ಗಾಂಡೀವ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಗಾಂಡೀವ ಒಂದು ದಿವ್ಯ ಧನುಸ್ಸು. ಈ ಧನುಸ್ಸು ಬ್ರಹ್ಮನಿಂದ ಇಂದ್ರನಿಗೂ,ಇಂದ್ರನಿಂದ ವರುಣನಿಗೂ,ವರುಣನಿಂದ ಅಗ್ನಿಗೂ ಬಂತು. ಖಾಂಡವದಹನ ಸಮಯದಲ್ಲಿ ಅಗ್ನಿ ಅರ್ಜುನ ಮಾಡಿದ ಉಪಕಾರಕ್ಕಾಗಿ ಆತನಿಗಿದನ್ನು ಕೊಟ್ಟ[೧]. ಈ ಧನಸ್ಸು ಎರಡು ಅಕ್ಷಯ ಬತ್ತಳಿಕೆಗಳೊಂದಿಗೆ ಅರ್ಜುನನಿಗೆ ಪ್ರಾಪ್ತವಾಗಿತ್ತು. ಈ ಕಾರಣದಿಂದಲೇ ಅವನು ಗಾಂಡೀವಿ ಎನಿಸಿದ. ಇದರ ಮಹಿಮೆಯಿಂದ ಅರ್ಜುನ ಎಲ್ಲ ದಿಕ್ಕುಗಳನ್ನು ಗೆದ್ದು, ಇಂದ್ರನನ್ನು ಸೋಲಿಸಿದುದಲ್ಲದೆ ಇದರ ತುದಿಯಿಂದ ಶಿವನ ನೆತ್ತಿ ಮೇಲೆ ಹೊಡೆದು ಗಾಯ ಮಾಡಿದ. ಮಹಾಪ್ರಸ್ಥಾನ ಸಮಯದಲ್ಲಿ ಅರ್ಜುನ ಇದನ್ನು ಸಮುದ್ರದಲ್ಲಿ ಬಿಸಾಡಿದನೆಂದು ಹೇಳಲಾಗಿದೆ. ಅರ್ಜುನನು ಕುರುಕ್ಷೇತ್ರ ಯುದ್ಧದಲ್ಲಿ ಈ ಆಯುಧವನ್ನು ಬಳಸಿದನು, ಅವನನ್ನು ಸೋಲಿಸುವವರೇ ಇರಲಿಲ್ಲ. ಯಾವುದೇ ಸಾಮಾನ್ಯ ವ್ಯಕ್ತಿಗೆ ಗಾಂಡೀವವಿನ ನಿಯಂತ್ರಣ ಸಾಧ್ಯವಾಗಿರಲಿಲಲ್ಲ. ಬಿಲ್ಲನ್ನು ಹೊಡೆದಾಗ ಅದು ಗುಡುಗು ಧ್ವನಿ ಮಾಡುತ್ತಿತ್ತು. ಇದು 108 ಬಿಲ್ಲು ತಂತಿಗಳನ್ನು ಹೊಂದಿತ್ತು, ಅವಿನಾಶಿಯಾಗಿ ಇತ್ತು ಮತ್ತು ಇತರ ವಿಶೇಷ ಗುಣಗಳನ್ನು ಹೊಂದಿತ್ತು.

ಉಲ್ಲೇಖಗಳು[ಬದಲಾಯಿಸಿ]

  1. Bharadvaja Sarma, Vyāsa, Bharadvaja Sarma. Vyasa's Mahabharatam. Academic Publishers. p. 844.{{cite book}}: CS1 maint: multiple names: authors list (link)

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:



"https://kn.wikipedia.org/w/index.php?title=ಗಾಂಡೀವ&oldid=1170542" ಇಂದ ಪಡೆಯಲ್ಪಟ್ಟಿದೆ