ಹುಣಶ್ಯಾಳ
ಹುಣಶ್ಯಾಳ
| |
|---|---|
ಹಳ್ಳಿ | |
| Government | |
| • ಗ್ರಾಮ ಪಂಚಾಯಿತಿಯ ಸದಸ್ಯ | ಸದಾಶಿವಪ್ಪ ಲಕ್ಕಪ್ಪ ಹುಣಶ್ಯಾಳ |
| Population (2011) | |
• Total | ೬೦೦ |
ಹುಣಶ್ಯಾಳ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.
ಭೌಗೋಳಿಕ
[ಬದಲಾಯಿಸಿ]ಗ್ರಾಮವು ಭೌಗೋಳಿಕವಾಗಿ 16* 32' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಜನಸಂಖ್ಯೆ
[ಬದಲಾಯಿಸಿ]ಗ್ರಾಮದಲ್ಲಿ ಜನಸಂಖ್ಯೆ ಸುಮಾರು 600 ಇದೆ. ಅದರಲ್ಲಿ 320 ಪುರುಷರು ಮತ್ತು 280 ಮಹಿಳೆಯರು ಇದ್ದಾರೆ.
ಹವಾಮಾನ
[ಬದಲಾಯಿಸಿ]ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 42°C ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ 9°C ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
- ಬೇಸಿಗೆಕಾಲ - 35°C - 42°C
- ಮಳೆಗಾಲ - 18°C - 32°C
- ಚಳಿಗಾಲ - 15°C - 28°C
- ಮಳೆ - ಪ್ರತಿ ವರ್ಷ 300 - 600ಮಿಮಿ ಗಳಸ್ಟು ಆಗಿತ್ತದೆ
ಆಹಾರ
[ಬದಲಾಯಿಸಿ]ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಸಂಸ್ಕೃತಿ
[ಬದಲಾಯಿಸಿ]ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆಯನ್ನು ಧರಿಸುತ್ತಾರೆ.
ಕಲೆ
[ಬದಲಾಯಿಸಿ]ಡೊಳ್ಳಿನ ಪದ, ಗೀಗೀ ಪದ, ಹಂತಿ ಪದ, ಜಾನಪದ, ಹರಿ ಭಜನೆ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ.
ಧರ್ಮ
[ಬದಲಾಯಿಸಿ]ಗ್ರಾಮದಲ್ಲಿ ಹಿಂದೂ ಜನರಿದ್ದಾರೆ.
ಭಾಷೆ
[ಬದಲಾಯಿಸಿ]ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ.
ದೇವಾಲಯ
[ಬದಲಾಯಿಸಿ]- ಶ್ರೀ ಮಹಾಲಕ್ಷ್ಮಿ ದೇವಾಲಯ
- ಶ್ರೀ ಲಕ್ಕಮ್ಮದೇವಿ ದೇವಾಲಯ
- ಶ್ರೀ ಮಲ್ಲಿಕಾರ್ಜುನ ದೇವಾಲಯ
- ಶ್ರೀ ಹಣಮಂತ ದೇವಾಲಯ
- ಶ್ರೀ ಮರಗಮ್ಮದೇವಿ ದೇವಾಲಯ
ಹಬ್ಬ
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಕೃಷಿ
[ಬದಲಾಯಿಸಿ]ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ.
ನೀರಾವರಿ
[ಬದಲಾಯಿಸಿ]ಗ್ರಾಮದಲ್ಲಿ ಬಹುಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ನಿಂಬೆಹಣ್ಣು , ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಉದ್ಯೋಗ
[ಬದಲಾಯಿಸಿ]ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 70% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ.
ಬೆಳೆ
[ಬದಲಾಯಿಸಿ]ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಸೂರ್ಯಕಾಂತಿ, ಪಪ್ಪಾಯಿ, ಹತ್ತಿ,ದ್ರಾಕ್ಷಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಸಸ್ಯ
[ಬದಲಾಯಿಸಿ]ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಹುಣಸೆ ಮರ ಇತ್ಯಾದಿ.
ಪ್ರಾಣಿ
[ಬದಲಾಯಿಸಿ]ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ.
ಆರ್ಥಿಕತೆ
[ಬದಲಾಯಿಸಿ]ಗ್ರಾಮದ ಆರ್ಥಿಕ ಪರಿಸ್ಥಿತಿ ಮಧ್ಯಮ ತರಗತಿಯಲ್ಲಿದೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದೆ.
ಸಾಕ್ಷರತೆ
[ಬದಲಾಯಿಸಿ]ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು 75%. ಅದರಲ್ಲಿ 85% ಪುರುಷರು ಹಾಗೂ 68% ಮಹಿಳೆಯರು ಸಾಕ್ಷರತೆ ಹೊಂದಿದೆ.
ರಾಜಕೀಯ
[ಬದಲಾಯಿಸಿ]ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.
- Pages with non-numeric formatnum arguments
- Articles with short description
- Short description with empty Wikidata description
- Pages using infobox settlement with bad settlement type
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates