ಸದಸ್ಯ:MADHUSUDANA K

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಧುಸೂದನ ಕೆ. ನಾನು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೂವಿನಹಡಗಲಿಯಲ್ಲಿ ಜನಿಸಿದ್ದು ನನ್ನ ಬಾಲ್ಯದ ಶಿಕ್ಷಣವನ್ನು ಹುಟ್ಟೂರಿನ ತುಂಗಭದ್ರಾ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ. ಹರಪನಹಳ್ಳಿಯ ಶೇ.ಷಾ.ಜಿ ಅಸ್ತಿಮಲ್ ಜೈನ್ ಪಿಯು ಕಾಲೇಜಿನ ಕಲಾ ವಿಭಾಗದಲ್ಲಿ ಪಿಯುಸಿ ಅಧ್ಯಯನ ಮಾಡಿ, ನಂತರ ಹೂವಿನಹಡಗಲಿಯ ಜಿ.ಬಿ.ಆರ್.ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ ವಿದ್ಯಾಭ್ಯಾಸವನ್ನು ಪೂಣಗೊಳಿಸಿ ನಂತರ ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುವ ಮೂಲಕ ಬಿಜಿಆರ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದೆನ. ಜತೆಗೆ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಣಾಗದಲ್ಲಿ ಡಾ.ವೀರೇಶ ಬಡಿಗೇರ ಅವರ ಮಾರ್ಗದರ್ಶನದಲ್ಲಿ ಕನ್ನಡದಲ್ಲಿ ವಿಶ್ವಕರ್ಮ ಪುರಾಣಗಳು ಎಂಬ ವಿಷಯದಲ್ಲಿ ಸಂಶೋಧನೆ ಮಾಡುತ್ತಿದೆ. ಜತೆಗೆ ಕನ್ನಡ ದಿನ ಪತ್ರಕೆಯಾದ ವಿಜಯವಾಣಿಯಲ್ಲಿ ತಾಲೂಕು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ.