ಕುವೆಂಪು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Undo revision 156017 by 117.192.33.90 (talk) clean up |
corrected broken info box |
||
೧ ನೇ ಸಾಲು: | ೧ ನೇ ಸಾಲು: | ||
{{Infobox |
{{Infobox Writer |
||
| name = ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ* |
| name = ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ* |
||
| image = Kuvempu.jpg |
| image = Kuvempu.jpg |
೧೧:೧೮, ೯ ಅಕ್ಟೋಬರ್ ೨೦೧೦ ನಂತೆ ಪರಿಷ್ಕರಣೆ
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ* | |
---|---|
ಜನನ | ೧೯೦೪* ಕುಪ್ಪಳ್ಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ |
ಮರಣ | ೧೯೯೪ ಮೈಸೂರು |
ಕಾವ್ಯನಾಮ | ಕುವೆಂಪು |
ವೃತ್ತಿ | ಲೇಖಕ, ಪ್ರಾಧ್ಯಾಪಕ, ಕುಲಪತಿ* |
ರಾಷ್ಟ್ರೀಯತೆ | ಭಾರತೀಯ |
ಕಾಲ | (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ) |
ಪ್ರಕಾರ/ಶೈಲಿ | ಕಥೆ, ಕವನ, ಕಾದಂಬರಿ |
ವಿಷಯ | ಕರ್ನಾಟಕ, ರಾಮಾಯಣ, ಜೀವನ, ಶಿವಮೊಗ್ಗ |
ಸಾಹಿತ್ಯ ಚಳುವಳಿ | ಬಂಡಾಯ, ನವೋದಯ |
ಪ್ರಭಾವಗಳು
| |
www |
ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.
ಜೀವನ
ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).
ರಾಷ್ಟ್ರಕವಿ ಡಾ.ಕು.ವೆಂ.ಪು ಅವರ ಕುರಿತ ಮತ್ತೊಂದು ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ http://kannadaratna.com/achievers/kuvempu.html
ಸಂದೇಶ
ಓ ನನ್ನ ಚೇತನ, ಆಗು ನೀ ಅನಿಕೇತನ
ವಿಶ್ವ ಮಾನವ ಸಂದೇಶ
ಪ್ರತಿಯೊಂದು ಮಗುವೂ ಹುಟ್ಟುತ್ತಲೆ -ವಿಶ್ವ ಮಾನವ. ಬೆಳೆಯುತ್ತಾ ನಾವು ಅದನ್ನು ದೇಶ, ಭಾಷೆ, ಮತ, ಜಾತಿ,ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ”’ವಿಶ್ವಮಾನವ”’ನನ್ನಾಗಿ ಮಾಡುವುದೆ ವಿದ್ಯೆ, ಸಂಸ್ಕೃತಿ, ನಾಗರಿಕತೆಯ ಕರ್ತವ್ಯವಾಗಬೇಕು ಈ ದರ್ಶನವನ್ನೆ ’ವಿಶ್ವಮಾನವ ಗೀತೆ’ ಸಾರುತ್ತದೆ
ಸಾಹಿತ್ಯ
ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು.
ಇವರ ವಿಶ್ವಮಾನವ ಸಂದೇಶ ಅತಿ ಪ್ರಸಿದ್ಡವಾಗಿದೆ.
ಶ್ರೀ ರಾಮಾಯಣ ದರ್ಶನಂ
ಕುವೆಂಪುರವರು ಬರೆದ ಈ ಕೃತಿಯು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತವಾಗಿದೆ. ಕನ್ನಡದ ಅತ್ಯಮೂಲ್ಯ ಗ್ರಂಥಗಳಲ್ಲಿ ಒಂದು, ಈ ಕೃತಿ. ಈ ಕೃತಿ ಕನ್ನಡದ ಮೊದಲ ಆಧುನಿಕ ಮಹಾಕಾವ್ಯ; ಸರಳರಗಳೆಯನ್ನು ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಬಳಸಲಾಗಿದೆ.
ಕೃತಿಗಳು
ಕಾದಂಬರಿ:
- ಕಾನೂರು ಹೆಗ್ಗಡತಿ (ಚಲನ ಚಿತ್ರವಾಗಿದೆ)
- ಮಲೆಗಳಲ್ಲಿ ಮದುಮಗಳು (ಧಾರವಾಹಿಯಾಗಿದೆ)
ನಾಟಕಗಳು:
- ಬೆರಳ್ಗೆ ಕೊರಳ್
- ಶೂದ್ರ ತಪಸ್ವಿ
- ಸ್ಮಶಾನ ಕುರುಕ್ಷೇತ್ರ
- ರಕ್ತಾಕ್ಷಿ
- ಬಿರುಗಾಳಿ
- ಯಮನ ಸೋಲು
- ನನ್ನ ಗೋಪಾಲ (ಮಕ್ಕಳ ನಾಟಕ)
- ವಾಲ್ಮೀಕಿಯ ಭಾಗ್ಯ
- ಮಹಾರಾತ್ರಿ
- ಜಲಗಾರ
- ಚಂದ್ರಹಾಸ
- ಬಲಿದಾನ
- ಮೋಡಣ್ಣನ ತಮ್ಮ (ಮಕ್ಕಳ ನಾಟಕ)
ಚಿತ್ರ ಪ್ರಬಂಧ:
ವಿಚಾರ:
ಆತ್ಮ ಚರಿತ್ರೆ:
ಕಾವ್ಯಗಳು:
- ಶ್ರೀ ರಾಮಾಯಣ ದರ್ಶನ೦
- ಕೊಳಲು
- ಅಗ್ನಿಹಂಸ
- ಅನಿಕೇತನ
- ಅನುತ್ತರಾ
- ಇಕ್ಶುಗಂಗೋತ್ರಿ
- ಕದರಡಕೆ
- ಕಥನ ಕವನಗಳು
- ಕಲಾಸುಂದರಿ
- ಕಿಂಕಿಣಿ
- ಕೃತ್ತಿಕೆ
- ಜೇನಾಗುವ
- ನವಿಲು
- ಪಕ್ಷಿಕಾಶಿ
- ಚಿತ್ರಾಂಗದಾ
- ಪ್ರೇತಕ್ಯು
- ಪ್ರೇಮಕಾಶ್ಮೀರ
- ಮಂತ್ರಾಕ್ಷತೆ
- ಷೋಡಶಿ
- ಹಾಳೂರು
- ಕೋಗಿಲೆ
- ಪಾಂಚಜನ್ಯ
- ಕುಟೀಚಕ
ಕಥಾಸಂಕಲನ:
- ನನ್ನ ದೇವರು ಮತ್ತು ಇತರ ಕಥೆಗಳು
ವಿಮರ್ಶೆ:
- ದ್ರೌಪದಿಯ ಶ್ರೀಮುಡಿ
ಜೀವನ ಚರಿತ್ರೆ:
- ಸ್ವಾಮಿ ವಿವೇಕಾನಂದ
- ಶ್ರೀ ರಾಮಕೃಷ್ಣ ಪರಮಹಂಸ
ಕುವೆಂಪುರವರ ಬಗ್ಗೆ ಇತರರು ಬರೆದ ಪುಸ್ತಕಗಳು
- ಮಗಳು ಕಂಡ ಕುವೆಂಪು - ಲೇ: ತಾರಿಣಿ ಚಿದಾನಂದ ಪ್ರಕಾಶಕರು:ಪುಸ್ತಕ ಪ್ರಕಾಶನ
- ಅಣ್ಣನ ನೆನಪು - ಲೇ: ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರಕಾಶಕರು:ಪುಸ್ತಕ ಪ್ರಕಾಶನ
- ಯುಗದ ಕವಿ-ಲೇ: ಡಾ.ಕೆ.ಸಿ.ಶಿವಾರೆಡ್ಡಿ
- ಹೀಗಿದ್ದರು ಕುವೆಂಪು - ಲೇ:ಪ್ರಭುಶಂಕರ
ಬೆರಳ್ಗೆಕೊರಳ್ ನಾಟಕವುಸಹಚಲನಚಿತ್ರವಾಗಿದೆ.
ಪ್ರಶಸ್ತಿ ಪುರಸ್ಕಾರಗಳು
- ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೭)
- ಪದ್ಮಭೂಷಣ (೧೯೫೮)
- ಪದ್ಮವಿಭೂಷಣ (೧೯೮೯)
- ಕರ್ನಾಟಕ ರತ್ನ (೧೯೯೨)
- ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೫೫)
- ಪಂಪ ಪ್ರಶಸ್ತಿ(೧೯೮೮)
- ರಾಷ್ಟ್ರಕವಿ ಎಂದು ಬಿರುದು (೧೯೬೪)
ಇತರೆ ಸಂಬಂಧಪಟ್ಟ ಪುಟಗಳು
- ಕುವೆಂಪು ವಿಶ್ವವಿದ್ಯಾನಿಲಯ - ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಎಂಬ ಊರಿನಲ್ಲಿ ಕುವೆಂಪು ಹೆಸರಿನ ವಿಶ್ವವಿದ್ಯಾನಿಲಯ ಸ್ಥಾಪನೆ.
- ಪೂರ್ಣಚಂದ್ರ ತೇಜಸ್ವಿ - ಕುವೆಂಪುರವರ ಪುತ್ರ, ಸಾಹಿತಿ.
ಹೊರಗಿನ ಸಂಪರ್ಕಗಳು
- ಕುವೆಂಪು ಅವರ ಅಧಿಕೃತ ತಾಣ (ಉದಯರವಿ ಪ್ರಕಾಶನ)
- NIC ಪುಟದಲ್ಲಿ ಕುವೆಂಪು
- ವಿಚಾರಮಂಟಪ.ನೆಟ್ - ಕುವೆಂಪುರವರ ಕೆಲವು ಲೇಖನಗಳು.