ಮೈಸೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.2+) (Robot: Modifying sr:Mysore to sr:Мајсор
ಚು r2.6.8) (Robot: Adding eo:Majsur
೨೨೯ ನೇ ಸಾಲು: ೨೨೯ ನೇ ಸಾಲು:
[[de:Mysore]]
[[de:Mysore]]
[[en:Mysore]]
[[en:Mysore]]
[[eo:Majsur]]
[[es:Mysore]]
[[es:Mysore]]
[[fa:میسور]]
[[fa:میسور]]

೧೧:೩೧, ೭ ಡಿಸೆಂಬರ್ ೨೦೧೨ ನಂತೆ ಪರಿಷ್ಕರಣೆ

ಮೈಸೂರು
ಮೈಸೂರು ನಗರದ ಪಕ್ಷಿನೋಟ
ಮೈಸೂರು ನಗರದ ಪಕ್ಷಿನೋಟ
ಮೈಸೂರು ಅರಮನೆ

ಮೈಸೂರು
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಮೈಸೂರು
ನಿರ್ದೇಶಾಂಕಗಳು 12.3° N 76.65° E
ವಿಸ್ತಾರ
 - ಎತ್ತರ
128.42 km²
 - ೭೭೦ ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ

 - 6,223.55/ಚದರ ಕಿ.ಮಿ.
ಮಹಾಪೌರ(ಮೇಯರ್) ಶ್ರೀಅಯೂಬ್ ಖಾನ್
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 570 0xx
 - +91-(0)821
 - KA-09, KA-55

ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ, ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಮೈಸೂರನ್ನು 'ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ' ಎಂದು ಕರೆಯಲಾಗಿದೆ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಕೆಲವೊಮ್ಮೆ ಅರಮನೆಗಳ ನಗರ ಎಂದೂ ಕರೆಯಾಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಕ್ಯಾತಿಯನ್ನೂ ಪಡೆದಿದೆ.

ಮೈಸೂರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಹಲವನ್ನು ಒಳಗೊಂಡಿದೆ. ಇಲ್ಲಿನ ಮುಖ್ಯ ಆಕರ್ಷಣೆಗಳಲ್ಲಿ ಕೆಲವೆಂದರೆ ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ, ಕಾರಂಜಿ ಕೆರೆ, ಕುಕ್ಕರಹಳ್ಳಿ ಕೆರೆ ಇತ್ಯಾದಿ.ರೀಜನಲ್ ಮ್ಯೂಜಿಯ್ಂ ಆಫ್ ನ್ಯಾಚುರಲ್ ಹಿಸ್ಟರಿ,ಜಗನ್ಮೊಹನ ಅರಮನೆ. ಮೈಸೂರಿಗೆ ಸಮೀಪದಲ್ಲಿರುವ ಆಕರ್ಷಣೆಗಳಲ್ಲಿ ಕೆಲವು ಶ್ರೀರಂಗಪಟ್ಟಣ, ಕೃಷ್ಣರಾಜಸಾಗರ, ರಂಗನತಿಟ್ಟು, ಬಂಡಿಪುರ,ತಲಕಾಡು,ಮುಡುಕುತೊರೆ ತಿರುಮಕೂಡಲು ನರಸೀಪುರ ಇತ್ಯಾದಿ.

ಇತಿಹಾಸ

ಮೈಸೂರು ನಗರದ ಸ್ಥಾಪನೆ ಸುಮಾರು ೧೧ನೇ ಶತಮಾನದಲ್ಲಿ ನಡೆಯಿತೆಂದು ನಂಬಲಾಗಿದೆ. ೧೪ ನೆಯ ಶತಮಾನದ ಕೊನೆಯ ಹೊತ್ತಿಗೆ ಒಡೆಯರ್ ವಂಶದ ಅರಸರು ಮೈಸೂರನ್ನು ಆಳಲಾರಂಭಿಸಿದರು. ಈ ವಂಶದ ಮೊದಲ ಅರಸು "ಯದುರಾಯ". ಹಾಗಾಗಿ ವಂಶದ ಹೆಸರು ಯದುವಂಶ ಎಂದಾಯಿತು. ಮೊದಲಿಗೆ ವಿಜಯನಗರ ಸಾಮ್ರಾಜ್ಯದ ಭಾಗವಾಗಿದ್ದ ಮೈಸೂರು ಸಂಸ್ಥಾನ ೧೫೬೫ ರಲ್ಲಿ ವಿಜಯನಗರದ ಪತನದ ನಂತರ ಸ್ವತಂತ್ರ ರಾಜ್ಯವಾಯಿತು. ರಣಧೀರ ಕಂಠೀರವ ನರಸರಾಜ ಒಡೆಯರ್ ಈ ಸಂಸ್ಥಾನವನ್ನು ವಿಸ್ತರಿಸಿದವರಲ್ಲಿ ಮುಖ್ಯ ರು.

೧೮ನೆಯ ಶತಮಾನದಲ್ಲಿ ಒಡೆಯರ್ ಅರಸರ ಪ್ರಭಾವ ಕಡಿಮೆಯಾಗಿ ಹೈದರ್ ಅಲಿ ಮತ್ತು ಟೀಪು ಸುಲ್ತಾನ್‌ರ ಆಡಳಿತ ನಡೆಯಿತು. ಈ ಸಮಯದಲ್ಲಿ ಸಾಮ್ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣ ಮತ್ತು ಮೈಸೂರು ನಗರಗಳ ನಡುವೆ ಬದಲಾಗುತ್ತಿತ್ತು. ಮೈಸೂರು ಸಂಸ್ಥಾನ ಆಧುನಿಕ ಕರ್ನಾಟಕದ ದಕ್ಷಿಣ ಭಾಗದ ಬಹುಭಾಗವನ್ನು ಒಳಗೊಂಡಿತ್ತು. ೧೭೯೯ರಲ್ಲಿ ಟೀಪು ಸುಲ್ತಾನನ ಸೋಲಿನ ನಂತರ, ಬ್ರಿಟಿಷರು ಒಡೆಯರ್ ಮನೆತನವನ್ನು ಸಿಂಹಾಸನದ ಮೇಲೆ ಪುನಃ ಸ್ಥಾಪಿಸಿದರು. ಮೈಸೂರು ಬ್ರಿಟಿಷ್ ಸಾಮ್ರಾಜ್ಯದ ಕೆಳಗೆ ಉಳಿಯಿತು, ಮತ್ತು ೧೮೩೪ ರಲ್ಲಿ ರಾಜಧಾನಿಯನ್ನು ಬೆಂಗಳೂರಿಗೆ ವರ್ಗಾಯಿಸಲಾಯಿತು. ಮೈಸೂರು ಸಂಸ್ಥಾನ ೧೯೪೭ರಲ್ಲಿ ಭಾರತದ ಸ್ವಾತಂತ್ರ್ಯಾನಂತರ ಭಾರತ ಗಣರಾಜ್ಯವನ್ನು ಸೇರಿ ೧೯೫೦ ರಲ್ಲಿ ಮೈಸೂರು ರಾಜ್ಯ ಎಂಬ ಹೆಸರು ಪಡೆಯಿತು. ನಂತರ, ಈ ರಾಜ್ಯ ೧೯೫೬ರ ಏಕೀಕರಣ ನಂತರ "ವಿಶಾಲ ಮೈಸೂರು ರಾಜ್ಯ" ಎಂಬ ಹೆಸರು ಪಡೆಯಿತು. ಆ ಬಳಿಕ ೧೯೭೩ರಲ್ಲಿ "ಕರ್ನಾಟಕ ರಾಜ್ಯ " ಎಂಬ ಹೆಸರು ಸ್ಥಿರವಾಯಿತು.

ಉಗಮ

ಮೈಸೂರು ಎಂಬ ಹೆಸರು ಆಂಗ್ಲ ಭಾಷೆಯಿಂದ ರೂಪಾಂತರಗೊಂಡಿದೆ ಇದರ ಮೂಲ ಹೆಸರು ಮಹಿಷಪುರಿ ಇದರ ಅರ್ಥ ಮಹಿಷನ ವಾಸಸ್ಥಾನ ಎಂದು ಕನ್ನಡದಲ್ಲಿ ಹೇಳಬಹುದು. ಮಹಿಷ ಎಂದರೆ ಮಹಿಷಾಸುರ ಎಂಬ ಪುರಾಣದಲ್ಲಿ ಬರುವ ಒಬ್ಬ ರಾಕ್ಷಸ ಈತ ಮಾನವ ಮತ್ತು ಎಮ್ಮೆ ಎರಡೂ ರೂಪದಲ್ಲಿ ಇರುವ ವ್ಯಕ್ತಿ . ಹಿಂದೂ ಪುರಾಣದ ಪ್ರಕಾರ ಈ ಪ್ರದೇಶವನ್ನು ರಾಕ್ಷಸ ಮಹಿಶಾಸುರನು ಆಳುತ್ತಿದ್ದ , ಆ ರಾಕ್ಷಸ ತಾಯಿ ಚಾಮುಂಡೇಶ್ವರಿಯಿಂದ ಹತನಾಗುತ್ತಾನೆ ಬಳಿಕ ಚಾಮುಂಡೇಶ್ವರಿಯು ಅದೇ ಬೆಟ್ಟದ ಮೇಲೆ ನೆಲೆಗೊಳ್ಳುತ್ತಾಳೆ. ನಂತರ ಮಹಿ‍‌ಷೂರು ಮಹಿಸೂರಾಗಿ ತದನಂತರ ಕೊನೆಯದಾಗಿ ಮೈಸೂರು ಎಂದು ಬದಲಾವಣೆಯಾಗಿದೆ. ಡಿಸೆಂಬರ್ 2005 ರಲ್ಲಿ, ಕರ್ನಾಟಕ ಸರ್ಕಾರ ಮೈಸೂರು ನಗರದ ಇಂಗ್ಲೀಷ್ ಹೆಸರನ್ನು ಬದಲಾಯಿಸಲು ಇಚ್ಛೆಯನ್ನು ಪ್ರಕಟಿಸಿತು ಭಾರತ ಸರ್ಕಾರವು ಇದನ್ನು ಅಂಗೀಕರಿಸಿದೆ, ಆದರೆ ಹೆಸರನ್ನು ಸೇರಿಸಲು ಅಗತ್ಯ ವಿಧಿವಿಧಾನಗಳನ್ನು ಇನ್ನೂ ಪೂರ್ಣಗೊಳಿಸಿಲ್ಲ.

ಮೈಸೂರು ನಗರ

ಚಿತ್ರ:Chamudi-hills.jpg
ಚಾಮುಂಡಿ ಬೆಟ್ಟದ ದೇವಸ್ಥಾನಗಳಿಗೂ ಸಹ ಮೈಸೂರು ಪ್ರಸಿದ್ಧ

ಮೈಸೂರು ನಗರ ಸಮುದ್ರ ಮಟ್ಟದಿಂದ ೭೭೦ ಮೀ ಎತ್ತರದಲ್ಲಿದೆ, ಹಾಗೂ ಬೆಂಗಳೂರು ನಗರದಿಂದ ೧೪೦ ಕಿಮೀ ದೂರದಲ್ಲಿದೆ. ಮೈಸೂರಿನಲ್ಲಿ ಪ್ರತಿ ವರ್ಷ ಹತ್ತು ದಿನ-ಒಂಬತ್ತು ರಾತ್ರಿಗಳವರೆಗೆ ದಸರಾ ಅಥವಾ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.. ಇದು ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಲ್ಲಿ ನಡೆಯುವುದು.

ಭಾರತದ ಅತಿ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾಲಯ ಇದೇ ನಗರದಲ್ಲಿದೆ. ಇತರ ಸಂಶೋಧನಾ ಸಂಸ್ಥೆಗಳೆಂದರೆ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಕೇಂದ್ರ (ಸಿಎಫ್‌ಟಿಆರ್‌ಐ), ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್‌ಆರ್‌ಎಲ್), ಭಾರತೀಯ ಭಾಷಾ ಸಂಸ್ಥಾನ http://www.ciil.org/.

ಆಕರ್ಷಣೆಗಳು

ಚಾಮುಂಡಿ ಬೆಟ್ಟದ ಮಹಿಷಾಸುರ

ಮೈಸೂರು ನಗರದಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರಿಗೆ ಅರಮನೆಗಳ ನಗರ ಎಂದೂ ಸಹ ಹೆಸರು. ಈ ಅರಮನೆಗಳಲ್ಲಿ ಕೆಲವು:

  • ಮುಖ್ಯ ಮೈಸೂರು ಅರಮನೆ: ಮುಖ್ಯ ಮೈಸೂರು ಅರಮನೆ, ಅಥವಾ "ಅಂಬಾ ವಿಲಾಸ", ೧೮೯೭ ರಲ್ಲಿ ಕಟ್ಟಲಾರಂಭಿಸಿ ೧೯೧೨ ರಲ್ಲಿ ಸಿದ್ಧವಾದ ಅರಮನೆ. ಪ್ರತಿ ಭಾನುವಾರ ಸಂಜೆ ಸಾವಿರಾರು ದೀಪಗಳಿಂದ ಸುಂದರ ದೃಶ್ಯ೩೬೦° ನೋಟ ನೀಡುವ ಅರಮನೆ.
  • ರಾಜೇಂದ್ರ ವಿಲಾಸ್: ಬೇಸಿಗೆ ಅರಮನೆ ಎಂದೂ ಹೆಸರು, ಚಾಮುಂಡಿ ಬೆಟ್ಟದ ಮೇಲೆ ಇದೆ.
  • ಜಗನ್ಮೋಹನ ಅರಮನೆ: ಜಗನ್ಮೋಹನ ಅರಮನೆ ಈಗ ಒಂದು ಕಲಾ ಸಂಗ್ರಹಾಲಯ. ರಾಜಾ ರವಿ ವರ್ಮ ಮೊದಲಾದ ಅನೇಕ ಪ್ರಸಿದ್ಧ ಕಲಾವಿದರ ಕೃತಿಗಳನ್ನು ಇಲ್ಲಿ ಕಾಣಬಹುದು.
  • ಜಯಲಕ್ಷ್ಮಿ ವಿಲಾಸ್: ಈಗ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಆವರಣದಲ್ಲಿದೆ.
  • ಲಲಿತ ಮಹಲ್: ಈಗ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಡೆಸುವ ಹೋಟೆಲ್ ಆಗಿ ಪರಿವರ್ತಿತವಾಗಿದೆ.

ಮುಖ್ಯ ಮೈಸೂರು ಅರಮನೆಯ ಉಸ್ತುವಾರಿ ಈಗ ಕರ್ನಾಟಕ ಸರ್ಕಾರದ ಕೈಯಲ್ಲಿ ಇದ್ದರೂ ಅರಮನೆಯ ಒಂದು ಭಾಗವನ್ನು ಹಿಂದಿನ ರಾಜಮನೆತನಕ್ಕೆ ಬಿಟ್ಟುಕೊಡಲಾಗಿದೆ. [೧]

ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಇನ್ನೊಂದು ಚಾಮುಂಡಿ ಬೆಟ್ಟ. ಇದು ಇಲ್ಲಿನ ದೇವಸ್ಥಾನಗಳು (ಮುಖ್ಯವಾಗಿ ಚಾಮುಂಡೇಶ್ವರಿ ದೇವಾಲಯ), ದೊಡ್ಡ ನಂದಿಯ ವಿಗ್ರಹ, ಮತ್ತು ಮಹಿಷಾಸುರನ ಪ್ರತಿಮೆಗೆ ಹೆಸರಾಗಿದೆ.

ಮೈಸೂರಿನ ಚಾಮರಾಜೇಂದ್ರ ವನ್ಯ ಮೃಗಾಲಯ, ಅಥವಾ "ಮೈಸೂರು ಝೂ", ಭಾರತದ ದೊಡ್ಡ ಮೃಗಾಲಯಗಳಲ್ಲಿ ಒಂದು. ಇತ್ತೀಚೆಗೆ ಕೆಲವು ಪ್ರಾಣಿಗಳು ನಿಗೂಢವಾಗಿ ಸಾವಿಗೀಡಾಗಿದ್ದು ಈ ಮೃಗಾಲಯ ಸ್ವಲ್ಪ ವಿವಾದಕ್ಕೆ ಸಿಲುಕಿತ್ತು.

ಮೈಸೂರಿನ ಆಕರ್ಷಣೆಗಳಲ್ಲಿ ಇನ್ನೊಂದು ಮಾನಸಗಂಗೋತ್ರಿ (ಮೈಸೂರು ವಿಶ್ವವಿದ್ಯಾಲಯದ ಆವರಣ). ಇನ್ನು ಕೆಲವು ಸ್ಥಳಗಳೆಂದರೆ ನೈಸರ್ಗಿಕ ಚರಿತ್ರೆ ವಸ್ತುಸಂಗ್ರಹಾಲಯ, ರೈಲ್ವೇ ವಸ್ತುಸಂಗ್ರಹಾಲಯ, ಕಲಾ ಮಂದಿರ, ಕುಕ್ಕರಹಳ್ಳಿ ಕೆರೆ, ಪುಷ್ಪಕಾಶಿ (ಪುಷ್ಪೋದ್ಯಾನ), ಕಾರಂಜಿ ಕೆರೆ, ಮೈಸೂರು ರೇಷ್ಮೆ ಕಾರ್ಖಾನೆ ಮುಂತಾದವು.

ತಿಂಡಿ ತಿನಿಸುಗಳ ವಿಷಯದಲ್ಲಿ ಮೈಸೂರಿನ - ಮೈಲಾರಿ ದೋಸೆ, ಮೈಸೂರು ಪಾಕ್; ಮೈಸೂರು ಮಲ್ಲಿಗೆ , ಮೈಸೂರು ವಿಲ್ಲೆದ ಎಲೆ , ಮೈಸೂರು ರೇಷ್ಮೆ ಮತ್ತು ಗಂಧದ ಎಣ್ಣೆ, ಸೋಪು ಪ್ರಸಿದ್ದಿ.

ಮೈಸೂರು ನಗರ ಪ್ರದೇಶಗಳು

ಮೈಸೂರು ನಗರದ ಕೆಲವು ಪ್ರಮುಖ ಪ್ರದೇಶಗಳು

  • ಸಂತೇಪೇಟೆ
  • ಕೃಷ್ಣರಾಜ ಮೊಹಲ್ಲ
  • ನಜರ್ ಬಾದ್
  • ಕ್ಯಾತಮಾರನಹಳ್ಳಿ (ಕಂಠೀರವ ನರಸಿಂಹರಾಜಪುರ)
  • ಲಷ್ಕರ್ ಮೊಹಲ್ಲ
  • ಇಟ್ಟಿಗೆಗೂಡು
  • ಅಶೋಕಪುರಂ
  • ಶ್ರೀರಾಮಪುರ
  • ಜಯನಗರ
  • ಕುವೆಂಪುನಗರ
  • ಸರಸ್ವತಿಪುರ
  • ವಿದ್ಯಾರಣ್ಯಪುರ
  • ಸಿದ್ದಾರ್ಥನಗರ
  • ವಿವೇಕಾನಂದನಗರ
  • ರಾಮಕೃಷ್ಣನಗರ
  • ಶಾರದದೇವಿನಗರ
  • ತೊಣಚಿಕೊಪ್ಪಲು
  • ಮಾನಸಗಂಗೋತ್ರಿ
  • ಜಯಲಕ್ಷ್ಮಿಪುರಂ
  • ಒಂಟಿಕೊಪ್ಪಲು (ವಾಣಿ ವಿಲಾಸ ಮೊಹಲ್ಲ)
  • ಗೋಕುಲಂ
  • ಯಾದವಗಿರಿ
  • ಬೃಂದಾವನ ಬಡಾವಣೆ
  • ಹೆಬ್ಬಾಳು
  • ವಿಜಯನಗರ
  • ಜೆ.ಪಿ.ನಗರ
  • ಶಿವರಾಮಪೇಟೆ
  • ವೀರನಗೆರೆ (ಗಾಂಧಿನಗರ)
  • ಕನಕದಾಸನಗರ
  • ರೂಪನಗರ
  • ದೀಪನಗರ

ಸಮೀಪದ ಸ್ಥಳಗಳು

ದರಿಯಾ ದೌಲತ್ - ಶ್ರೀರಂಗಪಟ್ಟಣದ ಟೀಪುವಿನ ಬೇಸಿಗೆ ಅರಮನೆ
  • ಶ್ರೀರಂಗಪಟ್ಟಣ, ಕೆಲಕಾಲ ಮೈಸೂರು ಸಂಸ್ಥಾನದ ರಾಜಧಾನಿ. ಇಲ್ಲಿರುವ ಕೋಟೆ, ರಂಗನಾಥಸ್ವಾಮಿಯ ದೇವಾಲಯ, ಹಾಗೂ ದರಿಯಾ ದೌಲತ ನಂಥ ಸ್ಮಾರಕಗಳಿಗೆ ಇದು ಹೆಸರಾಗಿದೆ.
  • ಕಾವೇರಿ ನದಿಗೆ ಕಟ್ಟಲಾಗಿರುವ ಕೃಷ್ಣರಾಜಸಾಗರ ಅಣೆಕಟ್ಟು ಮತ್ತು ಸಮೀಪದ ಬೃಂದಾವನ ಉದ್ಯಾನ.
  • ಗೋಸಾಯಿ ಘಾಟ್, ಸಂಗಮ
  • ನೀಲಗಿರಿ ಬೆಟ್ಟಗಳು
  • ತಲಕಾಡು
  • ಬಂಡಿಪುರ ಅಭಯಾರಣ್ಯ
  • ಮದುಮಲೈ ಕಾಡುಗಳು
  • ನಾಗರಹೊಳೆ ಅಭಯಾರಣ್ಯ
  • ರಂಗನತಿಟ್ಟು ಪಕ್ಷಿಧಾಮ
  • ಕಬಿನಿ: ಟಾಟ್ಲರ್ ಪ್ರವಾಸಿ ಬೋಧೆಯಲ್ಲಿ ಪ್ರಪಂಚದ ಐದು ಅತ್ಯುತ್ತಮ ವನ್ಯಧಾಮಗಳಲ್ಲಿ ಒಂದೆಂದು ಗುರುತಿಸಲಾಗಿದೆ
  • ಸೋಮನಾಥಪುರ: ಚಾರಿತ್ರಿಕ ಹಾಗೂ ಪುರಾತತ್ವಶಾಸ್ತ್ರದ ಪ್ರಾಮುಖ್ಯತೆಯಿರುವ ದೇವಾಲಯ ಇಲ್ಲಿದೆ
  • ಬಲಮುರಿ ಮತ್ತು ಎಡಮುರಿ
  • ಹಿಮವದ್ಗೋಪಾಲಸ್ವಾಮಿಬೆಟ್ಟ
  • ಬಿಳಿಗಿರಿರಂಗನ ಬೆಟ್ಟ
  • ಕುಂತಿ ಬೆಟ್ಟ
  • ಮೇಲುಕೋಟೆ

ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು

ಮೈಸೂರಿನ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ ಪಟ್ಟಿ
ವಿಶ್ವವಿದ್ಯಾಲಯಗಳು ಮೈಸೂರು ವಿಶ್ವವಿದ್ಯಾಲಯ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ, ಡಾ. ಗಂಗೂಭಾಯಿ ಹಾನಗಲ್ ಕರ್ನಾಟಕ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿಶ್ವವಿದ್ಯಾಲಯ ಸಂಶೋಧನಾ ಸಂಸ್ಥೆಗಳು ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಶನಾ ಸಂಸ್ಥೆ (ಸಿ ಎಫ್ ಟಿ ಆರ್ ಐ), ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ (ಸಿ ಐ ಐ ಎಲ್), ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿ ಎಫ ಆರ್ ಎಲ್)
ಇಂಜಿನಿಯರಿಂಗ್ ಕಾಲೇಜುಗಳು ನ್ಯಾಷನಲ್ ಇನ್ಸ್ಟಿಟ್ಯೂಟ್ ಅಫ್ ಇಂಜಿನಿಯರಿಂಗ್ (NIE), ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಅಫ್ ಇಂಜಿನಿಯರಿಂಗ್ (SJCE), ವಿದ್ಯಾವರ್ಧಕ ಕಾಲೇಜ್ ಆಫ್ ಇ೦ಜಿನಿಯರಿ೦ಗ್ (VVCE), ವಿದ್ಯಾವಿಕಾಸ ಇನ್ಸ್ಟಿಟ್ಯೂಟ್ ಅ೦ಡ್ ಎಜ್ಯುಕೇಶನಲ್ ಟೆಕ್ನೊಲಜಿ (VVIET), ಗೀತ ಶಿಶು ಶಿಕ್ಷಣ(ಹುಡುಗಿಯರು ಮಾತ್ರ)(GSS),ಮಹಾರಾಜ ಇನ್ಸ್ಟಿಟ್ಯೂಟ್ ಅಫ್ ಟೆಕ್ನೊಲಜಿ(MIT)
ವೈದ್ಯಕೀಯ ಕಾಲೇಜುಗಳು ಮೈಸೂರು ಮೆಡಿಕಲ್ ಕಾಲೇಜು (MMC), ಜೆ ಎಸ್ ಎಸ್ ಮೆಡಿಕಲ್ ಕಾಲೇಜು(JSS)
ದಂತ ವೈದ್ಯಕೀಯ ಕಾಲೇಜುಗಳು ಜೆ ಎಸ್ ಎಸ್ ಡೆಂಟಲ್ ಕಾಲೇಜು, ಫಾರೂಕಿಯಾ ಡೆಂಟಲ್ ಕಾಲೇಜು
ಕಾನೂನು ಜೆ ಎಸ್ ಎಸ್ ಲಾ ಕಾಲೇಜು, ವಿದ್ಯಾವರ್ಧಕ, ಶಾರದಾ ವಿಲಾಸ
ಕಲೆ, ವಾಣಿಜ್ಯ, ಮತ್ತು ವಿಜ್ಞಾನ ಕಾಲೇಜುಗಳು ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು, ಯುವರಾಜ ಕಾಲೇಜು, ಮಹಾಜನ ಕಾಲೇಜು, ಜೆ.ಎಸ್.ಎಸ್ ಕಾಲೇಜು, ಬನುಮಯ್ಯ ಕಾಲೇಜು, ಟೆರೆಶಿಯನ್ ಕಾಲೇಜು,ಟಿ.ಟಿ.ಎಲ್. ಕಾಲೇಜು,ಮರಿಮಲ್ಲಪ್ಪ ಕಾಲೇಜು, ಎಮ್ ಎಮ್ ಕೆ ಅ೦ಡ್ ಎಸ್ ಡಿ ಎಮ್ ಕಾಲೇಜು

ಸಂಸ್ಕೃತ ಕಾಲೇಜು- ಮಹಾರಾಜ ಸಂಸ್ಕೃತ ಪಾಠಶಾಲೆ, ಬನಮಯ್ಯ ಕಾಲೇಜು ಪಕ್ಕ್ಕಾಅ,

ಸಾರಿಗೆ ವ್ಯವಸ್ಥೆ

ಮೈಸೂರು ನಗರ ಸುತ್ತಲ ಸ್ಥಳಗಳಿಗೆ ರೈಲ್ವೆ ಜಂಕ್ಷನ್. ರೈಲ್ವೇ ಮಾರ್ಗಗಳು ಮೈಸೂರನ್ನು ಮಂಡ್ಯದ ಮೂಲಕ ಬೆಂಗಳೂರಿಗೆ (ಉತ್ತರಪೂರ್ವ ದಿಕ್ಕಿನಲ್ಲಿ), ಉತ್ತರಪಶ್ಚಿಮಕ್ಕೆ ಹಾಸನಕ್ಕೆ ಮತ್ತು ದಕ್ಷಿಣಪೂರ್ವದಲ್ಲಿ ಚಾಮರಾಜನಗರಕ್ಕೆ ಸಂಪರ್ಕಿಸುತ್ತವೆ. ರಸ್ತೆ ಸಂಪರ್ಕ ಮೈಸೂರಿನಿಂದ ಕರ್ನಾಟಕದ ಹಾಗೂ ನೆರೆಯ ರಾಜ್ಯಗಳ ವಿವಿಧೆಡೆಗಳಿಗೆ ಇದೆ.

ಕೆಲವು ವರ್ಷಗಳ ಹಿಂದೆ ಮೈಸೂರಿನ ಬಳಿ ಇರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನ ವ್ಯವಸ್ಥೆ ಇತ್ತು. ಈಗ ಈ ವಿಮಾನ ನಿಲ್ದಾಣವನ್ನು ಉಪಯೋಗಿಸಲಾಗುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲು ಇತ್ತೀಚೆಗೆ (ಡಿಸೆಂಬರ್ ೨೦೦೫)ಕಾರ್ಯಾರಂಭ ಮಾಡಿವೆ.

ಈಗ ಮ೦ಡಕಳ್ಳಿ ವಿಮಾನ ನಿಲ್ದಾಣವು ಶುರುವಾಗಿದ್ದು, ಬೆ೦ಗಳೂರಿಗೆ ಕಿ೦ಗ್ಫಫಿಶರ್ ನಿ೦ದ ವಿಮಾನ ವ್ಯವಸ್ಥೆ ಇದೆ.

ಜಿಲ್ಲೆಯ ಪ್ರಮುಖರು

ಮೈಸೂರು ಜಿಲ್ಲೆ

ಮೈಸೂರು ಜಿಲ್ಲೆಯ ಉತ್ತರಪೂರ್ವಕ್ಕೆ ಮಂಡ್ಯ ಜಿಲ್ಲೆ, ದಕ್ಷಿಣಪೂರ್ವಕ್ಕೆ ಚಾಮರಾಜನಗರ ಜಿಲ್ಲೆ, ದಕ್ಷಿಣಕ್ಕೆ ತಮಿಳುನಾಡು ರಾಜ್ಯ, ದಕ್ಷಿಣಪಶ್ಚಿಮಕ್ಕೆ ಕೇರಳ ರಾಜ್ಯ, ಪಶ್ಚಿಮಕ್ಕೆ ಕೊಡಗು ಜಿಲ್ಲೆ ಮತ್ತು ಉತ್ತರಕ್ಕೆ ಹಾಸನ ಜಿಲ್ಲೆಗಳಿವೆ. ಮೈಸೂರು ಜಿಲ್ಲೆಯ ವಿಸ್ತೀರ್ಣ ೬,೨೬೮ ಚದರ ಕಿಮೀ, ಮತ್ತು ೨೦೦೧ ರ ಜನಗಣತಿಯ ಪ್ರಕಾರ ಜನಸಂಖ್ಯೆ ೨೬,೨೪,೯೧೧ - ೧೯೯೧ ರಿಂದ ಶೇಕಡ ೧೫.೦೪ ರ ಹೆಚ್ಚಳ.

ಮೈಸೂರು ಜಿಲ್ಲೆ ದಖ್ಖನ ಪ್ರಸ್ತಭೂಮಿಯ ಮೇಲಿದೆ, ಮತ್ತು ಅದರ ಉತ್ತರಪಶ್ಚಿಮ ಮತ್ತು ಪೂರ್ವ ಭಾಗಗಳ ಮೂಲಕ ಹರಿಯುವ ಕಾವೇರಿ ನದಿಯ ಜಲಾನಯನ ಪ್ರದೇಶದಲ್ಲಿ ಇದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣರಾಜಸಾಗರ ಅಣೆಕಟ್ಟು ಜಿಲ್ಲೆಯ ಉತ್ತರದಲ್ಲಿ ಇದೆ. ಬಂಡಿಪುರ ಅಭಯಾರಣ್ಯ ಮೈಸೂರು ಜಿಲ್ಲೆಯಲ್ಲಿ ಇದ್ದರೆ ನಾಗರಹೊಳೆ ಅಭಯಾರಣ್ಯ ಭಾಗಶಃ ಮೈಸೂರು ಜಿಲ್ಲೆಯಲ್ಲಿ ಮತ್ತು ಭಾಗಶಃ ಪಕ್ಕದ ಕೊಡಗು ಜಿಲ್ಲೆಯಲ್ಲಿ ಇದೆ.

ಜಿಲ್ಲೆಯ ಪ್ರಮುಖರಲ್ಲಿ ಜನಪ್ರಿಯರಾಗಿರುವ ಈರ್ವರು ಕನ್ನಡ ಕಾದಂಬರಿಕಾರ್ತಿಯರ ಹೆಸರುಗಳನ್ನು ಇಲ್ಲಿ ನಾವು ಉಲ್ಲೇಖಿಸಬಹುದಾಗಿದೆ. ಓರ್ವರು, ಕಾದಂಬರಿಕಾರ್ತಿಯಷ್ಟೇ ಅಲ್ಲದೆ ರಾಜ್ಯಮಟ್ಟದ ನೋಂದಾಯಿಸಲ್ಪಟ್ಟ ಮಹಿಳಾ ಸಂಘಟನೆಯಾದ ಸ್ತ್ರೀಶಕ್ತಿ ಮಹಿಳಾ ಪ್ರತಿಷ್ಠಾನ ಟ್ರಸ್ತ್ ನ ಸ್ಥಾಪಕರೂ ಹಾಗೂ ಪ್ರಧಾನ ಅಧ್ಯಕ್ಷರೂ ಆದ ಶ್ರೀಮತಿ ಎಸ್. ಮಂಗಳಾ ಸತ್ಯನ್. ಇವರು ಈವರೆಗೆ ನಲವತ್ತಕ್ಕೂ ಹೆಚ್ಚು ಕಾದಂಬರಿಗಳನ್ನು, ನೂರ ಐವತ್ತಕ್ಕೂ ಹೆಚ್ಚು ಸಣ್ಣ ಕಥೆಗಳು, ನೂರಾರು ಲೇಖನಗಳು, ನಾಟಕಗಳನ್ನೂ ರಚಿಸಿರುವುದಲ್ಲದೆ, ನಾಲ್ಕು ಸ್ಮರಣ ಸಂಚಿಕೆಗಳನ್ನೂ ಸಂಪಾದಿಸಿದ್ದಾರೆ. ಅಲ್ಲದೆ, ಶ್ರೀಮತಿ ಮಂಗಳಾ ಸತ್ಯನ್ ೨೦೦೨ ರ ಮೇ ೨೫ ಮತ್ತು ೨೬ ರಂದು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆದ ೬ ನೇ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಶ್ರೀಮತಿ ಮಂಗಳಾ ಸತ್ಯನ್ ರವರ "ಭಾಗ್ಯ ಜ್ಯೋತಿ", "ಮುಗ್ಧ ಮಾನವ", "ಬಿಸಿಲು ಬೆಳದಿಂಗಳು" (ಕಾದಂಬರಿಯ ಹೆಸರು "ಆ ಮುಖ"), ಮತ್ತು "ಮುರಳಿಗಾನ ಅಮೄತಪಾನ" ಕಾದಂಬರಿಗಳು ಚಲನಚಿತ್ರಗಳಾಗಿವೆ. ಅಲ್ಲದೆ, ಇವರು "ಹೂವೊಂದು ಬೇಕು ಬಳ್ಳಿಗೆ" ಮತ್ತು "ಸ್ವಾತಿ" ಚಲನಚಿತ್ರಗಳಿಗೆ ಕಥೆ ಹಾಗೂ ಸಂಭಾಷಣೆ ಯನ್ನು ರಚಿಸಿದ್ದಾರೆ. ಅಷ್ಟೇ ಜನಪ್ರಿಯರಾಗಿರುವ ಮತ್ತೋರ್ವ ಕಾದಂಬರಿಕಾರ್ತಿ ಶ್ರೀಮತಿ ಆರ್ಯಾಂಬ ಪಟ್ಟಾಭಿ ಅವರು. ಆರ್ಯಾಂಬ ಅವರ ಕೆಲವು ಕಾದಂಬರಿಗಳೂ ಕನ್ನಡ ಚಲನಚಿತ್ರಗಳಾಗಿ ರೂಪುಗೊಂಡಿವೆ.

ಇದನ್ನೂ ನೋಡಿ

ಬಾಹ್ಯ ಅಂತರಜಾಲ ತಾಣಗಳು

ಆಧಾರ/ಆಕರಗಳು

  1. http://www.mysorepalace.in/act.doc ಮೈಸೂರು ಅರಮನೆ ಕಾಯ್ದೆ

ಟೆಂಪ್ಲೇಟು:Link FA

"https://kn.wikipedia.org/w/index.php?title=ಮೈಸೂರು&oldid=301369" ಇಂದ ಪಡೆಯಲ್ಪಟ್ಟಿದೆ