸಮುದ್ರದಲ್ಲಿ ಈ ನದಿ ೩೨೦ ಅಡಿಗಳ ಎತ್ತರದಿಂದ ಧುಮುಕಿ, ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತದೆ.
                 ಭಾರತದ ಮೊದಲ ಜಲವಿದ್ಯುದಾಗಾರ ಇಲ್ಲಿ ೧೯೦೨ ರಲ್ಲಿ ಕಟ್ಟಲ್ಪಟ್ಟು ಬೆಂಗಳೂರು ನಗರಕ್ಕೆ ವಿದ್ಯುಚ್ಛಕ್ತಿಯನ್ನು ಒದಗಿಸುತ್ತಿತ್ತು. ಹೊಗೇನಕಲ್ ಜಲಪಾತವಾಗಿ ಬಿದ್ದಾದ ಮೇಲೆ ತಮಿಳುನಾಡನ್ನು ಪ್ರವೇಶಿಸುವ ಈ ನದಿ, ತಂಜಾವೂರು ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.