ಸದಸ್ಯ:Sushma Upadhya/sandbox

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
                                                                                                      ಕುಂದಾದ್ರಿ ಬೆಟ್ಟ
        ಕುಂದಾದ್ರಿ ಬೆಟ್ಟವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇದೆ. ತೀರ್ಥಹಳ್ಳಿಯಿಂದ ಆಗುಂಬೆ ಕಡೆ ಹೋಗುವಾಗ ಗುಡ್ಡೆಕೇರಿ ಎಂಬ ಗ್ರಾಮದಿಂದ ಸುಮಾರು ೯ ಕಿ.ಮೀ ದೂರದಲ್ಲಿ ಕುಂದಾದ್ರಿ ಬೆಟ್ಟವಿದೆ. ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ ಹಾಗು ನಡೆದು ಹೋಗಲು ಕಾಲು ದಾರಿ ಕೂಡ ಇದೆ. ಕುಂದಾದ್ರಿ ಬೆಟ್ಟವು ಜೈನರ ಪವಿತ್ರ ಯಾತ್ರಾ ಸ್ಥಳವಾಗಿದೆ. ಬೆಟ್ಟದ ಮೇಲೆ ಪಾರ್ಶ್ವನಾಥ ಚೈತ್ಯಾಲಯವಿದೆ. ಇಲ್ಲಿಗೆ ಪ್ರತಿ ವರುಷ ಸಾವಿರಾರು ಪ್ರವಾಸಿಗರು ಬೇಟಿ ನೀಡುತ್ತಾರೆ ಹಾಗು ನೂರಾರು ಚಾರಣಿಗರು ಚಾರಣ ಮಾಡಲು ಬರುತ್ತಾರೆ. ಬೆಟ್ಟದ ಮೇಲಿನಿಂದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಹಬ್ಬವಾಗುತ್ತದೆ. ಎಲ್ಲಿ ನೋಡಿದರಲ್ಲಿ ದಟ್ಟ ಕಾಡು, ತೋಟಗಳು, ಹೊಲ-ಗದ್ದೆಗಳು. ಬೆಟ್ಟಕ್ಕೆ ಬೇಟಿ ನೀಡುವವರು ಊಟ ಮತ್ತು ನೀರಿನ ವ್ಯವಸ್ಥೆ ಮಾಡಿಕೊಂಡು ಬಂದರೆ ಉತ್ತಮ.ಕುಂದಾದ್ರಿ ಬೆಟ್ಟದಲ್ಲಿ ಕುಂದ ಕುಂದ ಸ್ವಾಮಿಗಳು ತಪಸ್ಸು ಮಾಡಿದರೆಂಬ ಪ್ರತೀತಿಯ ಹಿನ್ನೆಲೆಯಲ್ಲಿ ಈ ಬೆಟ್ಟಕ್ಕೆ ಕುಂದಾದ್ರಿ ಎಂಬ ಹೆಸರು ಬಂತು. ಭಾಷಾ ಶಾಸ್ತ್ರದ ನಿಟ್ಟಿನಲ್ಲಿ ನೋಡಿದರೆ, ಕನ್ನಡದಲ್ಲಿ ಕುಂದ ಎಂಬ ಪದಕ್ಕೆ ಎತ್ತರವಾದ ಗೋಡೆ ಎಂಬ ಅರ್ಥವೂ ಇರುವುದರಿಂದ, ಕುಂದದ ರೀತಿ ಇರುವ ಬೆಟ್ಟಕ್ಕೆ ಕುಂದಾದ್ರಿ ಎಂಬ ಹೆಸರು ಜನಬಳಕೆಯಲ್ಲಿ ಬಂದಿರಲೂಬಹುದು.