ಬಿ.ಎಸ್. ಯಡಿಯೂರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಟ್ಯಾಗ್: 2017 source edit
೯೯ ನೇ ಸಾಲು: ೯೯ ನೇ ಸಾಲು:
==ಉಲ್ಲೇಖಗಳು==
==ಉಲ್ಲೇಖಗಳು==
{{Reflist|2}}
{{Reflist|2}}
==ಹೊರ ಕೊಂಡಿಗಳು==
{{commons category|B. S. Yeddyurappa}}
* [http://yeddyurappa.in/ Yeddyurappa's personal Website]



{{commons category|B. S. Yeddyurappa}}
{{ಕರ್ನಾಟಕದ ಮುಖ್ಯಮಂತ್ರಿಗಳು}}
{{ಕರ್ನಾಟಕದ ಮುಖ್ಯಮಂತ್ರಿಗಳು}}
[[ವರ್ಗ: ರಾಜಕಾರಣಿಗಳು]]
[[ವರ್ಗ: ರಾಜಕಾರಣಿಗಳು]]

೨೧:೧೯, ೧೭ ಮೇ ೨೦೧೮ ನಂತೆ ಪರಿಷ್ಕರಣೆ

ಬಿ.ಎಸ್. ಯಡಿಯೂರಪ್ಪ [೧]
ಬಿ.ಎಸ್. ಯಡಿಯೂರಪ್ಪ

ಕರ್ನಾಟಕದ ೨೯ನೆಯ ಮುಖ್ಯಮಂತ್ರಿ
ಹಾಲಿ
ಅಧಿಕಾರ ಸ್ವೀಕಾರ 
ಮೇ ೧೭, ೨೦೧೮
ಪೂರ್ವಾಧಿಕಾರಿ ಸಿದ್ದರಾಮಯ್ಯ
ಉತ್ತರಾಧಿಕಾರಿ ಹಾಲಿ ಸದಸ್ಯರು
ಮತಕ್ಷೇತ್ರ ಶಿಕಾರಿಪುರ

ಅಧಿಕಾರ ಅವಧಿ
ಮೇ ೩೦,೨೦೦೮ – ಜುಲೈ ೩೧, ೨೦೧೧
ಪೂರ್ವಾಧಿಕಾರಿ ರಾಷ್ಟ್ರಪತಿಯವರ ಆಡಳಿತ
ಉತ್ತರಾಧಿಕಾರಿ ಡಿ. ವಿ. ಸದಾನಂದ ಗೌಡ
ಮತಕ್ಷೇತ್ರ ಶಿಕಾರಿಪುರ

ಅಧಿಕಾರ ಅವಧಿ
ನವೆಂಬರ್ ೧೨, ೨೦೦೭ – ನವೆಂಬರ್ ೧೯, ೨೦೦೭
ಪೂರ್ವಾಧಿಕಾರಿ ಎಚ್. ಡಿ. ಕುಮಾರಸ್ವಾಮಿ
ಉತ್ತರಾಧಿಕಾರಿ ರಾಷ್ಟ್ರಪತಿಯವರ ಆಡಳಿತ
ಮತಕ್ಷೇತ್ರ ಶಿಕಾರಿಪುರ
ವೈಯಕ್ತಿಕ ಮಾಹಿತಿ
ಜನನ ಟೆಂಪ್ಲೇಟು:ಹುಟ್ಟಿದ ತಾ [೨]
ಬೂಕನಕೆರೆ, ಮಂಡ್ಯ ಜಿಲ್ಲೆ, ಕರ್ನಾಟಕ
ರಾಜಕೀಯ ಪಕ್ಷ ಬಿಜೆಪಿ
ಸಂಗಾತಿ(ಗಳು) (ದಿ)ಮೈತ್ರಾದೇವಿ
ಮಕ್ಕಳು ೨ ಗಂಡು ಮಕ್ಕಳು:
(ಬಿ.ವೈ.ರಾಘವೇಂದ್ರ
ವಿಜಯೇಂದ್ರ)
೩ ಹೆಣ್ಣು ಮಕ್ಕಳು:
(ಅರುಣಾದೇವಿ
ಪದ್ಮಾವತಿ
ಉಮಾದೇವಿ)
ವಾಸಸ್ಥಾನ ಬೆಂಗಳೂರು
ಧರ್ಮ ಹಿಂದು
ಜಾಲತಾಣ http://yeddyurappa.in
As of ಮೇ ೨೮, ೨೦೦೮
ಮೂಲ: [೧]

ಬಿ.ಎಸ್. ಯಡಿಯೂರಪ್ಪ (ಜನನ: ಫೆಬ್ರುವರಿ ೨೭, ೧೯೪೩) ಕರ್ನಾಟಕದ ೨೯ನೇ ಮುಖ್ಯಮಂತ್ರಿ ಹಾಗು ಭಾರತೀಯ ಜನತಾ ಪಕ್ಷದ ಮುಖಂಡ. ಇವರು ಕನಾ೯ಟಕ ವಿಧಾನಸಭೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ೨೦೦೮ ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ, ಎಸ್. ಬಂಗಾರಪ್ಪನವರನ್ನು ಸುಮಾರು ೪೬ ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ, ವಿಧಾನಸಭೆಯನ್ನು ಪ್ರವೇಶಿಸುವುದರ ಜೊತೆಗೆ ಬಿಜೆಪಿಗೆ ರಾಜ್ಯಾದ್ಯಂತ ಜಯ ತಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀತಿ೯ಗೆ ಪಾತ್ರರಾಗಿದ್ದಾರೆ.

ವೈಯಕ್ತಿಕ ಜೀವನ

ಬಿ.ಎಸ್.ಯಡಿಯೂರಪ್ಪನವರು ಫೆ. 27, 1943ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜಿಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ನಾಮಕರಣ ಮಾಡಲಾಗಿದೆ. ಯಡಿಯೂರಪ್ಪನವರು ಲಿಂಗಾಯತವನ್ನು ಅನುಸರಿಸುತ್ತಿದ್ದಾರೆ.[೩] ಇವರ ತಂದೆ ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪನವರಿಗೆ ನಾಲ್ಕು ವರ್ಷವಿರುವಾಗಲೇ ತಾಯಿ ವಿಧಿವಶರಾದರು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.

1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಶಿಕಾರಿಪುರಕ್ಕೆ ತೆರಳಿ, ವೀರಭದ್ರ ಶಾಸ್ತ್ರಿಯವರ ಶಂಕರ ಅಕ್ಕಿ ಗಿರಣಿಯಲ್ಲಿ ಗುಮಾಸ್ತರಾಗಿ ಸೇರಿದರು. 1967ರಲ್ಲಿ ಮೈತ್ರಾದೇವಿಯವರನ್ನು ವಿವಾಹವಾದರು. ನಂತರ ಶಿವಮೊಗ್ಗದಲ್ಲಿ ಹಾರ್ಡ್‍ವೇರ್ ಮಳಿಗೆಯನ್ನು ತೆರೆದರು. ವಿಜಯೇಂದ್ರ, ರಾಘವೇಂದ್ರ, ಅರುಣಾದೇವಿ, ಪದ್ಮಾವತಿ, ಉಮಾದೇವಿಯವರು ಯಡಿಯೂರಪ್ಪನವರ ಮಕ್ಕಳು. ರಾಘವೇಂದ್ರರವರು ಪ್ರಸ್ತುತ ಶಿಕಾರಿಪುರದ ಶಾಸಕರಾಗಿದ್ದಾರೆ. 2004ರಲ್ಲಿ ಪತ್ನಿ ಮೈತ್ರಾದೇವಿಯವರು ಮರಣ ಹೊಂದಿದರು.

ರಾಜಕೀಯ ಜೀವನ

ಬಿ.ಎಸ್.ಯಡಿಯೂರಪ್ಪನವರು ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದರು. 1970ರಲ್ಲಿ ಆರ್‍ಎಸ್‍ಎಸ್‍ನ ಶಿಕಾರಿಪುರ ಘಟಕದ ಕಾರ್ಯವಾಹರಾಗಿ ನೇಮಕಗೊಳ್ಳುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದರು. ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕರಾಗಿಯೂ ನೇಮಕಗೊಂಡರು. ನಂತರ 1972ರಲ್ಲಿ ಶಿಕಾರಿಪುರ ನಗರ ಪಾಲಿಕೆಗೆ ಚುನಾಯಿತರಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿತರಾದ ಯಡಿಯೂರಪ್ಪನವರು ಬಳ್ಳಾರಿ ಮತ್ತು ಶಿವಮೊಗ್ಗ ಜೈಲಿನಲ್ಲಿದ್ದರು. 1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು. 1983ರಲ್ಲಿ ಶಿಕಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ ಒಟ್ಟು ಆರು ಬಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾದರು. ಏಳು, ಎಂಟು, ಒಂಬತ್ತು, ಒಂಬತ್ತು, ಹತ್ತು, ಹನ್ನೆರಡು ಮತ್ತು ಹದಿಮೂರನೇ ವಿಧಾನಸಭೆಯ ಸದಸ್ಯರಾದರು. 1994ರ ವಿಧಾನಸಭೆ ಚುನಾವಣೆ ನಂತರ ವಿಧಾನಸಭೆಯ ಪ್ರತಿಪಕ್ಷ ನಾಯಕರಾದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಇವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಪುನಃ ವಿಧಾನಸಭೆಗೆ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾದರು.

2008ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರನ್ನು ಆಗ ಯಡಿಯೂರಪ್ಪನವರು 45,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಆಗ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ದೊರೆತು, ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರಕಾರ ಕರ್ನಾಟಕದಲ್ಲಿ ರಚನೆಗೊಂಡಿತು. ಮೇ 30, 2008ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಕರ್ನಾಟಕದ ಲೋಕಾಯುಕ್ತ ನೀಡಿದ ತನಿಖಾ ವರದಿಯಲ್ಲಿ ಯಡಿಯೂರಪ್ಪನವರ ಹೆಸರಿತ್ತು. ಆದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರಿಗೆ ಸೂಚಿಸಿತು. ಜುಲೈ 31, 2011ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದರು. ನಂತರ ನವೆಂಬರ್ 30, 2011ರಂದು ಶಾಸಕ ಸ್ಥಾನ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಯಡಿಯೂರಪ್ಪ ರಾಜೀನಾಮೆ ನೀಡಿದರು. 2011ರ ಏಪ್ರಿಲ್‍ನಲ್ಲಿ ಕರ್ನಾಟಕ ಜನತಾ ಪಕ್ಷ ಎಂಬ ನೂತನ ಪಕ್ಷವನ್ನು ನೋಂದಾಯಿಸಿದರು. 2012ರಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 2013ರ ಮೇನಲ್ಲಿ ಕರ್ನಾಟಕ ಜನತಾ ಪಕ್ಷದಿಂದ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರು.

ನವೆಂಬರ್ 2013ರಲ್ಲಿ ಯಾವುದೇ ಷರತ್ತಿಲ್ಲದೇ ಬಿಜೆಪಿಗೆ ಹಿಂದಿರುಗುವುದಾಗಿ ಯಡಿಯೂರಪ್ಪ ಘೋಷಿಸಿದರು. ಜನವರಿ 2, 2014ರಂದು ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸಿದರು. ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 3,63,305 ಅಂತರದಿಂದ ಜಯಗಳಿಸಿದರು.[೪]


ಕರ್ನಾಟಕದ ಮುಖ್ಯಮಂತ್ರಿ

ಯಡಿಯೂರಪ್ಪನವರು ನವೆಂಬರ್ ೧೨, ೨೦೦೭ ರಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲಿ, ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯೆನಿಸಿದರು.[೫]

ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು 2006ರಲ್ಲಿ ಜೆಡಿಎಸ್ ವಾಪಸ್ ಪಡೆಯಿತು. ನಂತರ ರಚನೆಗೊಂಡ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು. ಒಪ್ಪಂದದಂತೆ 2007ರ ಅಕ್ಟೋಬರ್‍ನಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಾದಾಗ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು. ಜೆಡಿಎಸ್ ನಡೆ ವಿರೋಧಿಸಿ ಯಡಿಯೂರಪ್ಪ ಮತ್ತು ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ನೀಡಿದರು. ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಅಕ್ಟೋಬರ್ 5ರಂದು ಬಿಜೆಪಿ ಹಿಂಪಡೆಯಿತು. ನಂತರ ರಾಷ್ಟ್ರಪತಿ ಆಡಳಿತ ಶುರುವಾಯಿತು. ನವೆಂಬರ್ 7ರಂದು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಮತ ಶಮನಗೊಂಡು ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡಿತು. ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು.

ಹೆಸರು ಬದಲಾವಣೆ

ಅಕ್ಟೋಬರ್ ತಿಂಗಳು, ೨೦೦೭ ರಲ್ಲಿ, ಅವರು ತಮ್ಮ ಹೆಸರನ್ನು, ಇಂಗ್ಲೀಷಿನಲ್ಲಿ B.S. Yeddyurappa ಎಂದು ಬದಲಾಯಿಸಿಕೊಂಡಿದ್ದಾರೆ. ಆದರೆ ಕನ್ನಡದಲ್ಲಿ ಮಾತ್ರ, ಮೊದಲಿನಂತೆಯೆ ಯಡಿಯೂರಪ್ಪ ಅಂತಲೇ ಇದೆ ಎಂದು ಖುದ್ದಾಗಿ ಯಡಿಯೂರಪ್ಪನವರೇ, ಪತ್ರಿಕಾಕರ್ತರಿಗೆ ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಅಲಂಕರಿಸಿದ ಹುದ್ದೆಗಳು

  • ೧೯೭೫ : ಶಿಕಾರಿಪುರ ಪುರಸಭೆ ಸದಸ್ಯರಾಗಿ ಆಯ್ಕೆ, ೧೯೭೭ರಲ್ಲಿ ಅಧ್ಯಕ್ಷ.
  • ೧೯೮೦ : ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ.
  • ೧೯೮೩ : ಮಾಜಿ ಸಚಿವ ವೆಂಕಟಪ್ಪ ಅವರನ್ನು ಸೋಲಿಸಿ ಮೊದಲ ಬಾರಿಗೆವಿಧಾನಸಭೆಪ್ರವೇಶ
  • ೧೯೮೫ :ರಿಂದ ೧೯೮೮ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ, ೧೯೮೮ರಲ್ಲಿ ರಾಜ್ಯಾಧ್ಯಕ್ಷ, ೧೯೯೨ ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ|
  • ೧೯೯೪ : ವಿಧಾನಸಭೆ ಪ್ರತಿಪಕ್ಷದ ನಾಯಕ
  • ೧೯೯೯ : ಮತ್ತೆ ರಾಜ್ಯಾಧ್ಯಕ್ಷ, ೨೦೦೦ ರಲ್ಲಿ ಮೇಲ್ಮನೆ ಸದಸ್ಯ
  • ೨೦೦೪ : ಐದನೇ ಬಾರಿಗೆ ವಿಧಾನಸಭೆ ಪ್ರವೇಶ, ಇನ್ನೊಮ್ಮೆ ಪ್ರತಿಪಕ್ಷದ ನಾಯಕ
  • ೨೦೦೬ : ಸಮ್ಮಿಶ್ರ ಸರ್ಕಾರ ರಚನೆ, ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ
  • ೨೦೦೭ : ನವೆಂಬರ್‌೧೨ರಿಂದ ೧೭ರವರೆಗೆ ೭ ದಿನ ಮಾತ್ರ ಮುಖ್ಯಮಂತ್ರಿಯಾಗಿದ್ದರು.
  • ೨೦೦೮ : ಮೇ ೩೦ರ ಶುಕ್ರವಾರ ಕರ್ನಾಟಕದ ೨೫ ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.
  • ೨೦೧೧ : ಜುಲೈ ೩೧ ರ ಸಾಯಂಕಾಲ, ೪-೨೯ ಕ್ಕೆ ಸರಿಯಾಗಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.
  • ೨೦೧೪ :೨೦೧೪ ರ ಲೋಕಸಭಾಚುನಾವಣೆಯಲ್ಲಿ 363,305 ಮತಗಳ ಅಂತರದಿಂದ ಲೋಕಸಭಾಸದಸ್ಯರಾಗಿ ಆಯ್ಕೆ.[೬]

ಉಲ್ಲೇಖಗಳು

ಹೊರ ಕೊಂಡಿಗಳು