ಸಿ.ಎಸ್.ನಾಡಗೌಡ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಸಿ.ಎಸ್.ನಾಡಗೌಡ
ಜನನ21ನೇ ನವೆಂಬರ್, 1933
ಬಲದಿನ್ನಿ, ಮುದ್ದೇಬಿಹಾಳ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಸಿ.ಎಸ್.ನಾಡಗೌಡ(ಅಪ್ಪಾಜಿ: ಚನ್ನಬಸವರಾಜ ಶಂಕರರಾವ ನಾಡಗೌಡ)ಯವರು ಮಾಜಿ ಶಾಸಕರು, ಮಂತ್ರಿಗಳು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ನಾಡಗೌಡರು 21ನೇ ನವೆಂಬರ್, 1960ರಂದು ವಿಜಯಪುರ ಜಿಲ್ಲೆಮುದ್ದೇಬಿಹಾಳ ತಾಲ್ಲೂಕಿನ ಬಲದಿನ್ನಿ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ[ಬದಲಾಯಿಸಿ]

ಧಾರವಾಡದ ಸೆಂಟ್ ಜೋಸೆಫ್ ಪ್ರೌಢ ಶಾಲೆಯಿಂದ ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿ ರಾಯಚೂರಿನ ಎಲ್.ವಿ.ಡಿ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.

ರಾಜಕೀಯ[ಬದಲಾಯಿಸಿ]

  • ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಸದಸ್ಯ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.

ನಿರ್ವಹಿಸಿದ ಖಾತೆಗಳು[ಬದಲಾಯಿಸಿ]

  • 1989ರಲ್ಲಿ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸಿ.ಎಸ್.ನಾಡಗೌಡರು ಹ್ಯಾಟಿಕ್ ಸಾಧಿಸಿದ ಜಗದೇವರಾವ್ ದೇಶಮುಖರನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷದಿಂದ ಮೊದಲ ಬಾರಿಗೆ ವಿಧಾನ ಸಭೆ ಪ್ರವೇಶಿಸಿದ್ದರು.
  • 1999, 2004, 2008 ಹಾಗೂ 2013 ನಾಲ್ಕು ಬಾರಿ ಸತತ ಕಾಂಗ್ರೆಸ್‌ ಪಕ್ಷದಿಂದ ಗೆಲುವು.
  • 2018ರಲ್ಲಿ ಬಿಜೆಪಿಯ ಎ.ಎಸ್.ಪಾಟೀಲ(ನಡಹಳ್ಳಿ)ಯವರ ವಿರುದ್ಧ ಸೋಲು.
  • 2013 - ಕರ್ನಾಟಕ ಸರ್ಕಾರದ ಸಿದ್ದರಾಮಯ್ಯ ಸಂಪುಟದಲ್ಲಿ ದೆಹಲಿ ವಿಶೇಷ ಪ್ರತಿನಿಧಿಯಾಗಿದ್ದರು.
  • ಕಾರ್ಮಿಕ ಸಚಿವ ಮತ್ತು ಸರ್ಕಾರದ ಮುಖ್ಯ ಸಚೇತಕರಾಗಿದ್ದರು.
  • 2013 - ಕರ್ನಾಟಕ ಸರ್ಕಾರದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ ರಾಜ್ ಸಮಿತಿಯ ಅಧ್ಯಕ್ಷರಾಗಿದ್ದರು.

ವೈಯಕ್ತಿಕ ಜೀವನ[ಬದಲಾಯಿಸಿ]

ನಾಡಗೌಡರು ವಿವಾಹಿತರಾಗಿದ್ದು ಪತ್ನಿಯ ಹೆಸರು ಸುವರ್ಣಾ ಮತ್ತು ಏಕೈಕ ಮಗಳು-ನಿಯಾತಿ.

ಉಲ್ಲೇಖಗಳು[ಬದಲಾಯಿಸಿ]