ಸೋಂದಾ
ಸೋಂದಾ (ಸೋದೆ) | |
|---|---|
ಹಳ್ಳಿ | |
| Country | |
| ರಾಜ್ಯ | ಕರ್ನಾಟಕ |
| ಜಿಲ್ಲೆ | ಉತ್ತರ ಕನ್ನಡ |
| Languages | |
| • Official | Kannada |
| ಸಮಯದ ವಲಯ | |
| ಸಮಯ ವಲಯ | ಯುಟಿಸಿ+5:30 (IST) |
| Nearest city | Sirsi |
ಸೋಂದಾ ಕ್ಷೇತ್ರವು ಕರ್ನಾಟಕದಲ್ಲಿರುವ ಪವಿತ್ರ ಸ್ಥಳಗಳಲ್ಲಿ ಒಂದು. ವಿವಿಧ ಪ್ರದೇಶದ ಜನರಿಂದ ಸೋಂದಾ, ಸೋದೆ, ಸ್ವಾದಿ ಮುಂತಾದ ಹೆಸರಿನಿಂದ ಕರೆಯಲ್ಪಡುವ ಈ ಸ್ಥಳವು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಸಮೀಪವಿದೆ. ಇದು ಬೆಂಗಳೂರಿನಿಂದ 450 ಕಿ.ಮೀ. ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ನಗರದಿಂದ 25 ಕಿಲೋ ಮೀಟರ್ ದೂರದಲ್ಲಿದೆ. ಸಿರ್ಸಿಯಿಂದ ತಲುಪಲು ಸಾಕಷ್ಟು ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ವಾಹನಗಳ ಸೌಕರ್ಯ ಇದೆ. ಇಲ್ಲಿ ಮಾಧ್ವ ಯತಿಗಳಲ್ಲೊಬ್ಬರಾದ ಮತ್ತು ದಾಸ ಸಾಹಿತ್ಯದಲ್ಲಿಯೂ ಕೊಡುಗೆ ಸಲ್ಲಿಸಿರುವ ವಾದಿರಾಜರ ಬೃಂದಾವನವಿದೆ. ಇಲ್ಲಿ ಶ್ರೀ ಜೈನಮಠ ಮತ್ತು ಶ್ರೀ ಸ್ವಣ೯ವಲ್ಲಿಮಠಗಳೂ ಇವೆ. ಇದು ಪ್ರಕೃತಿ ಸೌಂದರ್ಯ ವೀಕ್ಷಣಿಗೂ ಸೂಕ್ತ ಸ್ಥಳವಾಗಿದೆ.

ಈ ಕ್ಷೇತ್ರದಲ್ಲಿ ವಾದಿರಾಜರ ಬೃಂದಾವನವಲ್ಲದೆ, ತ್ರಿವಿಕ್ರಮ ದೇವರ ಮತ್ತು ಭೂತರಾಜರ ಗುಡಿಗಳಿವೆ. ತ್ರಿವಿಕ್ರಮ ದೇವರ ಗುಡಿಯಲ್ಲಿ ವಾದಿರಾಜರು ಪೂಜೆ ಸಲ್ಲಿಸುತ್ತಿದ್ದರೆಂದು ಹೇಳಲಾಗುತ್ತದೆ.ವಾದಿರಾಜರಿಗೆ ಸಂಬಂಧಿಸಿದ ಕೆಲವು ಕೃತಿ, ಹಾಡುಗಳಲ್ಲಿ ಈಬಗ್ಗೆ ಉಲ್ಲೇಖಿಸಲಾಗಿದೆ.
ಭೂತರಾಜರ ಗುಡಿ
[ಬದಲಾಯಿಸಿ]ಇಲ್ಲಿರುವ ಭೂತರಾಜರ ಗುಡಿಗೆ ಸಂಬಂಧಿಸಿದಂತೆ ಅನೇಕ ದಂತಕಥೆಗಳಿವೆ. ತನ್ನ ಪ್ರಶ್ನೆಗಳ ಮೂಲಕ ವಾದಿರಾಜರನ್ನು ಸೋಲಿಸಿ, ಅವರಿಗೆ ಉಪದ್ರ ಕೊಡಬೇಕೆಂದು ಬಂದ ಭೂತಕ್ಕೆ ತಕ್ಕ ಉತ್ತರ ಕೊಟ್ಟು ವಾದಿರಾಜರು ಅದನ್ನು ಸೋಲಿಸಿದರೆಂಬ ಪ್ರತೀತಿ ಇದೆ. ಆ ಕಾರಣದಿಂದ ಭೂತ ವಾದಿರಾಜರ ಸೇವಕನಾಗಿ, ಈ ಕ್ಷೇತ್ರದಲ್ಲಿ ನೆಲೆಸಿದೆ ಎಂದು ಸ್ಥಳೀಯರ ನಂಬಿಕೆಯಾಗಿದೆ. ಈಗಲೂ ಮಾನಸಿಕ ರೋಗಗಳಿಂದ ನರಳುತ್ತಿರುವ( ದೆವ್ವ ಹಿಡಿದವರು ಎಂದು ಹೇಳಲಾಗುವವರು) ಜನರನ್ನು ಈ ಸ್ಥಳಕ್ಕೆ ಕರೆತರಲಾಗುತ್ತದೆ. ಅವರು ಭೂತರಾಜರಿಗೆ ಹರಕೆ,ಸೇವೆಗಳನ್ನು ಸಲ್ಲಿಸುವುದರಿಂದ ಅವರ ಮನೋವಿಕಾರಗಳು ದೂರವಾಗುತ್ತದೆ ಎಂದು ಜನರ ನಂಬಿಕೆಯಾಗಿದೆ. ವಾದಿರಾಜರ ಬೃಂದಾವನದ ಸಮೀಪದಲ್ಲಿ ಧವಳ ಗಂಗಾ ಎಂಬ ಸರೋವರವಿದೆ. ಈ ಕೊಳದ ಒಂದು ಮೂಲೆಯನ್ನು ಭೂತರಾಜರ ಸ್ಥಳ ಎಂದು ಕರೆಯಲಾಗುತ್ತದೆ. ಆ ಸ್ಥಳವನ್ನು ಜನರು ಉಪಯೋಗಿಸುವುದಿಲ್ಲ. ವಾದಿರಾಜರು ಧವಳ ಗಂಗೆಯ ಗಂಗಾಧರ ಮಹಾಲಿಂಗ ಎಂದು ಶಿವನನ್ನು ಸ್ತುತಿಸಿರುವ ಕೀರ್ತನೆಯು ಇದೇ ಸರೋವರದ ಕುರಿತಾಗಿದೆ.
ತಪೋವನ
[ಬದಲಾಯಿಸಿ]
ದಟ್ಟ ಕಾಡಿನ ನಡುವೆ ಇರುವ ಒಂದು ಪ್ರದೇಶದಲ್ಲಿ ವಾದಿರಾಜರು ತಪಸ್ಸು ಮಾಡುತ್ತಿದ್ದರೆಂದು ಹೇಳಲಾಗುತ್ತದೆ. ಶಾಲ್ಮಲಾ ನದಿ ಇಲ್ಲಿ ಸಣ್ಣದಾಗಿ ಹರಿಯತ್ತದೆ. ನದಿ ತೀರದ ಬಂಡೆಯೊಂದರೆಲ್ಲಿ ವಾದಿರಾಜರ ಇಷ್ಟ ದೈವವಾದ ಹಯಗ್ರೀವ ದೇವರ ಚಿತ್ರವನ್ನು ಕಾಣಬಹುದಾಗಿದೆ. ==ಹತ್ತಿರದ ಪ್ರೇಕ್ಷಣೀಯ ಸ್ಥಳಗಳು== ಶ್ರೀ ಸ್ವರ್ಣವಲ್ಲೀ ಮಠ, ಶ್ರೀ ವಾದಿರಾಜ ಮಠ, ಜೈನ ಮಠ, ವೆಂಕಟರಮಣ ದೇವಸ್ಥಾನ, ಶಂಕರನಾರಾಯಣ ದೇವಸ್ಥಾನ, ಸದಾಶಿವ ದೇವಸ್ಥಾನ, ಸಿರ್ಸಿಯ ಮಾರಿಕಾಂಬಾ ದೇವಸ್ಥಾನ, ಸಹಸ್ರಲಿಂಗ ಮತ್ತು ಯಾಣ ಇಲ್ಲಿಗೆ ಹತ್ತಿರದ ಪ್ರೇಕ್ಷಣೀಯ ಸ್ಥಳಗಳು.
ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. |
- Pages using infobox settlement with bad settlement type
- Pages using infobox settlement with unknown parameters
- Pages using infobox settlement with no coordinates
- Articles lacking sources
- All articles lacking sources
- Pages needing interwikilinks
- ಐತಿಹಾಸಿಕ ಸ್ಥಳಗಳು
- ಕರ್ನಾಟಕದ ಪ್ರಮುಖ ಸ್ಥಳಗಳು
- ಭಾರತದ ಪವಿತ್ರ ಕ್ಷೇತ್ರಗಳು
- ಹಿಂದೂ ಧರ್ಮ
- ದಾಸ ಸಾಹಿತ್ಯ
- ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು
- ಸಿರ್ಸಿ ತಾಲೂಕಿನ ಪ್ರವಾಸಿ ತಾಣಗಳು