ಮಂಜರಾಬಾದ್ ಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
{{ಕರ್ನಾಟಕದ ಕೋಟೆಗಳು}}
೧೫ ನೇ ಸಾಲು: ೧೫ ನೇ ಸಾಲು:


== ಉಲ್ಲೇಖಗಳು ==
== ಉಲ್ಲೇಖಗಳು ==
{{ಕರ್ನಾಟಕದ ಕೋಟೆಗಳು}}

[[Category: ಇತಿಹಾಸ]]
[[Category: ಇತಿಹಾಸ]]
[[Category: ಸಂಸ್ಕೃತಿ]]
[[Category: ಸಂಸ್ಕೃತಿ]]

೧೫:೩೩, ೧ ನವೆಂಬರ್ ೨೦೧೭ ನಂತೆ ಪರಿಷ್ಕರಣೆ

ಕೋಟೆಯ ಮುಖ್ಯ ದ್ವಾರ

ಮಂಜರಾಬಾದ್ ಕೋಟೆ ಬೆಂಗಳೂರು - ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮುಂದಕ್ಕೆ ೫ ಕಿ.ಮೀ ದೂರದಲ್ಲಿರುವ ದೋಣಿಗಾಲ್ ಎಂಬ ಊರಿನ ಸಣ್ಣ ಗುಡ್ಡದ ಮೇಲೆ ಇದೆ. ಇದು ಶಿರಾಡಿ ಘಾಟಿ ಹಾಗು ಬಿಸಿಲೆ ಘಾಟಿ ರಸ್ತೆಗಳ ಕವಲಿನಲ್ಲಿ ಇದೆ.

ಕೋಟೆಯ ಹಿನ್ನೆಲೆ

ಮಂಜರಾಬಾದ್ ಕೋಟೆಯನ್ನು ಟಿಪ್ಪು ಸುಲ್ತಾನ್ ೧೭೮೫-೧೭೯೨ರ ನಡುವೆ ನಿರ್ಮಿಸಿದನು[೧]. ನಾಲ್ಕನೇ ಆಂಗ್ಲ-ಮೈಸೂರು ಯುದ್ಧದಲ್ಲಿ ಈ ಕೋಟೆಯನ್ನು ಬಳಸಲಾಯಿತು. ಶ್ರೀರಂಗಪಟ್ಟಣದ ಪತನದ ನಂತರ ಬ್ರಿಟೀಷರು ಈ ಕೋಟೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡ ನಂತರ ಅದರ ಕೆಲವು ಭಾಗಗಳನ್ನು ನಾಶಮಾಡಿದರೆನ್ನಲಾಗಿದೆ.

ಕೋಟೆಯ ವಿನ್ಯಾಸ

ಕೋಟೆಯ ಮುಖ್ಯ ದ್ವಾರದಿಂದ ಕೋಟೆಯ ಒಳ ನೋಟ
ಕೋಟೆಯ ಒಳ ನೋಟ-೧

ಸುಮಾರು ೨೫೦ ಮೆಟ್ಟಿಲುಗಳನ್ನು ಏರಿ ಮಂಜರಾಬಾದ್ ಕೋಟೆಯನ್ನು ತಲುಪಬಹುದು. ಸಮುದ್ರ ಮಟ್ಟದಿಂದ ಸುಮಾರು ೩೨೪೦ ಅಡಿ ಎತ್ತರದಲ್ಲಿದ್ದು, ಸುಮಾರು ೫ ಎಕರೆ ಪ್ರದೇಶದಲ್ಲಿ ಎಂಟು ಕೋನದ ನಕ್ಷಾತ್ರಾಕಾರದಲ್ಲಿ ನಿರ್ಮಿಸಲ್ಪಟ್ಟಿದೆ[೨]. ಇದನ್ನು ಇಸ್ಲಾಮಿಕ್ ವಾಸ್ತು ಶೈಲಿಯಲ್ಲಿ ನಿರ್ಮಿಸಲಾಗಿದ್ದು ಕೋಟೆಯ ಒಳಗಡೆ ನೀರಿನ ಕೊಳ, ಮದ್ದು ಗುಂಡು ಸಂಗ್ರಹಿಸುವ ಜಾಗ, ಊಟದ ಗೃಹ, ಸ್ನಾನದ ಗೃಹ, ಶಯನ ಗೃಹ ಹಾಗು ಶೌಚಾಲಯಗಳಿವೆ. ಈ ಕೋಟೆಯಲ್ಲಿ ಹಲವಾರು ಸುರಂಗ ಮಾರ್ಗಗಳು ಇವೆಯೆಂದು ಹೇಳಲಾಗುತ್ತದೆ. ಅವು ಶ್ರೀರಂಗಪಟ್ಟಣದವರೆಗೂ ತಲುಪಿಸುತ್ತದೆ ಎಂದು ಹೇಳಲಾಗುತ್ತದೆ, ಆದರೆ ಈವರೆಗೆ ಯಾರೂ ಅದರಲ್ಲಿ ಸಂಚರಿಸಿದ ಮಾಹಿತಿಯಿಲ್ಲ.


ಉಲ್ಲೇಖಗಳು

Forts of Karnataka. ()

ಈ ಟೆಂಪ್ಲೇಟ್ ಅನ್ನು ಕರ್ನಾಟಕದ ಕೋಟೆಗಳು ಲೇಖನದಲ್ಲಿ ಬಳಸಲಾಗಿದೆ.

  1. http://www.holidayiq.com/Manjarabad-Fort-Sakleshpur-Sightseeing-628-732.html
  2. http://www.starforts.com/manjarabad.html